
ಬೆಂಗಳೂರು(ಮಾ.12): ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದುಂದು ವೆಚ್ಚಕ್ಕೆ ಕಡವಾಣ ಹಾಕಲು ಮನವಿ ಮಾಡಲಾಗಿದೆ.
ಈ ಬಾರಿ ನಡೆಯುತ್ತಿರೋ ಚಿತ್ರೋತ್ಸವದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಕ್ಕೆ ಮೂರು ಕೋಟಿ ಖರ್ಚು ಮಾಡಲಾಗುತ್ತಿದ್ದು, ಅಕಾಡೆಮಿಯ ವತಿಯಿಂದ ಕಾರ್ಯಕ್ರಮದ ಉಸ್ತುವಾರಿ ಖಾಸಗಿ ಸಂಸ್ಥೆಗೆ ನೀಡಲಾಗಿದೆ.
ರಾಬರ್ಟ್ ಅಬ್ಬರ: ಮೊದಲ ದಿನವೇ 17ಕೋಟಿಗೂ ಹೆಚ್ಚು ಗಳಿಕೆ
ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸ್ಯಾಂಡಲ್ ವುಡ್ ನಿರ್ದೇಶಕರು ಈ ಕಾರ್ಯಕ್ರಮ ಅಕಾಡೆಮಿಯೇ ನಡೆಸಬೇಕು ಅಥವಾ ಚಿತ್ರೋದ್ಯಮದವರಿಗೆ ನೀಡಬೇಕು ಎಂದು ಕೇಳಿದೆ.
ಖಾಸಗಿ ಇವೆಂಟ್ ಸಂಸ್ಥೆಗೆ ನೀಡಿರೋದು ಬೇಸರದ ಸಂಗತಿ. ಈ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಎಂದು ಮನವಿ ಮಾಡಲಾಗಿದೆ.
ಲಾಕ್ಡೌನ್ನಲ್ಲಿ ಅಡುಗೆ ಕಲಿತಿದ್ದಾರೆ ಪುನೀತ್.!
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ . ಗಿರೀಶ್ ಕಾಸರವಳ್ಳಿ .ಪಿ ಶೇಷಾದ್ರಿ. ಬಿ ಸುರೇಶ್ ಸೇರಿದಂತೆ ಇನ್ನು ಅನೇಕರು ಈ ಸಂಬಂಧ ಸಿಎಂಗೆ ಮನವಿ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.