ನಟ ದರ್ಶನ್ ಹೆಗಲೇರಿ ಕುಳಿತಿದೆಯಾ ಶನಿ ? ಜೈಲಿಂದ ಬಿಡುಗಡೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ದೈವ!

Published : Aug 11, 2024, 11:29 AM ISTUpdated : Aug 12, 2024, 02:10 PM IST
 ನಟ ದರ್ಶನ್ ಹೆಗಲೇರಿ ಕುಳಿತಿದೆಯಾ  ಶನಿ ? ಜೈಲಿಂದ ಬಿಡುಗಡೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ದೈವ!

ಸಾರಾಂಶ

ದರ್ಶನ್ ಸಮಯ ಸರಿಯಾಗಿಲ್ಲ. ಗುರುಬಲ ಇಲ್ಲ. ಕೆಟ್ಟ ದೆಸೆ ನಡೆಯುತ್ತಿದೆ. ಶನಿ ಮಹಾತ್ಮನು ಆಸ್ಥಾನದಲ್ಲಿ ಬಂದು ಕೂತಿದ್ದಾನೆ. ಇನ್ನೆರಡು ತಿಂಗಳಲ್ಲಿ ಬಿಡುಗಡೆಯಾಗಲಿದ್ದಾನೆ. ದರ್ಶನ್ ಬಿಡುಗಡೆ ಬಗ್ಗೆ ದೈವ ನುಡಿದ ವಿಡಿಯೋ ವೈರಲ್ 

ಬೆಂಗಳೂರು (ಆ.11): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಇಂದಿಗೆ 50 ದಿನಗಳೇ ಕಳೆದುಹೋಗಿವೆ. ಆದರೆ ಇದುವರೆಗೆ ಎಷ್ಟೇ ಪ್ರಯತ್ನ ಪಟ್ಟರು ಬಿಡುಗಡೆಯಾಗುವ ಎಲ್ಲ ಕಾನೂನು ಮಾರ್ಗಗಳು ವಿಫಲಗೊಂಡಿವೆ. ದೇವರು ಕೈಹಿಡಿಯಬಹುದು ಅಂತಾ ಕೊನೆಗೆ ದೇವರ ಮೊರೆ ಹೋಗಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ. ಕೊಲ್ಲೂರು ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ತೆರಳಿ ಪತಿ ದರ್ಶನ್ ಬಿಡುಗಡೆಗಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಲ್ಲದೇ ಮಹಾಚಂಡಿಯಾಗ ಸಹ ಮಾಡಿದ್ದಾಯ್ತು. ಹಲವು ದೇವಸ್ಥಾನಗಳನ್ನು ಸುತ್ತಿ ಪೂಜೆ ಸಲ್ಲಿಸಿದ್ದೂ ಆಯ್ತು. ಇನ್ನು ಅಭಿಮಾನಿಗಳು ಪೂಜೆ, ಹರಕೆಗಳಿಗೆ ಲೆಕ್ಕವೇ ಇಲ್ಲ. ಇಷ್ಟಾದರೂ ದರ್ಶನ್ ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದಕ್ಕೆ ಉತ್ತರವೇ ಸಿಗದಂತಾಗಿದೆ.

ಇದೀಗ ನಟ ದರ್ಶನ್ ಯಾವಾಗ ಬಿಡುಗಡೆಯಾಗುತ್ತಾರೆ ಅಂತಾ ದೇವಸ್ಥಾನದ ಅರ್ಚಕನೇ ದೈವದ ಮೊರೆ ಹೋಗಿದ್ದಾರೆ. ಹೌದು ಬೆಂಗಳೂರಿನ ಬಾಪೂಜಿನಗರದ ಶಾರದಾಂಬೆ ದೇವಸ್ಥಾನದ ಅರ್ಚಕರ ಮಗಳಿಂದ  ದರ್ಶನ್ ಬಿಡುಗಡೆ ಭವಿಷ್ಯ ಹೊರಬಿದ್ದಿದೆ. ಕುಟ್ಟುವ ಕಲ್ಲಿನ ಮೂಲಕ ಭವಿಷ್ಯ ಕೇಳಿದ ದೇವಸ್ಥಾನದ ಅರ್ಚಕ. ಈ ವೇಳೆ ದರ್ಶನ್ ಬಗ್ಗೆ ಓಂ ಶಕ್ತಿ ಶಾರದಾಂಬೆ ದೇವಿ ಭವಿಷ್ಯ ನುಡಿದಿದೆ ಎನ್ನಲಾಗಿದೆ. ಮಗಳ ಮೂಲಕ ದೇವಿಯೇ  ಅರ್ಚಕರೊಬ್ಬರ ಮಗಳಿಂದ ಕುಟ್ಟೊ ಕಲ್ಲು ಮೂಲಕ ಬರೆದು ಭವಿಷ್ಯ ನುಡಿದ ದೈವ. 

ವಿಜಯಲಕ್ಷ್ಮೀ ಕೊಲ್ಲೂರು ಪ್ರಸಾದಕ್ಕೂ ಮನೆಯೂಟ ಅರ್ಜಿ ವಾಪಸಾತಿಗೂ ಏನಿದೆ ಲಿಂಕ್? ಯಾಕೆ ಚರ್ಚೆಯಾಗ್ತಿದೆ..?

ದರ್ಶನ್ ಬಿಡುಗಡೆ ಯಾವಾಗ?

ಓಂ ಶಕ್ತಿ ಶಾರದಾಂಬೆ ಬಿಸೋ ಕಲ್ಲು ಮೂಲಕ ಭವಿಷ್ಯ ಬರೆಸುತ್ತಿದೆಯಾ ದೈವ. ದರ್ಶನ್ ಸದ್ಯ ಮೀನರಾಶಿಯಲ್ಲಿದ್ದಾರಂತೆ, ದರ್ಶನ್ ಸಮಯ ಸರಿಯಾಗಿಲ್ಲ. ಗುರುಬಲ ಇಲ್ಲ. ಕೆಟ್ಟ ದೆಸೆ ನಡೆಯುತ್ತಿದೆ. ಶನಿ ಮಹಾತ್ಮನು ಆಸ್ಥಾನದಲ್ಲಿ ಬಂದು ಕೂತಿದ್ದಾನೆ. ಜೊತೆಗೆ ರಾಜರಾಜೇಶ್ವರಿನಗರದ ದರ್ಶನ್ ನಿವಾಸಕ್ಕೆ ವಾಸ್ತುದೋಷವಿದೆ. ಮನೆಯ ಮೂಲೆಯೇ ಸರಿಯಿಲ್ಲ. ಇದೇ ಕಾರಣಕ್ಕೆ ಬಿಡುಗಡೆಗೆ ಅಡೆತಡೆಗಳಾಗುತ್ತಿವೆ. ಇನ್ನೂ ಒಂದೂವರೆ ಎರಡು ತಿಂಗಳು ಬಿಡುಗಡೆಯ ಭಾಗ್ಯ ಇಲ್ಲ. ಬಳಿಕ ಜೈಲಿನಿಂದ ಹೊರಬರ್ತಾರೆ ಎಂದು ಭವಿಷ್ಯ ನುಡಿದ ದೈವ. 

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತ ಚಿಕ್ಕಣ್ಣಗೆ ತಪ್ಪದ ಕಂಟಕ!

ದೈವ ಭವಿಷ್ಯ ನುಡಿಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡ ದೇವಸ್ಥಾನದ ಅರ್ಚಕ. ಸದ್ಯ ವೈರಲ್ ಆಗಿದ್ದು, ದರ್ಶನ್ ಇನ್ನೆರಡು ತಿಂಗಳಲ್ಲಿ ಬಿಡುಗಡೆಯಾಗಲಿರುವ ಭವಿಷ್ಯ ಕೇಳಿ ಖುಷಿಯಾಗಿದ್ದಾರೆ. ಇನ್ನು ಕೆಲವರು ದರ್ಶನ್ ವಿರುದ್ಧ ಸಾಕ್ಷ್ಯಗಳಿದ್ದು ಯಾವುದೇ ಕಾರಣಕ್ಕೂ ಹೊರಬರುವುದಿಲ್ಲ. ದರ್ಶನ್ ಗೆ ಜಾಮೀನು ಸಿಗುವುದು ಅಷ್ಟು ಸುಲಭವಿಲ್ಲ ಎಂದಿದ್ದಾರೆ. ದೈವ ನುಡಿದ ಭವಿಷ್ಯ ನಿಜವಾಗುತ್ತದಾ? ದರ್ಶನ್ ಎರಡು ತಿಂಗಳಲ್ಲಿ ಹೊರಬರ್ತಾರಾ ಕಾಲವೇ ಉತ್ತರಿಸಬೇಕು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!
ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep