ಗೂಂಡಾ ಆಗಿ 'ರೂಪಾಂತರ'ಗೊಂಡ ರಾಜ್‌ ಬಿ.ಶೆಟ್ಟಿ: ಫಸ್ಟ್‌ ಲುಕ್‌ ಪೋಸ್ಟರ್‌ನಲ್ಲಿ ಕಮಾಲ್‌!

Published : Jun 27, 2024, 05:42 PM ISTUpdated : Jun 28, 2024, 08:49 AM IST
ಗೂಂಡಾ ಆಗಿ 'ರೂಪಾಂತರ'ಗೊಂಡ ರಾಜ್‌ ಬಿ.ಶೆಟ್ಟಿ: ಫಸ್ಟ್‌ ಲುಕ್‌ ಪೋಸ್ಟರ್‌ನಲ್ಲಿ ಕಮಾಲ್‌!

ಸಾರಾಂಶ

ಮಮ್ಮುಟ್ಟಿ ಜೊತೆ ʻಟರ್ಬೋʼ ಚಿತ್ರದಲ್ಲಿ ನೆಗೆಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಜ್‌ ಶೆಟ್ರು, ಈ ಚಿತ್ರದಲ್ಲೂ ಸ್ಲಂ ಹಿನ್ನಲೆಯಿಂದ ಬಂದ ಗೂಂಡಾ ಪಾತ್ರದಲ್ಲಿ ಮಿಂಚಲಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಪ್ರಯೋಗ ಹಾಗೂ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟ ಹಾಗೂ ನಿರ್ದೇಶಕ ರಾಜ್‌ ಬಿ ಶೆಟ್ಟಿ ಈಗ ತಮ್ಮ ಹೊಸ ಸಿನೆಮಾವೊಂದರ ಬಿಗ್ ಅಪ್‌ಡೇಟ್‌ ಕೊಟ್ಟಿದ್ದಾರೆ. ವಿಶೇಷವೆಂದರೆ ರಾಜ್‌ ಚೊಚ್ಚಲ ನಿರ್ದೇಶನದ ಚಿತ್ರ ʼಒಂದು ಮೊಟ್ಟೆಯ ಕಥೆʼ ಹಾಗೂ ಹಿಟ್‌ ಚಿತ್ರ ʼಗರುಡ ಗಮನʼ ಚಿತ್ರತಂಡವು ಮತ್ತೆ ಈ ಸಿನಿಮಾದಲ್ಲಿ ಒಗ್ಗೂಡಿದೆ. ನಿನ್ನೆಯಷ್ಟೇ ತಮ್ಮ ಇನ್ಸ್ಟಾಗ್ರಾಂ ಖಾತೆಯ ಲೈವ್‌ನಲ್ಲಿ ಹೊಸ ಸಿನೆಮಾದ ಬಗ್ಗೆ ರಾಜ್‌ ಸುಳಿವು ಕೊಟ್ಟಿದ್ದರು. 

ಇಂದು ಈ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಅನ್ನು ತಮ್ಮ ಅಧಿಕೃತ ಇನ್ಸ್‌ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್‌ಪ್ರೈಸ್‌ ನೀಡಿದ್ದಾರೆ. ಇನ್ನು ವಿಶಿಷ್ಟವಾದ ಟೈಟಲ್‌ನಿಂದಲೇ ಈ ಚಿತ್ರ ಗಮನ ಸೆಳೆಯುತ್ತಿದ್ದು, ಈ ಚಿತ್ರಕ್ಕೆ  ʻರೂಪಾಂತರʼ ಎಂದು ಹೆಸರಿಡಲಾಗಿದೆ. ʻಮೆಟಮಾರ್ಫಸಿಸ್‌ʼ ಅಂದರೆ ರೂಂಪಾತರಕ್ಕೆ ಸಂಬಂಧಿಸಿದ ಥೀಮ್‌ನಲ್ಲಿ ಈ ಆಂಥಾಲಜಿಯ ಐದೂ ಚಿತ್ರಗಳೂ ವಿಭಿನ್ನವಾಗಿ ಮೂಡಿಬರಲಿದೆ ಎಂದು ಚಿತ್ರತಂಡವು ಮಾಹಿತಿ ನೀಡಿದೆ.
 


ಕುತೂಹಲ ಕೆರಳಿಸಿರುವ ಟೈಟಲ್‌ ರಿವೀಲ್‌ ಪೋಸ್ಟರ್: ಮಿಥಿಲೇಶ್‌ ಎಡವಲತ್ತ್‌ ʻರೂಪಾಂತರʼ ಚಿತ್ರದ ಕತೆ ಬರೆದಿದ್ದು, ಅವರೇ ಸಿನೆಮಾಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ರಾಜ್.ಬಿ. ಶೆಟ್ಟಿ ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಮಲಯಾಳಂನಿಂದ ಕನ್ನಡಕ್ಕೆ ಭಾಷಾಂತರಿಸಿದ್ದಾರೆ. ಸುಹಾನ್‌ ಪ್ರಸಾದ್‌, ಪಾರ್ಥ್‌ ಜಾನಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಬರೀಶ್‌ ಕಬ್ಬಿನಾಲೆ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಜನಪ್ರಿಯ ಸಂಗೀತ ನಿರ್ದೇಶಕ ಮಿಥುನ್‌ ಮುಕುಂದನ್‌ ಸಂಗೀತ ಚಿತ್ರಕ್ಕಿದೆ. ಮಿಥಿಲೇಶ್‌ ಅವರು ಮೂಲತಃ ಕೇರಳದವರಾಗಿದ್ದರೂ, ಬೆಂಗಳೂರಿನಲ್ಲೇ ತಮ್ಮ ಉನ್ನತ ವಿದ್ಯಾಭ್ಯಾಸವನ್ನು ಮಾಡಿದ್ದಾರೆ. ಒಂದೆರಡು ಮಲಯಾಳಂ ಸಿನೆಮಾಗಳಲ್ಲಿ ಅಸೋಸಿಯೇಟ್‌ ಡೈರೆಕ್ಟರ್‌ ಆಗಿಯೂ ಕೆಲಸ ಮಾಡಿದ್ದಾರೆ. ರೂಪಾಂತರ ಸಿನೆಮಾ ಟೈಟಲ್‌ ರಿವೀಲ್‌ ಪೋಸ್ಟರ್‌ನಲ್ಲೇ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ವಿಭಿನ್ನ ಪಾತ್ರದಲ್ಲಿ ರಾಜ್‌ ಬಿ. ಶೆಟ್ಟಿ: ಇತ್ತೀಚೆಗಷ್ಟೇ ಮಾಲಿವುಡ್‌ನ ಮೆಗಾಸ್ಟಾರ್‌ ಮಮ್ಮುಟ್ಟಿ ಜೊತೆ ʻಟರ್ಬೋʼ ಚಿತ್ರದಲ್ಲಿ ನೆಗೆಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಜ್‌ ಶೆಟ್ರು, ಈ ಚಿತ್ರದಲ್ಲೂ ಸ್ಲಂ ಹಿನ್ನಲೆಯಿಂದ ಬಂದ ಗೂಂಡಾ ಪಾತ್ರದಲ್ಲಿ ಮಿಂಚಲಿದ್ದಾರೆ. ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲೂ ಗೂಂಡಾ ಆಗಿ ರಗಡ್‌ ಲುಕ್‌ನಲ್ಲಿ ರಾಜ್ ಕಾಣಿಸಿಕೊಂಡಿದ್ದರು. 

ಟರ್ಬೋದಲ್ಲಿ ಟಫ್ ವಿಲನ್: ವೆಟ್ರಿವೇಲ್‌ ಷಣ್ಮುಗ ಸುಂದರ ಪಾತ್ರದಲ್ಲಿ ಮಿಂಚಿದ ರಾಜ್‌ ಬಿ ಶೆಟ್ಟಿ!

ನಟಿ ಶ್ವೇತಾ ಶ್ರೀನಿವಾಸ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ʻಕಥಾಸಂಗಮʼ ಆಂಥಾಲಜಿಯ ಜನಮನ್ನಣೆ ಗಳಿಸಿದ ಕಿರುಚಿತ್ರ ʻಉಚ್ಚವ್ವʼದ ನಿರ್ದೇಶಕ ಜೈಶಂಕರ್‌, ಭರತ್‌ ಜಿಬಿ, ಮುರುಳೀಧರ ಸಿಕೆ, ಸೋಮಣ್ಣ ಬೋಲೆಗಾಂವ್‌, ಲೇಖಾ, ಹನುಮಕ್ಕ, ಅಂಜನ್‌ ಭಾರದ್ವಾಜ್‌ ಮತ್ತಿತರು ನಟಿಸಿದ್ದಾರೆ. ಸಿನೆಮಾದ ಚಿತ್ರೀಕರಣ ಹಾಗೂ ತಾಂತ್ರಿಕ ಕಾರ್ಯಗಳು ಮುಗಿದಿದ್ದು, ಶೀಘ್ರದಲ್ಲೇ ರಿಲೀಸ್‌ ಆಗಲಿದೆ ಎಂದು ಚಿತ್ರತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ಪ್ರತಿ ಸಿನಿಮಾದಲ್ಲೂ‌ ರಾಜ್‌ ಬಿ.ಶೆಟ್ಟಿ ವಿಭಿನ್ನ ಅಭಿನಯದ ಮೂಲಕ ಸಿನಿರಸಿಕರ ಗಮನ ಸೆಳೆಯುತ್ತಿದ್ದು, ರೂಪಾಂತರದಲ್ಲಿ ಶೆಟ್ರ ಅಭಿನಯ ಹೇಗಿರಲಿದೆ ಎನ್ನುವ ಕುತೂಹಲ ಸದ್ಯ ಅಭಿಮಾನಿಗಳಲ್ಲಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!