ಯುಬಿ ಸಿಟಿಯಲ್ಲಿ ಉಪೇಂದ್ರರ 'ಯುಐ' ಪ್ರೀ-ರಿಲೀಸ್ ಈವೆಂಟ್; ಅಭಿಪ್ರಾಯ ಏನಿದೆ?

Published : Dec 16, 2024, 09:04 PM ISTUpdated : Dec 18, 2024, 12:33 PM IST
ಯುಬಿ ಸಿಟಿಯಲ್ಲಿ ಉಪೇಂದ್ರರ 'ಯುಐ' ಪ್ರೀ-ರಿಲೀಸ್ ಈವೆಂಟ್; ಅಭಿಪ್ರಾಯ ಏನಿದೆ?

ಸಾರಾಂಶ

ಉಪೇಂದ್ರ ನಿರ್ದೇಶನ ಮತ್ತು ನಟನೆಯ 'ಯುಐ' ಚಿತ್ರ ಡಿಸೆಂಬರ್ 20 ರಂದು ಬಿಡುಗಡೆಯಾಗಲಿದೆ. ಬೆಂಗಳೂರಿನಲ್ಲಿ ನಡೆದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್, ಡಾಲಿ ಧನಂಜಯ್, ದುನಿಯಾ ವಿಜಯ್ ಮುಂತಾದವರು ಭಾಗವಹಿಸಿದ್ದರು. ರಾಜಕೀಯ, ಸಾಮಾಜಿಕ ಸಮಸ್ಯೆಗಳನ್ನು ಚಿತ್ರ ಒಳಗೊಂಡಿದೆ ಎನ್ನಲಾಗಿದೆ. ಭಾರೀ ನಿರೀಕ್ಷೆಯ ಈ ಚಿತ್ರದಲ್ಲಿ ರೀಷ್ಮಾ ನಾಣಯ್ಯ ನಾಯಕಿ.

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಅವರ 'ಯುಐ' ಸಿನಿಮಾ (UI) ರಿಲೀಸ್‌ಗೆ ಇನ್ನು ಉಳಿದಿರುವುದು ಮೂರೇ ದಿನಗಳು. ಡಿಸೆಂಬರ್ 20ರಂದು ಪ್ರಪಂಚದಾದ್ಯಂತ ಬಿಡುಗಡೆ ಕಾಣಲಿರುವ ಯುಐ ಸಿನಿಮಾದ ದ ಪ್ರೀ ರಿಲೀಸ್ ಈವೆಂಟ್ ಇಂದು ಆಯೋಜನೆ ಅಗಿದೆ. ಬೆಂಗಳೂರಿನ ಯುಬಿ ಸಿಟಿಯ ಜೆಡಬ್ಲ್ಯೂ ಮ್ಯಾರೇಟ್ನಲ್ಲಿ ಅದ್ದೂರಿ ಈವೆಂಟ್ ಆಯೋಜಿಸಲಾಗಿದೆ. ಈ ಚಿತ್ರವನ್ನು ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿದ್ದು, ನಾಯಕರಾಗಿ ಕೂಡ ಅವರೇ ಕಾಣಿಸಿಕೊಂಡಿದ್ದಾರೆ. 

ಇಂದಿನ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ನಟರಾದ ಶಿವರಾಜ್ ಕುಮಾರ್, ಡಾಲಿ ಧನಂಜಯ್ ಹಾಗೂ ದುನಿಯಾ ವಿಜಯ್ ಸೇರಿದಂತೆ ಹಲವರು ಆಗಮಿಸಿದ್ದಾರೆ. ಉಪ್ಪಿ ನಟಿಸಿ, ನಿರ್ದೇಶನ ಮಾಡಿರೋ ಯುಐ ಸಿನಿಮಾ, ಸದ್ಯಕ್ಕೆ ಕನ್ನಡ ಚಿತ್ರರಂಗದಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿರುವ ಚಿತ್ರವಾಗಿದೆ. ವಾರಗಳಿಂದ ಬಿರುಸಿನ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡವು ಇಂದು ಬೆಂಗಳೂರಿನಲ್ಲಿ ಅದ್ದೂರಿ ಈವೆಂಟ್ ಆಯೋಜನೆ ಮಾಡಿದೆ. 

ಬಿಗ್ ಬಾಸ್ ಕನ್ನಡ ಶೋ ಕೊರತೆ ಬಗ್ಗೆ ಕೊನೆಗೂ ಬಾಯ್ಬಿಟ್ಟ ಕಿಚ್ಚ ಸುದೀಪ್ ಹೇಳಿದ್ದೇನು?

ಯುಐ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಚಿತ್ರದ ಬಗ್ಗೆ ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ಕೂಡ ಭಾರೀ ನಿರೀಕ್ಷೆ ಮನೆಮಾಡಿದೆ. ಕಾರಣ, ಉಪೇಂದ್ರ ಅವರು ಟ್ರೆಂಡ್ ಸೆಟ್ಟರ್ ನಿರ್ದೇಶಕ ಎಂಬುದು ಎಲ್ಲರಿಗೂ ಗೊತ್ತು. ಈ ಮೊದಲು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಓಂ, ಎ ಹಾಗೂ ಉಪೇಂದ್ರ ಸೇರಿದಂತೆ ಬಹಳಷ್ಟು ಚಿತ್ರಗಳು ಗಳಿಕೆ ಹಾಗೂ ಜನಪ್ರಿಯತೆಯಲ್ಲಿ ದಾಖಲೆ ನಿರ್ಮಿಸಿವೆ. 

ಬಹಳ ವರ್ಷಗಳ ಬಳಿಕ ಉಪೇಂದ್ರ ಅವರು ನಿರ್ದೇಶನಕ್ಕೆ ಮರಳಿದ್ದು, ಈ ಕಾರಣಕ್ಕೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಚಿತ್ರದಲ್ಲಿ ಸಾಮಾಜಿಕ ಅಸಮಾನತೆ, ರಾಜಕೀಯ ನಾಯಕರ ಅಪ್ರಬುದ್ಧತೆ ಸೇರಿದಂತೆ ಹಲವು ಅಂಶಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ ಎಂಬ ಸುದ್ದಿ ಹಬ್ಬಿದೆ. ಆದರೆ ಈ ಸುದ್ದಿ ಅದೆಷ್ಟು ನಿಜ ಎಂಬುದು ಸಿನಿಮಾ ನೋಡಿದ ಮೇಲಷ್ಟೇ ಕನ್ಫರ್ಮ್ ಆಗಬೇಕಿದೆ. ಆದರೆ ಒಂದು ಮಾತಂತೂ ಸತ್ಯ, ಉಪೇಂದ್ರ ಅವರು ದೇಶದ ಸಮಸ್ಯೆ, ಸಮಾಜದಲ್ಲಿರುವ ಸಮಸ್ಯೆಯ ಬಗ್ಗೆಯಂತೂ ಖಂಡಿತವಾಗಿ ತಮ್ಮ ಸಿನಿಮಾದಲ್ಲಿ ಬೆಳಕು ಚೆಲ್ಲುವುದಂತೂ ಗ್ಯಾರಂಟಿ!

'ಪುಷ್ಪಾ 2' ಡಾನ್ಸ್‌ ಕುಣಿತದ ನಂತ್ರ ಶ್ರೀಲೀಲಾ ಕಥೆ ನೋಡಿ; ಹೀಗಾಗುತ್ತೆ ಅಂದ್ಕೊಂಡಿದ್ರಾ?

ಒಟ್ಟಿನಲ್ಲಿ, ಇನ್ನೇನು ನಾಲ್ಕನೇ ದಿನ ಬೆಳಗಾದರೆ ಉಪ್ಪಿಯವರ ಯುಐ ಚಿತ್ರವು ತೆರೆಯಲ್ಲಿ ನೋಡಲು ಲಭ್ಯವಿದೆ. ಭಾರೀ ನಿರೀಕ್ಷೆಯ ಈ ಚಿತ್ರವನ್ನು ಕನ್ನಡ ಸೇರಿದಂತೆ ಎಲ್ಲ ಸಿನಿಮಾಪ್ರಿಯರು ಕಣ್ತುಂಬಿಕೊಂಡು ಆನಂದಿಸಬಹುದು. ಚಿತ್ರವು ಕಂಟೆಂಟ್ ಹಾಗು ಮೇಕಿಂಗ್ ಎರಡರಲ್ಲೂ ವಿಶೇಷವಾದ ಕ್ವಾಲಿಟಿ ಹೊಂದಿದೆ ಎನ್ನಲಾಗುತ್ತಿದೆ. ಸಿನಿಮಾ ನೋಡಿದ ಮೇಲೆ ಸದ್ಯ ಹಬ್ಬಿರುವ ಎಲ್ಲಾ ಸುದ್ದಿಗಳ ಅಸಲಿಯತ್ತೇನು ಎಂಬುದು ಬಹಿರಂಗವಾಗಲಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar