ರೈತ ನಿರ್ಮಿಸಿರುವ 'ಅಥಣಿ' ಹಾಡು ಬಿಡುಗಡೆ, ನಿರ್ದೇಶಕ ಸಮರ್ಥ್ ನಟನೆಗೂ ಜೈ!

Published : Jan 06, 2025, 10:31 PM IST
ರೈತ ನಿರ್ಮಿಸಿರುವ 'ಅಥಣಿ' ಹಾಡು ಬಿಡುಗಡೆ, ನಿರ್ದೇಶಕ ಸಮರ್ಥ್ ನಟನೆಗೂ ಜೈ!

ಸಾರಾಂಶ

ರೈತ ವಾಸುದೇವ ಆರ್ ದೊಡ್ಡಹೆಜ್ಜಾಜಿ ನಿರ್ಮಾಣದ, ಸಮರ್ಥ್ ಎಂ ನಿರ್ದೇಶನ ಮತ್ತು ನಾಯಕತ್ವದ 'ಅಥಣಿ' ಚಿತ್ರದ 'ಬಾರೆ ಬಾರೆ' ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದೆ. ರಾಜು ಚಿತ್ರಪುರ ರಚಿಸಿ, ಸ್ವಾತಿ ಶಂಕರ್ ಮತ್ತು ಹರ್ಷಿವ್ ಭಘೀರ ಹಾಡಿರುವ ಈ ಹಾಡಿಗೆ ಹರ್ಷ ಕುಗೋಡು ಸಂಗೀತ ನೀಡಿದ್ದಾರೆ. ಕ್ರೈಂ, ಪ್ರೀತಿ, ಕೌತುಕ ಮತ್ತು ಹಾಸ್ಯ ಮಿಶ್ರಿತ ಈ ಚಿತ್ರದಲ್ಲಿ ಮಧು ನಾಯಕಿ. 

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ 'ಅಥಣಿ' ಚಿತ್ರದ 'ಬಾರೆ ಬಾರೆ' ಎಂಬ ಹಾಡು ತುಮಕೂರಿನ ದಿಬ್ಬೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷರಾದ ಮುರಳಿಧರ ಹಾಲಪ್ಪ ಹಾಗೂ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 

ರಾಜು ಚಿತ್ರಪುರ ಬರೆದಿರುವ ಈ ಹಾಡನ್ನು ಸ್ವಾತಿ ಶಂಕರ್ ಹಾಗೂ ಹರ್ಸಿವ್ ಭಘೀರ ಹಾಡಿದ್ದಾರೆ. ಹರ್ಷ ಕುಗೋಡು ಸಂಗೀತ ನೀಡಿದ್ದಾರೆ.  ಅಭಯ ಖುಷಿ ಮ್ಯೂಸಿಕ್ ಚಾನಲ್ ನಲ್ಲೇ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ನಿರ್ದೇಶಕರಾಗಿ ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಸಮರ್ಥ ಅವರು ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 

ಅಂಬರೀಷ್ ಮನೆಯಲ್ಲಿ ಆಕಸ್ಮಿಕವಾಗಿ ಸಿಕ್ಕ ನಟಿ ಭಾರತಿ ಫೊಟೋ ತೆಗೆದ ಪ್ರಸಂಗ!

ಹುಬ್ಬಳ್ಳಿಯ ಮಧು ಈ ಚಿತ್ರದ ನಾಯಕಿ. ನಾಗೇಂದ್ರ ಅರಸ್, ಶೋಭರಾಜ್, ಭವ್ಯ ಯತಿರಾಜ್, ಬಲರಾಜವಾಡಿ , ರಾಕೇಶ್ ಪೂಜಾರಿ, ಮೂರ್ತಿ, ವಿಷ್ಣುಪ್ರಿಯ, ಶ್ರೀನಿಧಿ, ಇಂದ್ರ ಕುಮಾರ್, ಸಿ ಜಿ ದಿಬ್ಬೂರು ಮುಂತಾದವರು ತಾರಾಗಣದಲ್ಲಿದ್ದಾರೆ. ರೈತಪರ ಕಾಳಜಿಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೈಂ, ಲವ್, ಸಸ್ಪೆನ್ಸ್ ಹಾಗು ಕಾಮಿಡಿ ಹೀಗೆ ಪ್ರೇಕ್ಷಕನಿಗೆ ಬೇಕಾದ ಎಲ್ಲಾ ಅಂಶಗಳು ಇವೆ ಎನ್ನಲಾಗಿದೆ.

ಈ ಚಿತ್ರದಲ್ಲಿ ಹರ್ಷ ಕೂಗೋಡು ಸಂಗೀತ ನೀಡಿರುವ ಐದು ಹಾಡುಗಳಿದೆ‌. ಆ ಪೈಕಿ ಮೊದಲ ಹಾಡಾಗಿ 'ಬಾರೆ ಬಾರೆ' ಐಟಂ ಸಾಂಗ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಾಡುಗಳು ಅನಾವರಣವಾಗಲಿದೆ. ಸಂದೀಪ್ ಹೊನ್ನಾಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಅವರ ಸಂಕಲನವಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌‌‌.

ಕನ್ನಡದ 'ಕುಚಿಕು' ಹಾಡು ಬಿಡುಗಡೆ ಆಯ್ತು, ಫೆಬ್ರವರಿ 14ಕ್ಕೆ ಬರಲಿದೆ ಸಿನಿಮಾ!  

ತುಮಕೂರು, ಬೆಂಗಳೂರು, ರಾಮನಗರ ಹೊನ್ನಾವರ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.  ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಇದೆ. ಊರಿನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವ "ಅಥಣಿ" ಚಿತ್ರಕ್ಕೆ ಧರಣಿ ಮಂಡಲ ಮಧ್ಯದೊಳಗೆ ಎಂಬ ಅಡಿಬರಹವಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?