ರಾಮ ಮಂದಿರಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡಿದ 'ರೆಮೋ' ನಿರ್ಮಾಪಕ ಸಿಆರ್‌ ಮನೋಹರ್!

Suvarna News   | Asianet News
Published : Jan 28, 2021, 02:03 PM ISTUpdated : Jan 28, 2021, 02:31 PM IST
ರಾಮ ಮಂದಿರಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡಿದ 'ರೆಮೋ' ನಿರ್ಮಾಪಕ ಸಿಆರ್‌ ಮನೋಹರ್!

ಸಾರಾಂಶ

ನಿರ್ಮಾಪಕ ಸಿಆರ್‌ ಮನೋಹರ್‌ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡಿರುವುದಾಗಿ ತಿಳಿದು ಬಂದಿದೆ.   

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಜನವರಿ 15ರಿಂದ ಫೆಬ್ರವರಿ 27ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇತ್ತೀಚಿಗೆ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ದೇಣಿಗೆ ನೀಡಿರುವುದರ ಬಗ್ಗೆ ಮಾಹಿತಿ ಹಂಚಿ ಕೊಂಡಿದ್ದರು. ಇದೀಗ ನಿರ್ಮಾಪಕ ಸಿಆರ್‌ ಮನೋಹರ್‌ ದೇಣಿಗೆ ನೀಡಿದ್ದಾರೆ, ಎನ್ನಲಾಗಿದೆ.

ರಾಮಂದಿರಕ್ಕೆ ಭಾರೀ ಮೊತ್ತದ ದೇಣಿಗೆ ಕೊಟ್ಟ ಅಮೂಲ್ಯ -ಜಗದೀಶ್; ರಶೀದಿ ಪೋಟೋ ಇಲ್ಲಿದೆ! 

ಮನೋಹರ್‌ 5 ಲಕ್ಷ ರೂ. ದೇಣಿಗೆ ನೀಡಿರುವ ಬಗ್ಗೆ ನಿರ್ದೇಶಕ ಪವನ್ ಒಡೆಯರ್‌ ಫೇಸ್‌ಬುಕ್ ಹಾಗೂ ಟ್ಟಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರೆಮೋ ಚಿತ್ರದಲ್ಲಿ ಇಶಾನ್‌ಗೆ ನಟಿ ಆಶಿಕಾ ರಂಗನಾಥ್‌ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ, ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. 

'ರಾಮ ಮಂದಿರ ನಿರ್ಮಾಣಕ್ಕಾಗಿ 'ರೇಮೊ' ಚಿತ್ರದ ನಿರ್ಮಾಪಕರಾದ ಮನೋಹರ್ ಸರ್ 5 ಲಕ್ಷ  ನೀಡಿದ ಸಂದರ್ಭ. ಸರ್ವೇ ಜನಃ ಸುಖಿನೋ ಭವಂತು,'ಎಂದು ಬರೆದು ಕೊಂಡಿದ್ದಾರೆ. 

ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಂದ 6 ಲಕ್ಷ ದೇಣಿಗೆ

ನಟಿ ಪ್ರಣೀತಾ ಸುಭಾಷ್ ರಾಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ ನೀಡಿದ್ದು, ಜಗದೀಶ್ ಅಮೂಲ್ಯ ದಂಪತಿಗಳು 1.5 ಲಕ್ಷ ರೂ. ನೀಡಿದ್ದಾರೆ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ 30 ಲಕ್ಷ ರೂ. ನೀಡಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
BBK 12: ಗೆಲ್ತಾರಾ ಗಿಲ್ಲಿ ನಟ..? ಈ ಮಂಡ್ಯದ ಹೈದ ನಟರಾಜ್‌ನ ಪ್ಲಸ್ & ಮೈನಸ್ ಏನು? ಸೀಕ್ರೆಟ್ ರಿವೀಲ್..!