ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಗಣ್ಯರಿಂದ, ಸಿನಿಮಾ ತಾರೆಗಳಿಂದ ಶುಭಾಶಯ ಕೇಳಿ ಬಂದಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರೂ ಸಿಎಂಗೆ ವಿಶ್ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಭಾರೀ ಕುತೂಹಲ ಮೂಡಿಸಿತ್ತು. ಬಿಜೆಪಿ ಹೈಕಮಾಂಡ್ ಲಿಂಗಾಯತ ನಾಯಕನಿಗೆ ಮಣೆಹಾಕಿದ್ದು. ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಅಂತಿಮಗೊಳಿಸಿತ್ತು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ
ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಅವರ ಸರಳತೆಯನ್ನು ನೋಡಿಕೊಂಡು ಬೆಳೆದವನು ನಾನು. ನನ್ನ ಕೆರಿಯರ್ನ ಆರಂಭಿಕ ದಿನಗಳಲ್ಲಿ ನನ್ನ ದೊಡ್ಡ ಸಪೋರ್ಟ್ ಆಗಿದ್ದವರು. ವಿಶಿಂಗ್ ಯು ದಿ ಬೆಸ್ಟ್ ಮಾಮ ಎಂದಿದ್ದಾರೆ.
Have grown up seeing his simplicity. He has been a great support to me personally in the initial days of my career.
Wishing you the best mama. pic.twitter.com/N1Wvrt0vk2
ಟ್ವೀಟ್ನಲ್ಲಿ ಸಿಎಂ ಅವರನ್ನು ಟ್ಯಾಗ್ ಮಾಡಿದ್ದು, ಬ್ಲಾಕ್ & ವೈಟ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಬಗ್ಗೆಯೂ ಈಗ ಕುತೂಹಲ ಶುರುವಾಗಿದ್ದು, ಶೀಘ್ರ ಪಟ್ಟಿ ತಯಾರಾಗುವ ನಿರೀಕ್ಷೆ ಇದೆ.
ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು. pic.twitter.com/F0Hsu5qQMK