
ಬೆಂಗಳೂರು(ಮೇ 28) ಕ್ರೂರಿ ಕೊರೋನಾ ಸ್ಯಾಂಡಲ್ ವುಡ್ ಕಾಡುತ್ತಿದೆ. ಕೊರೋನಾಗೆ ನಿರ್ದೇಶಕ ಅಭಿರಾಮ್ ಬಲಿಯಾಗಿದ್ದಾರೆ. ಶುಕ್ರವಾರ ನಿರ್ದೇಶಕ ಕೊನೆಯುಸಿರೆಳೆದಿದ್ದಾರೆ.
ಕಳೆದೊಂದು ವಾರದಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯದೇ ಮನೆಯಲ್ಲೇ ಇದ್ದರು. ಕೊನೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಬಳಿಕ ಟೆಸ್ಟ್ ಮಾಡಿಸಿದಾಗ ಕೊರೋನಾ ಪಾಸಿಟೀವ್ ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಡ್ ಸಿಗದೆ ಮರೆಯಾದ ಹಿರಿಯ ಜೀವ ರಾಜಾರಾಂ
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಭಿರಾಮ್ ನಿಧನರಾಗಿದ್ದಾರೆ. ಸಂಯುಕ್ತ 2, ಹಾಗು 0% ಲವ್ ಸಿನಿಮಾ ನಿರ್ದೇಶಿಸಿದ್ದರು. ಇತ್ತೀಚೆಗೆ 0% ಲವ್ ಸಿನಿಮಾದ ನಟ ನಿರ್ಮಾಪಕ ಮಂಜುನಾಥ್ ಕೊರೋನಾಗೆ ಬಲಿಯಾಗಿದ್ದರು.
ಹಿರಿಯ ನಟ ರಾಜಾರಾಮ್, ಕೃಷ್ಣೇಗೌಡ ಸೇರಿದಂತೆ ಅನೇಕ ಕಲಾವಿದರು ಕೊರೋನಾ ಮಹಾಮಾರಿಯಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ರಾಮು ಕೋಟಿ ನಿರ್ಮಾಪಕರಾಗಿ ಬೆಳೆದ ಸ್ಟೋರಿ
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.