ದ್ವಿಪಾತ್ರದಲ್ಲಿ ಉಪೇಂದ್ರ, ಆರು ವಿಭಿನ್ನ ಗೆಟಪ್‌ಗಳಲ್ಲಿ ರಮ್ಯಾ.. ರಕ್ತ ಕಾಶ್ಮೀರದ ಅನುಭವ ಹಂಚಿಕೊಂಡ ರಾಜೇಂದ್ರಸಿಂಗ್‌

Published : Oct 31, 2025, 01:17 PM IST
Upendra

ಸಾರಾಂಶ

ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರದಲ್ಲಿರುವ ಸಿಂಧೂ ನದಿ ದಂಡೆಯಲ್ಲೇ ಉಪೇಂದ್ರ- ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾದ ಚಿತ್ರೀಕರಣ ಮಾಡಿದ್ದೇವೆ ಎಂದರು ಹಿರಿಯ ನಿರ್ದೇಶಕ ರಾಜೇಂದ್ರಸಿಂಗ್‌ ಬಾಬು.

‘ನಾನು ನಿರ್ದೇಶಕನಾಗಿ 50 ವರ್ಷಗಳಾಗಿದೆ. ಈ ಹೊತ್ತಲ್ಲಿ ನನ್ನ ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಮೊದಲು ‘ರಕ್ತ ಕಾಶ್ಮೀರ’ ಚಿತ್ರ ಬಿಡುಗಡೆಯಾಗುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಹೊಂದಿರುವ ಚಿತ್ರವಿದು. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರದಲ್ಲಿರುವ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ’.

ಹೀಗೆ ಹೇಳಿದ್ದು ಹಿರಿಯ ನಿರ್ದೇಶಕ ರಾಜೇಂದ್ರಸಿಂಗ್‌ ಬಾಬು. ಅವರು ತಾವು ನಿರ್ದೇಶಿಸಿರುವ, ಉಪೇಂದ್ರ- ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾದ ಟ್ರೇಲರ್‌ ಬಿಡುಗಡೆಗೊಳಿಸಿ ಮಾತನಾಡಿದರು. ಈ ಕುರಿತು ಅವರು, ಉಪೇಂದ್ರ ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಮ್ಯ ಅವರು ಆರು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ ಹದಿನಾಲ್ಕು ನಾಯಕ ನಟರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ.

14 ನಾಯಕರು ಒಂದೇ ಹಾಡಿನಲ್ಲಿ

ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಒಂದೇ ಹಾಡಿನಲ್ಲಿ ಅಭಿನಯಿಸಿರುವುದು ಇತಿಹಾಸ ಎಂದರು. ಆದಿತ್ಯ, ‘ನಾನು ಈ ಚಿತ್ರದ ನಿರ್ಮಾಪಕನಾಗಿ ಕಾರ್ಯ ನಿರ್ವಹಿಸಿದ್ದೇನೆ’ ಎಂದರು. ವಿತರಕ ಮಾರ್ಸ್ ಸುರೇಶ್, ‘ವೀರ ಕಂಬಳ’ ನಿರ್ಮಾಪಕ ಅರುಣ್ ರೈ ತೋಡಾರ್, ಕೃಷ್ಣೇಗೌಡ ಇದ್ದರು.

ಇನ್ನು, ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.‌ ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ, ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ. ಅದರ ನಿರ್ಮೂಲನೆಗೆ‌ ಸಂಬಂಧಿಸಿದ ಕಥಾವಸ್ತುವನ್ನು ಈ ಚಿತ್ರ ಒಳಗೊಂಡಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬಿಗ್ ಬಜೆಟ್ '45' ಅದ್ದೂರಿ ಇವೆಂಟ್, ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನೇರ ಪ್ರಸಾರ!
ಸೂರ್ಯನಿಗೆ ಬಹಳ ಹೊತ್ತು ಗ್ರಹಣ ಹಿಡಿಯಲ್ಲ.. ನಾನ್ ಬರ್ತಿದ್ದೀನಿ ಚಿನ್ನ: ದರ್ಶನ್‌ ಟ್ರೈಲರ್ ಡೈಲಾಗ್‌ಗೆ ಅಪಾರ್ಥ?