ಬಳ್ಳಾರಿ: ಶಿವಣ್ಣ ನೋಡಲು ನೂಕು ನುಗ್ಗಲು, ಲಾಠಿ ಏಟಿನ ರುಚಿ ನೋಡಿದ ಅಭಿಮಾನಿಗಳು..!

Published : Jan 05, 2023, 01:30 AM IST
ಬಳ್ಳಾರಿ: ಶಿವಣ್ಣ ನೋಡಲು ನೂಕು ನುಗ್ಗಲು, ಲಾಠಿ ಏಟಿನ ರುಚಿ ನೋಡಿದ ಅಭಿಮಾನಿಗಳು..!

ಸಾರಾಂಶ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದ ಚಿತ್ರದ ಯಶಸ್ಸು ಹಿನ್ನಲೆಯಲ್ಲಿ ಬಳ್ಳಾರಿಯ ನಟರಾಜ್ ಹಾಗೂ ಉಮಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಶಿವಣ್ಣ ದಂಪತಿ ಹಾಗೂ ವೇದ ಚಿತ್ರ ತಂಡ. 

ಬಳ್ಳಾರಿ(ಜ.05): ಸ್ಯಾಂಡಲ್‌ವುಡ್‌ ನಟ ಶಿವರಾಜ್ ಕುಮಾರ್ ಅವರನ್ನ ನೋಡಲು ಮುಗಿಬಿದ್ದ ಘಟನೆ ನಿನ್ನೆ(ಬುಧವಾರ) ನಗರದಲ್ಲಿ ನಡೆದಿದೆ. ಈ ವೇಳೆ ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಅಭಿಮಾನಿಗಳಿಗೆ ಲಾಠಿ ರುಚಿ ತೋರಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದ ಚಿತ್ರದ ಯಶಸ್ಸು ಹಿನ್ನಲೆಯಲ್ಲಿ ಬಳ್ಳಾರಿಯ ನಟರಾಜ್ ಹಾಗೂ ಉಮಾ ಚಿತ್ರಮಂದಿರಕ್ಕೆ ಶಿವಣ್ಣ ದಂಪತಿ ಹಾಗೂ ವೇದ ಚಿತ್ರ ತಂಡ ಭೇಟಿ ನೀಡಿತ್ತು. ಈ ವೇಳೆ ಶಿವಣ್ಣನ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಪೊಲೀಸರು ಅಭಿಮಾನಿಗಳಿಗೆ ಲಾಠಿ ರುಚಿ ತೋರಿಸಿದ್ದಾರೆ.

'ವೇದ'ನ ಗೆಲುವು ಮತ್ತೆ ಒಂದಾದ ಶಿವಣ್ಣ-ಹರ್ಷ: ಮತ್ತೆ ಡೈರೆಕ್ಷನ್ ಮಾಡಲು ಹೇಳಿದ ಸೆಂಚುರಿ ಸ್ಟಾರ್

ಬಹಳಷ್ಟು ಜನರಿದ್ದ ಕಾರಣ ಅಭಿಮಾನಿಗಳನ್ನು ನಿಯಂತ್ರಣ ಮಾಡಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಶಿವಣ್ಣ ಅವರಿಗೆ ಹೂಮಳೆ ಗರೆದು ಸ್ವಾಗತ ಕೋರಿದ್ದಾರೆ ಅಭಿಮಾನಿಗಳು. ಶಿವಣ್ಣ ದಂಪತಿ ಅಭಿಮಾನಿಗಳ ಜೊತೆಗೆ ಕೆಲ ಕಾಲ ಸಿನಿಮಾ ನೋಡಿ ಎಂಜಾಯ್‌ ಮಾಡಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Birthday's Special: ಕನ್ನಡದ 3 ದಿಗ್ಗಜರ ಜನ್ಮದಿನ- ವಿಷ್ಣುವರ್ಧನ್-ಉಪೇಂದ್ರ-ಶ್ರುತಿ.. ಈ ತ್ರಿಮೂರ್ತಿಗಳ ಹುಟ್ಟುಹಬ್ಬದಂದು ಇವೆಲ್ಲಾ ವಿಶೇಷತೆಗಳಿವೆ ನೋಡಿ!
Dr Vishnuvardhan 75th Birthday: ವಿಷ್ಣುವರ್ಧನ್ ಬಗ್ಗೆ ನಿಮಗೆ ಇನ್ನೂ ಗೊತ್ತಿಲ್ಲದ ಹಲವು ಸೀಕ್ರೆಟ್‌ಗಳು ಇಲ್ಲಿವೆ ನೋಡಿ!