ಸ್ಯಾಂಡಲ್​ವುಡ್​​ನಲ್ಲಿ ಲೈಂಗಿಕ ಶೋಷಣೆ: ಫಿಲ್ಮ್ ಚೇಂಬರ್‌ನಲ್ಲಿ ನಾಳೆ ಮಹತ್ವದ ಸಭೆ

By Govindaraj SFirst Published Sep 15, 2024, 10:14 PM IST
Highlights

ಹೇಮಾ ವರದಿ ಮಾಲಿವುಡ್‌ನಲ್ಲಿ ಸುನಾಮಿ ಎಬ್ಬಿಸಿದೆ. ಕೇರಳದಲ್ಲಿ ಎದ್ದಿರೋ ಈ ಸುನಾಮಿ ಈಗ ಸ್ಯಾಂಡಲ್​ವುಡ್​​​ಗೂ ಬಂದಪ್ಪಳಿಸಿದ್ದು, ಫಿಲ್ಮ್ ಚೇಂಬರ್‌ನಲ್ಲಿ ನಾಳೆ (ಸೆ.16) ಮಹತ್ವ ಸಭೆ ನಡೆಯಲಿದೆ. 

ಬೆಂಗಳೂರು (ಸೆ.15): ಹೇಮಾ ವರದಿ ಮಾಲಿವುಡ್‌ನಲ್ಲಿ ಸುನಾಮಿ ಎಬ್ಬಿಸಿದೆ. ಕೇರಳದಲ್ಲಿ ಎದ್ದಿರೋ ಈ ಸುನಾಮಿ ಈಗ ಸ್ಯಾಂಡಲ್​ವುಡ್​​​ಗೂ ಬಂದಪ್ಪಳಿಸಿದ್ದು, ಫಿಲ್ಮ್ ಚೇಂಬರ್‌ನಲ್ಲಿ ನಾಳೆ (ಸೆ.16) ಮಹತ್ವ ಸಭೆ ನಡೆಯಲಿದೆ. ಹೌದು! ಚಿತ್ರರಂಗದ ಸಮಸ್ಯೆ ವಿಚಾರವಾಗಿ ಫಿಲ್ಮ್ ಚೇಂಬರ್‌ಗೆ ಮಹಿಳಾ ಅಯೋಗದ ಪತ್ರದ ಬೆನ್ನಲ್ಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆಗೆ ಮುಂದಾಗಿದೆ. ಹಾಗಾಗಿ ಕಲಾವಿದರ ಸಂಘಕ್ಕೆ ಪತ್ರ ಬರೆದು ನಾಳಿನ ಸಭೆ ಬಗ್ಗೆ ಫಿಲ್ಮ್ ಚೇಂಬರ್ ನಟಿಯರಿಗೆ ಮಾಹಿತಿ ನೀಡಿದೆ. 

ನಾಳೆ 11 ಗಂಟೆಗೆ ಫಿಲ್ಮ್ ಚೇಂಬರ್‌ನಲ್ಲಿ ಸಭೆ ನಡೆಯಲಿದ್ದು, ಮಹಿಳಾ ಅಯೋಗದ ಅಧ್ಯಕ್ಷೆ ಆಗಮಿಸುತ್ತಾರೆ. ಚೇಂಬರ್ ಸಭೆಗೆ ಫೈರ್ ಸದಸ್ಯರ ಹೊರತು ಪಡಿಸಿ ಯಾವೆಲ್ಲ ನಟಿಯರು ಭಾಗವಹಿಸ್ತಾರೆ ಕಾದು ನೋಡಬೇಕಿದೆ. ಹೇಮಾ ಕಮಿಟಿ ಮಾದರಿಗೆ ಈಗಾಗಲೇ ಚಿತ್ರರಂಗದಲ್ಲಿ ಪರ ವಿರೋಧ ಚರ್ಚೆಗಳಾಗಿದ್ದು, ಕಮಿಟಿ ರಚನೆಗೆ ಸ್ಟಾರ್ ಹಾಗೂ ಹಿರಿಯ ನಟ ನಟಿಯರ  ವಿರೋಧ ವ್ಯಕ್ತವಾಗಿದೆ. ಇನ್ನು ಸ್ಟಾರ್‌ಗಳ ವಿರೋಧದ ನಡುವೆ ಯಾರೆಲ್ಲ ನಾಳಿನ ಸಭೆಗೆ ಭಾಗಿಯಾಗ್ತಾರೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ.

Latest Videos

ಸೆ.13 ಒಳಗೆ ನಟಿಯರ ಸಭೆ ಮಾಡಿ ಎಂದ ಮಹಿಳಾ ಆಯೋಗ: ಹೇಮಾ ವರಧಿ ಬಂದ ಮೇಲೆ ಮಲೆಯಾಳಂ ಸಿನಿಮಾ ಜಗತ್ತಿನ ಕಾಮುಖ ಕಣ್ಣುಗಳ ಕರಾಳ ಕತೆಗಳು ಬಯಲಾಗ್ತಿವೆ. ಹಾಗೆ ನಮ್ಮ ಸ್ಯಾಂಡಲ್​ವುಡ್​ಅನ್ನ ಕಾಮುಕ ಕಣ್ಣುಗಳನ್ನ ಕ್ಲೀನ್ ಮಾಡೋಕೆ ಸರ್ಕಾರ ಹೊಸ ಹೆಜ್ಜೆ ಇಟ್ರು ಆಶ್ಚರ್ಯವೇನಿಲ್ಲ. ಅಷ್ಟರೊಗಳಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹಾಗು ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಚಿತ್ರರಂಗದ ನಟಿಯರನ್ನು ಕರೆದು ಅವರ ಸಮ್ಮುಖದಲ್ಲಿ ಸಭೆ ನಡೆಸಿ, ಸಮಿತಿ ರಚಿಸಲು ಒತ್ತಾಯಿಸಿ ತೀರ್ಮಾನ ತೆಗೆದುಕೊಳ್ಳಿ ಈ ಸಭೆ ಸೆಪ್ಟೆಂಬರ್ 13ರ ಒಳಗೆ ನಡೆಸುವಂತೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯಿಂದ ಪತ್ರ ಬರೆದಿದ್ದಾರೆ. 

10 ವರ್ಷದಿಂದ ಒಂದು ಲೆಕ್ಕ, ಈಗಿಂದ ಬೇರೆನೇ ಲೆಕ್ಕ ಎಂದ ಕಿಚ್ಚ ಸುದೀಪ್: ಸೆ.29 ರಿಂದ ಬಿಗ್‌ಬಾಸ್‌ ಹೊಸ ಅಧ್ಯಾಯ ಶುರು

ಬಣ್ಣದ ಜಗತ್ತು ನೋಡೋಕೆ ಕಲರ್​ ಫುಲ್. ಆದ್ರೆ ಅದರೊಳಗೆ ಇಳಿದವರಿಗೆ ಗೊತ್ತು ಅದು ಎಷ್ಟು ಕೊಳಕು ಅಂತ ಸಿನಿಮಾ ರಂಗದವರೇ ಹೇಳುತ್ತಾರೆ. ಯಾಕಂದ್ರೆ ಇಲ್ಲಿ ಕಾಂಪ್ರಮೈಸ್ ಅನ್ನೋದು ಕಾಮನ್. ಕಾಂಪ್ರಮೈಸ್ ಆದ್ರೇನೆ ನಟಿಯರಿಗೆ ಅಭಿನಯಿಸೋಕೆ ಚಾನ್ಸ್. ಇದರ ವಿರುದ್ಧ ಧ್ವನಿ ಎತ್ತಿದವರು ಎಷ್ಟೋ ಜನ. ಹಾಗೇ ಅಷ್ಟು ಬೇಗ ಅವರ ಧ್ವನಿ ಕೂಡ ಅಡಗಿದ್ದು ಅಷ್ಟೇ ಸತ್ಯ. ಆದ್ರೆ ಇನ್ಮುಂದೆ ಹಾಗಾಗಬಾರದು. ಪಾತ್ರಕ್ಕಾಗಿ ಪಲ್ಲಂಗಕ್ಕೆ ಕರೆದರಿಗೆ ಶಿಕ್ಷೆ ಆಗ್ಲೇ ಬೇಕು ಅಂತ ಕೂಗು ಜೋರಾಗಿದೆ. ಇದರಿಂದ ಸ್ಯಾಂಡಲ್​ವುಡ್​ನಲ್ಲಿರೋ ಕೆಲ ಕಾಮ ಕ್ರಿಮಿಗಳಿಗೆ ಚಳಿ ಜ್ವರ ಶುರುವಾಗಿರೋದಂತು ಸತ್ಯ.

click me!