ಕೃತಜ್ಞತೆ ಹೇಳೋವಲ್ಲಿ ಕೃತಘ್ನತೆ ಹೇಳಿದ ದರ್ಶನ್..!

Published : Mar 14, 2021, 10:18 AM ISTUpdated : Mar 14, 2021, 10:39 AM IST
ಕೃತಜ್ಞತೆ ಹೇಳೋವಲ್ಲಿ ಕೃತಘ್ನತೆ ಹೇಳಿದ ದರ್ಶನ್..!

ಸಾರಾಂಶ

ಟಿಕೆಟ್ ಖರೀದಿಸಿ ಸಿನಿಮಾ ನೋಡಿದ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ಡಿಬಾಸ್ | ಕೃತಜ್ಞತೆ ಹೇಳೋವಲ್ಲಿ ಹೇಳಿದ್ದು ಮಾತ್ರ ಕೃತ‍ಘ್ನತೆ...!

ರಾಬರ್ಟ್ ಸಿನಿಮಾ ರಿಲೀಸ್ ಆಗಿ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಮೊದಲ ದಿನವೇ 17 ಕೋಟಿ ಕಲೆಕ್ಷನ್ ಮಾಡಿದ ಸಿನಿಮಾ ಟಾಲಿವುಡ್‌ನಲ್ಲಿಯೂ ಸೌಂಡ್ ಮಾಡಿದೆ.

ಪೊಗರು ನಂತರ ಥಿಯೇಟರ್‌ನಲ್ಲಿ ರಿಲೀಸ್ ಆದ ಬಿಗ್‌ ಬಜೆಟ್ ಸಿನಿಮಾ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದ್ದು, ಡಿಬಾಸ್ ಫ್ಯಾನ್ಸ್ ಅಂತೂ ಫುಲ್ ಖುಷ್ ಆಗಿದ್ದಾರೆ.

KGF-ರಾಬರ್ಟ್ ಬಾಕ್ಸ್ ಆಫೀಸ್ ಕಲೆಕ್ಷನ್ ಕಿರಿಕ್: ಯಶ್, ಡಿಬಾಸ್ ಫ್ಯಾನ್ಸ್ ಮಧ್ಯೆ ಜಗಳ

ಸಿನಿಮಾ ಸೂಪರ್ ಹಿಟ್ ಆಗುತ್ತಿರುವಾಗ ಟಿಕೆಟ್ ಖರೀದಿಸಿ ಪ್ರೀತಿಯಿಂದ ಸಿನಿಮಾ ನೋಡಿದ ಅಭಿಮಾನಿಗಳಿಗೆ ನಟ ಥ್ಯಾಂಕ್ಸ್ ಹೇಳಿದ್ದಾರೆ. ಆದರೆ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಥ್ಯಾಂಕ್ಸ್ ಹೇಳೋಕೆ ಹೋಗಿ ಅಕ್ಷರ ತಪ್ಪಿನಿಂದ ಎಡವಟ್ಟು ಮಾಡಿಕೊಂಡಿದ್ದಾರೆ.

ಆನ್ಲೈನ್ ಮೀಡಿಯಾ ಮಿತ್ರರು ಮತ್ತು ನಮ್ಮ ಸೆಲೆಬ್ರಿಟಿಗಳು ನಮ್ಮ ಚಿತ್ರಕ್ಕೆ ನೀಡಿರುವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳು. ಒಳ್ಳೆ ಕನ್ನಡ ಚಿತ್ರಗಳಿಗೆ ಸದಾ ಬೆನ್ನೆಲುಬಾಗಿರಿ. ಮಧ್ಯರಾತ್ರಿಯಿಂದ ಟಿಕೆಟ್ಸ್ ಗಾಗಿ ಕಾದು ನಿಂತು ನಮ್ಮನ್ನು ಹೃದಯತುಂಬಿ ಆಶೀರ್ವದಿಸಿದ ಸೆಲೆಬ್ರಿಟಿ ಸಮೂಹಕ್ಕೆ ನಿಮ್ಮ ಈ ದಾಸನ ಕೃತಘ್ನತೆಗಳು ಎಂದು ಬರೆದಿದ್ದಾರೆ ನಟ. ಕೃತಜ್ಞತೆ ಹೇಳಬೇಕಾದಲ್ಲಿ ಕೃತಘ್ನತೆ ಹೇಳಿದ್ದಾರೆ.

ಆಂಧ್ರದಲ್ಲಿ ರಾಬರ್ಟ್ ಮೊದಲ ದಿನದ ಕಲೆಕ್ಷನ್ ಎಷ್ಟು?; ಕರ್ನಾಟಕವೇ ಟಾಪ್!

ಕೃತಘ್ನತೆ ಎಂದು ಕೃತಜ್ಞತೆ ಇಲ್ಲದಿರುವುದು ಎಂದು ಅರ್ಥ. ಇಲ್ಲಿ ಡಿಬಾಸ್ ಫ್ಯಾನ್ಸ್‌ಗೆ ಕೃತಜ್ಞತೆ ಹೇಳೋಕೆ ಹೊರಟು ಕೃತಘ್ನತೆ ಎಂದು ಬರೆದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗೆಲುವು ಕೊಟ್ಟ ನಿರ್ದೇಶಕರು ಕಾಣೆಯಾಗಿದ್ದಾರೆ: ಸ್ಯಾಂಡಲ್‌ವುಡ್‌ನಲ್ಲಿ ಏನಾಗುತ್ತಿದೆ?
ಕನ್ನಡದ ಚೆಲುವೆಗೆ ಬಂಪರ್‌ ಚಾನ್ಸ್‌: ಯಶ್‌, ಜೂ.ಎನ್‌ಟಿಆರ್‌ ಬಳಿಕ ರುಕ್ಮಿಣಿ ವಸಂತ್‌ ಮುಂದಿನ ಹೆಜ್ಜೆ ಏನು?