ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡತಿ, ಹೊಸ ಕೆಲಸ ಆರಂಭಿಸಿದ ರಂಜನಿ ರಾಘವನ್

Published : Jan 01, 2025, 12:09 PM ISTUpdated : Jan 01, 2025, 12:11 PM IST
ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡತಿ, ಹೊಸ ಕೆಲಸ ಆರಂಭಿಸಿದ ರಂಜನಿ ರಾಘವನ್

ಸಾರಾಂಶ

ನಟಿ ರಂಜನಿ ರಾಘವನ್ ನಿರ್ದೇಶನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಳಯರಾಜ ಅವರ ಸಂಗೀತ ನಿರ್ದೇಶನದಲ್ಲಿ ಹೊಸ ಚಿತ್ರ ತೆರೆಗೆ ಬರಲಿದೆ. ಎರಡು ವರ್ಷಗಳ ಹಿಂದೆ ಹುಟ್ಟಿದ ಕಥೆಯನ್ನು ಒಂದೂವರೆ ವರ್ಷಗಳಿಂದ ಬರೆಯುತ್ತಿದ್ದಾರೆ.  ಡಾ. ಆನಂದ್ ಮತ್ತು ರಾಮಕೃಷ್ಣ ಸುಬ್ರಮಣ್ಯಂ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಹೊಸ ವರ್ಷದ ಮೊದಲ ದಿನ ರಂಜನಿ ಈ ಖುಷಿ ಸುದ್ದಿಯನ್ನು ಫ್ಯಾನ್ಸ್‌ ಮುಂದೆ ಹಂಚಿಕೊಂಡಿದ್ದಾರೆ. 

ಕನ್ನಡತಿ ಸೀರಿಯಲ್ (Kannadathi Serial) ಮೂಲಕ ಎಲ್ಲರ ಮನೆ ಮಾತಾಗಿ ಈಗ ಸ್ಯಾಂಡಲ್ವುಡ್ ನಲ್ಲಿ ಮಿಂಚುತ್ತಿರುವ ರಂಜನಿ ರಾಘವನ್ (Ranjani Raghavan), 2025ರ ಮೊದಲ ದಿನ ಅಭಿಮಾನಿಗಳಿಗೆ ಮತ್ತೊಂದು ಖುಷಿ ಸುದ್ದಿಯನ್ನು ನೀಡಿದ್ದಾರೆ. ನಟನೆ, ಹಾಡು, ಕಥೆ, ಬರವಣಿಗೆ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ರಂಜಿಸುತ್ತಿರುವ ರಂಜನಿ ರಾಘವನ್ ಹೊಸ ವರ್ಷ ಹೊಸ ಕೆಲಸಕ್ಕೆ ಮುಂದಾಗಿದ್ದಾರೆ. ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ನಲ್ಲಿ ರಂಜನಿ ರಾಘವನ್ ಈ ಸಂತೋಷದ ಸುದ್ದಿಯನ್ನು ಪೋಸ್ಟ್ ಮಾಡಿದ್ದಾರೆ. ಎರಡು ಪೋಟೋ ಹಂಚಿಕೊಂಡಿರುವ ಅವರು, ನಿರ್ದೇಶಕಿ ಪಯಣ ಶುರು ಮಾಡ್ತಿರೋದಾಗಿ ತಿಳಿಸಿದ್ದಾರೆ. ಪದ್ಮಭೂಷಣ ಪ್ರಶಸ್ತಿ ವಿಜೇತ ಇಳಯರಾಜ ಜೊತೆಗಿರುವ ಒಂದು ಫೋಟೋವನ್ನು ರಂಜನಿ ಪೋಸ್ಟ್ ಮಾಡಿದ್ದಾರೆ. ಇನ್ನೊಂದು ಫೋಟೋದಲ್ಲಿ ಕಿಟಕಿ ಬಳಿ ಕುಳಿತಿದ್ದಾರೆ ರಂಜನಿ.

ರಂಜನಿ ಫೋಸ್ಟ್‌ ನಲ್ಲಿ ಏನಿದೆ? : ಹೊಸ ವರ್ಷದ ದಿನ ನನ್ನ ಹೊಸ ಕೆಲಸದ ಬಗ್ಗೆ ಹೇಳಿಕೊಳ್ಳಲು ಭಯ ಉತ್ಸಾಹ ಎರಡೂ ಇದೆ. ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸೋ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ನಿಮಗೆ ತೋರಿಸುವತ್ತ ಕೆಲಸ ನಡೆದಿದೆ. ಹೊಸ ಕೆಲಸ ಅನ್ನುವುದಕ್ಕಿಂತ ಸಿನಿಮಾ ನಿರ್ದೇಶಕಿ ಆಗಬೇಕೆಂಬ ಕನಸು ಹೊತ್ತು ಬಹಳ ವರ್ಷಗಳೇ ಸರಿದಿದೆ. ಈ ಕತೆ ಹುಟ್ಟಿ ಎರಡು ವರ್ಷಗಳಾಗಿವೆ. ಒಂದೂವರೆ ವರ್ಷದಿಂದ ಇದರ ಚಿತ್ರಕತೆಯನ್ನ ಬರೆದು ತಿದ್ದಿದ್ದೇನೆ. ಚಿತ್ರರಂಗದ ಹಲವಾರು ಜನರ ಸಹಾಯ ಪ್ರೋತ್ಸಾಹದಿಂದ, ನಮ್ಮ ನಿರ್ಮಾಪಕರಾದ ಡಾ. ಆನಂದ್ ಮತ್ತು ರಾಮಕೃಷ್ಣ ಸುಬ್ರಮಣ್ಯಂ ಅವರ ಸಹಕಾರದಿಂದ ನಮ್ಮ ಸಿನಿಮಾ ಬಗ್ಗೆ ಮಾತನಾಡುವ ಧೈರ್ಯ ಬಂದಿದೆ.

ಹುಡುಗಿ ಡುಮ್ಮಿ ಬೇಡ ಅನ್ನೋ ನೀವು, ಮದ್ವೆಯಾದ್ಮೇಲೆ ಹೆಂಡ್ತಿ ಊದಿಕೊಂಡ್ರೆ ಬಿಟ್ಟು

ಈ ಪಯಣದಲ್ಲಿ ಮುಖ್ಯವಾಗಿ ನನಗೆ ಶಕ್ತಿಯಾಗಿರುವವರು Maestro ಇಸೈಜ್ಙಾನಿ ಇಳಯರಾಜ ಸರ್. 1000 ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನೀಡಿರುವವರು ನನ್ನ ಕತೆಯನ್ನ ಮೆಚ್ಚಿ ಜೊತೆಗೆ ನಿಂತಿದ್ದಾರೆ. ಸೆಪ್ಟೆಂಬರ್ ಹದಿಮೂರು 2023 ರಂದು ಅವರನ್ನ ಭೇಟಿ ಆಗಿ ಕತೆ ಹೇಳುವ ಅದೃಷ್ಟ ಸಿಕ್ಕಾಗ “ಚೆನ್ನೈಗೆ ಹೋಗಿ ಅವರನ್ನ ಭೇಟಿ ಆಗಿ, ಕಾಲಿಗೆ ಬಿದ್ದು ಒಂದು ಫೋಟೋ ತೆಗೆಸಿಕೊಂಡು ಬಂದ್ರೆ ಅದೇ ದೊಡ್ಡದು” ಅಂತಷ್ಟೇ ಅಂದುಕೊಂಡಿದ್ದು. “ಕನ್ನಡದಲ್ಲಿ ಕಥೆ ಹೇಳಮ್ಮ, ಕನ್ನಡ ನನಗೆ ಚೆನ್ನಾಗಿ ಬರುತ್ತೆ ಕೊಲ್ಲೂರು ಮೂಕಾಂಬಿಕೆ ನನ್ನವ್ವ” ಎಂದು ಮಾತು ಶುರು ಮಾಡಿದವರು ಮೂರೇ ದಿನದಲ್ಲಿ ಕಥೆ ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ ಎಂದು ತಿಳಿಸಿ, ನಮ್ಮ ಸಿನಿಮಾದ ಭಾಗವಾಗಿ, ಇವತ್ತಿಗೆ ಇಳಯರಾಜ ಸರ್ ನಮಗೆ “ಒನ್ ಕಾಲ್ ಅವೇ” ಅನ್ನೋ ಜಂಭ ಹುಟ್ಟಿಸಿದ್ದಾರೆ.

ಹೋದ ವರ್ಷ 2024 ಜನವರಿ ಒಂದು ನನ್ನ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರೂ ಅದೇನೆಂದು ಹೇಳಲು 2025 ಬರಬೇಕಾಯಿತು! ಸಿನಿಮಾ ಮಾಡುವಾಗ ಎಲ್ಲವೂ ಅಂದುಕೊಂಡಂತೆ ನಡೆಯುವುದಿಲ್ಲ ಅನ್ನುವುದು ಇಲ್ಲಿಯ ತನಕ ಕಲಿತ ಪಾಠವಾದರೂ ಒಳ್ಳೆಯ ಸಿನಿಮಾ ಆಗಲು ಅದಕ್ಕೇನು ಬೇಕೋ ಅದೇ ಪಡೆದುಕೊಳ್ಳುತ್ತದೆ ಅನ್ನೋ ನಂಬಿಕೆಯೂ ಅಚಲವಾಗಿದೆ. ಕನ್ನಡಿಗರ ಅಶೀರ್ವಾದ, ಸಹಕಾರವನ್ನ ಬೇಡುತ್ತಾ ಮುನ್ನಡೆಯುತ್ತಿದ್ದೇನೆ ಎಂದು ರಂಜನಿ ಬರೆದಿದ್ದಾರೆ. 

ರೊಮ್ಯಾಂಟಿಕ್ ಪ್ರಿ ವೆಡ್ಡಿಂಗ್ ವಿಡಿಯೋ ಜೊತೆ ಹೊಸ ವರ್ಷ ಶುಭಾರಂಭ‌ ಮಾಡಿದ ಮೇಘನಾ ಶಂಕರಪ್ಪ

ರಂಜನಿ ಈ ಪೋಸ್ಟ್ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ನಿಮ್ಮ ಕೆಲಸಕ್ಕೆ ಯಶಸ್ಸು ಸಿಗ್ಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ. ಪುಟ್ಟಗೌರಿ ಮದುವೆ ಸೀರಿಯಲ್ ಮೂಲಕ ತಮ್ಮ ಸೀರಿಯಲ್ ಜರ್ನಿ ಶುರು ಮಾಡಿದ ರಂಜನಿ ರಾಘವನ್, ಕನ್ನಡತಿ ಮೂಲಕ ಪ್ರಸಿದ್ಧಿ ಪಡೆದ್ರು. ರಾಜಹಂಸ, ಪುಣ್ಯ, ಕ್ಷಮಿನಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಮತ್ತು ನೈಟ್ ಕರ್ಫ್ಯೂ ಸಿನಿಮಾದಲ್ಲಿ ರಂಜಿನಿ ನಟಿಸಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Rukmini Vasanth Birthday: ಬೆಸ್ಟ್ ಫ್ರೆಂಡ್ ಹುಟ್ಟುಹಬ್ಬಕ್ಕೆ ನಟಿ Chaitra Achar ವಿಶ್ ‌ಮಾಡಿದ್ದು ಹೀಗೆ
'ಕಾಂತಾರ 1' ಚೆಲುವೆ ರುಕ್ಮಿಣಿ ವಸಂತ್ ಹುಟ್ಟುಹಬ್ಬ; ಈ 'ಬೀರಬಲ್' ನಟಿ ಬಗ್ಗೆ ಅದೆಷ್ಟೋ ಸಂಗತಿಗಳು ನಿಮಗೆ ಗೊತ್ತೇ ಇಲ್ಲ!