
ಫಿಲ್ಮ್ ಚೇಂಬರ್ನ ಮಾಜಿ ಅಧ್ಯಕ್ಷ ಹಾಗೂ ಸಿನಿಮಾ ನಿರ್ಮಾಪಕರಾದ ಭಾಮಾ ಹರೀಶ್ಗೆ ಹೃದಯಾಘಾತ ಆಗಿದೆ. ಇಂದು ಬೆಳಿಗ್ಗೆ ಭಾಮಾ ಹರೀಶ್ಗೆ ಹೃದಯಾಘಾತ ಆಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾಮಾ ಹರೀಶ್ ಅವರನ್ನು ತೀವ್ರ ನಿಗಾ ಘಟನದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ದರ್ಶನ್ ಮೊಟ್ಟ ಮೊದಲ ಸಿನಿಮಾ ‘ಮೆಜೆಸ್ಟಿಕ್’ ಸಹ ನಿರ್ಮಾಣ ಸೇರಿದಂತೆ ಕೆಲವು ಕನ್ನಡ ಸಿನಿಮಾಗಳನ್ನು ಭಾಮಾ ಹರೀಶ್ ನಿರ್ಮಾಣ ಮಾಡಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿಯೂ ಅವರು ಕಾರ್ಯ ನಿರ್ವಹಿಸಿ ಅವರು ಸಿನಿಮಾ ಉದ್ಯಮದಲ್ಲಿ ತಮ್ಮದೇ ಆದ ಹೆಸರು ಸಂಪಾದಿಸಿಕೊಂಡಿದ್ದಾರೆ.
ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ, ಐಸಿಯು ನಲ್ಲಿ ಅಡ್ಮಿಟ್ ಆಗಿ ಭಾಮಾ ಹರೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಿಗ್ಗೆ ಅವರಿಗೆ ಹೃದಯ
ಆಘಾತವಾಗಿದ್ದು, ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ಸೇರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.