ಸುಪ್ರೀಂ ಹೀರೋ ಶಶಿಕುಮಾರ್ ಪುತ್ರನ 'ಸೀತಾಯಣ' ಸಖತ್ತಾಗಿದೆ!

Published : Mar 11, 2020, 04:25 PM ISTUpdated : Mar 11, 2020, 04:33 PM IST
ಸುಪ್ರೀಂ ಹೀರೋ ಶಶಿಕುಮಾರ್ ಪುತ್ರನ 'ಸೀತಾಯಣ' ಸಖತ್ತಾಗಿದೆ!

ಸಾರಾಂಶ

ಕನ್ನಡ ಚಿತ್ರರಂಗಕ್ಕೆ ಸುಪ್ರೀಂ ಹೀರೋ ಶಶಿಕುಮಾರ್ ಪುತ್ರನ ಎಂಟ್ರಿ/ ಸೀತಾಯಣ ಚಿತ್ರದ ಫಸ್ಟ್ ಲುಕ್/ ಆಕರ್ಷಕ ಫಸ್ಟ್ ಲುಕ್/ ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿನಲ್ಲಿಯೂ ತೆರೆಗೆ ಬರುತ್ತಿರುವ ಚಿತ್ರ

ಬೆಂಗಳೂರು(ಮಾ. 11)  ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಮೊಡವೆ ಹೆಸರಿನ ಚಿತ್ರದೊಂದಿಗೆ ಹೀರೋ ಆಗಿದ್ದರು. ಈಗ ಅದು ಮುಗಿಯುವ ಮೊದಲೆ ಮತ್ತೊಂದು ಸಿನಿಮಾಕ್ಕೆ ನಾಯಕರಾಗಿದ್ದಾರೆ. ಹೆಸರನ್ನು ಅಕ್ಷಿತ್ ಶಶಿಕುಮಾರ್ ಎಂದು ಬದಲಾಯಿಸಿಕೊಂಡು ಸೀತಾಯಣ ಎಂಬ ಚಿತ್ರದ ಮೂಲಕ ಮುಂದೆ ಬರುತ್ತಿದ್ದಾರೆ. 

ಸೀತಾಯಣ ಚಿತ್ರದ ಪಸ್ಟ್ ಲುಕ್ ಹೊರ ಬರುತ್ತಿದೆ.  ಈ ಚಿತ್ರ ಕನ್ನಡದ ಜತೆಗೆ ತೆಲುಗು ಹಾಗೂ ತಮಿಳಿನಲ್ಲೂ ನಿರ್ಮಾಣವಾಗಿದೆ. ಕನ್ನಡದಲ್ಲೇ ಈ ಚಿತ್ರವನ್ನು ಮೊದಲು ತೆರೆಗೆ ತರಲು ಹೊರಟಿದೆ ಚಿತ್ರತಂಡ. 

ಅದೊಂದು ಅಪಘಾತ ಆಗದಿದ್ದರೆ..ಶಶಿಕುಮಾರ್ ಜೀವನ!

ಶಶಿ ಕುಮಾರ್ ತಮ್ಮ ಪುತ್ರನನ್ನು ಈಗ ಕನ್ನಡದ ಜತೆಗೆ ತೆಲುಗು ಹಾಗೂ ತಮಿಳಿಗೂ ಪರಿಚಯಿಸಲು ಮುಂದಾಗಿದ್ದಾರೆ. ಅದಕ್ಕಾಗಿಯೇ ಪುತ್ರನ ಹೆಸರನ್ನು ಬದಲಾಯಿಸಿದ್ದಾರೆ ಎನ್ನಲಾಗಿದೆ.

‘ಸೀತಾಯಣ’ಲ್ಲಿ ಲಕ್ನೋ ಮೂಲದ ಮಾಡೆಲಿಂಗ್ ಬೆಡಗಿ ಅನ್ ಹಿತ್ ಭೂಷಣ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿಗೂ ಅವರೇ ನಾಯಕಿ. ಹೈದರಾಬಾದ್ ಮೂಲದ ಕಲರ್ ಕ್ಲೌಡ್ಸ್ ಎಂಟರ್ ಟೈನ್ ಮೆಂಟ್ ಬ್ಯಾನರ್ ನಲ್ಲಿ ರೋಹನ್ ಭಾರದ್ವಜ್ ಈ ಚಿತ್ರ ನಿರ್ಮಿಸಿದ್ದರೆ. ಪ್ರಭಾಕರ್ ಆರಿಪಿಕ್ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Mark Movie: ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!