ಜನ್ಮದಿನಕ್ಕೂ ಮುನ್ನ ಸಿಎಂ ಭೇಟಿ ಮಾಡಿದ ಕಿಚ್ಚ.. ಏನ್ ವಿಶೇಷ?

Published : Aug 31, 2021, 06:26 PM IST
ಜನ್ಮದಿನಕ್ಕೂ ಮುನ್ನ ಸಿಎಂ ಭೇಟಿ ಮಾಡಿದ ಕಿಚ್ಚ.. ಏನ್ ವಿಶೇಷ?

ಸಾರಾಂಶ

* ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕಿಚ್ಚ ಸುದೀಪ್ * ಇದೊಂದು ಸೌಹಾರ್ದಯುತ ಭೇಟಿ * ಕೊರೋನಾ ನಿಯಮದ ಕಾರಣ ಜನ್ಮದಿನ ಆಚರಣೆ ಇಲ್ಲ ಎಂದು ತಿಳಿಸಿರುವ ಸುದೀಪ್

ಬೆಂಗಳೂರು(ಆ. 31) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಟ ಕಿಚ್ಚ' ಸುದೀಪ್ ಅವರು ಭೇಟಿಯಾಗಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಅವರನ್ನು ಭೇಟಿಯಾದ ಸುದೀಪ್ ಮಾತುಕತೆ ನಡೆಸಿದ್ದಾರೆ.

ಬೊಮ್ಮಾಯಿ ಕುಟುಂಬದ ವಿಶೇಷ ನಂಟು ಹೊಂದಿರುವ ಸುದೀಪ್ ಸಿಎಂ ಭೇಟಿ ಮಾಡಿದ್ದಾರೆ.  ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ಪಡೆದಾಗ, ಸುದೀಪ್ ಟ್ವೀಟ್ ಮಾಡಿ, ಅಭಿನಂದಿಸಿದ್ದರು. ಮಾಮಾ ಎಂದೇ ಬೊಮ್ಮಾಯಿ ಅವರನ್ನು ಪ್ರೀತಿಯಿಂದ ಕರೆದಿದ್ದರು.

ಡಿಫರೆಂಟ್ ಪೋಟೋ ಶೂಟ್ ನಲ್ಲಿ ಮಿಂಚಿದ ಕಿಚ್ಚ

ನಟ ಕಿಚ್ಚ ಸುದೀಪ್ ಅವರಿಗೆ ಸೆಪ್ಟೆಂಬರ್ 2ರಂದು 50ನೇ ಹುಟ್ಟುಹಬ್ಬದ ಸಂಭ್ರಮ. ಈ ಬಾರಿ ಕೊರೋನಾ ಕಾರಣಕ್ಕೆ ಜನ್ಮದಿನ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಸುದೀಪ್ ತಿಳಿಸಿದ್ದಾರೆ. ಅಭಿಮಾನಿಗಳು ಇದ್ದಲ್ಲಿಂದಲೇ ಶುಭ ಹಾರೈಸಬೇಕು ಎಂದು ಕೇಳಿಕೊಂಡಿದ್ದಾರೆ.

ಇನ್ನು, ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಚಿತ್ರದ ಸಣ್ಣ ಝಲಕ್ ಬಿಡುಗಡೆಯಾಗಲಿದೆ. ಸೆ.2ರಂದು ಬೆಳಗ್ಗೆ 11.05ಕ್ಕೆ 'ವಿಕ್ರಾಂತ್ ರೋಣ' ಚಿತ್ರದ 'ದಿ ಡೆಡ್ ಮ್ಯಾನ್ಸ್ ಆಂಥೆಮ್' ರಿಲೀಸ್ ಆಗಲಿದೆ.  ಕೋಟಿಗೊಬ್ಬ 3  ಮತ್ತು ವಿಕ್ರಾಂತ್ ರೋಣ ಸಾಕಷ್ಟು ನಿರೀಕ್ಷೆ ಮೂಡಿಸಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್‌ ಡೆವಿಲ್‌ ಸಿನಿಮಾದ ಫಸ್ಟ್ ಡೇ ಫಸ್ಟ್‌ ಶೋ ಹೌಸ್‌ಫುಲ್‌: ಎಷ್ಟು ಕೋಟಿ ಕಲೆಕ್ಷನ್ ಆಗಿದೆ ಗೊತ್ತಾ?
ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!