ಈ ನೋವನ್ನು ಒಂದು ವಾರದಿಂದ ಅನುಭವಿಸುತ್ತಿದ್ದರು, ಚಿಕಿತ್ಸೆ ಸರಿಯಾಗಿ ನಡೆದಿದ್ರೆ...: ಗುರು ಕಿರಣ್

Published : Mar 21, 2025, 11:12 AM ISTUpdated : Mar 21, 2025, 11:19 AM IST
ಈ ನೋವನ್ನು ಒಂದು ವಾರದಿಂದ ಅನುಭವಿಸುತ್ತಿದ್ದರು, ಚಿಕಿತ್ಸೆ ಸರಿಯಾಗಿ ನಡೆದಿದ್ರೆ...: ಗುರು ಕಿರಣ್

ಸಾರಾಂಶ

ಪುನೀತ್ ರಾಜ್‌ಕುಮಾರ್ ಅವರ ಕೊನೆಯ ದಿನದ ಬಗ್ಗೆ ಗಾಯಕ ಗುರುಕಿರಣ್ ಮಾಹಿತಿ ನೀಡಿದ್ದಾರೆ. ಅಂಬರೀಶ್ ಇಲ್ಲದ ಕಾರಣ ಎರಡು ವರ್ಷ ಹುಟ್ಟುಹಬ್ಬ ಆಚರಿಸಿರಲಿಲ್ಲ. ಗಂಧದ ಗುಡಿ ಚಿತ್ರದ ಬಗ್ಗೆ ಮಾತನಾಡಿದರು. ಅವರಿಗೆ ಬೆನ್ನುನೋವು ಇತ್ತು, ಆದರೆ ಬೇರೆ ಯಾವುದೇ ತೊಂದರೆ ಇರಲಿಲ್ಲ. ಬೆಳಗ್ಗೆ ಅಪ್ಪು ನಿಧನದ ಸುದ್ದಿ ಕೇಳಿ ಆಘಾತವಾಯಿತು ಎಂದು ಗುರುಕಿರಣ್ ತಿಳಿಸಿದರು.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಸಮಾಜ ಸೇವೆ, ಸಿನಿಮಾ ಹಾಗೂ ಅಭಿಮಾನಿಗಳ ಮೂಲಕ ನಮ್ಮೊಟ್ಟಿಗೆ ಇದ್ದಾರೆ ಅನಿಸುತ್ತದೆ. ಅಪ್ಪು ಇನ್ನಿಲ್ಲ ಅನ್ನೋ ಸುದ್ದಿ ಮನೆಯವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಶಾಕಿಂಗ್ ವಿಚಾರವಾಗಿತ್ತು. ಆದರೆ ಹಿಂದಿನ ದಿನ ಗಾಯಕ ಗುರುಕಿರಣ್ ನಿವಾಸದಲ್ಲಿ ಅದ್ಧೂರಿಯಾಗಿ ನಡೆದ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಅಲ್ಲಿ ಆಗಮಿಸಿದ ಇತರ ಸ್ಟಾರ್ ನಟ-ನಟಿಯರೊಟ್ಟಿಗೆ ಸಖತ್ ಎಂಜಾಯ್ ಮಾಡಿ, ಹಾಡು ಹಾಡಿ ಖುಷಿ ಪಟ್ಟಿದ್ದರು. ಮಕ್ಕಳ ಜೊತೆ ಮಾತನಾಡಬೇಕು ಸಮಯ ಕಳೆಯಬೇಕು ಎಂದು ಅಪ್ಪ ಪಾರ್ಟಿಯಿಂದ ಬೇಗ ಹೊರಟು ಬಿಟ್ಟರು. ಆದರೆ ಮರು ದಿನ ಕೇಳಿ ಬಂದಿದ್ದು ಈ ನ್ಯೂಸ್. 

ಅಪ್ಪು ಜೊತೆಗೆ ಪಾರ್ಟಿ ಆಚರಿಸಿಕೊಂಡ ಕ್ಷಣ, ಕೊನೆಯ ದಿನ ಏನ್ ಆಯ್ತು ಎಂದು ಗಾಯಕ ಗುರುಕಿರಣ್ ಹಂಚಿಕೊಂಡಿದ್ದಾರೆ. ಅಂಬರೀಶ್‌ ಅಣ್ಣ ಇರಲಿಲ್ಲ ಅಂತ ಎರಡು ವರ್ಷ ಹುಟ್ಟುಹಬ್ಬ ಮಾಡಲಿಲ್ಲ ಹೀಗಾಗಿ ಅಂದು ಎಲ್ಲರೊಟ್ಟಿಗೆ ಆಚರಿಸಿಕೊಂಡಿದ್ದು. ಆ ದಿನ ತುಂಬಾನೇ ಚೆನ್ನಾಗಿತ್ತು ಗಂಧದ ಗುಡಿ ಸಣ್ಣ ಪುಟ್ಟ ವಿಡಿಯೋ ತೋರಿಸುತ್ತಿದ್ದರು. ಕಳೆದ ಒಂದು ವಾರದಿಂದ ಅವರಿಗೆ ಬೆನ್ನು ನೋವು ಇತ್ತು ಅದರ ಹೊರತು ಯಾವುದೇ ನೋವು ಬಗ್ಗೆ ಹೇಳಿಕೊಂಡಿರಲಿಲ್ಲ. ತುಂಬಾ ಪಾಸಿಟಿವ್ ಆಂಡ್ ಆಕ್ಟಿವ್ ಆಗಿದ್ದರು. ಕೆಲವರೊಟ್ಟಿಗೆ ಅವರೇ ಹೋಗಿ ಪರಿಚಯ ಮಾಡಿಕೊಂಡು ಮಾತನಾಡಿದರು. ರಾತ್ರಿ ಮಗಳ ಜೊತೆ ರೌಂಡ್ ಹೋಗುತ್ತಾರೆ ಹೀಗಾಗಿ ಕೇಕ್ ಕಟ್ ಮಾಡಿ ಹೊರಟು ಎಂದು ಖಾಸಗಿ ಟಿವಿ ಸಂದರ್ಶನದಲ್ಲಿ ಗುರುಕಿರಣ್ ಮಾತನಾಡಿದ್ದಾರೆ. 

ಹೆಂಗಸ್ರು ತಮ್ಮ ದೇಹದ ಈ ಭಾಗವನ್ನು ಪದೇ ಪದೇ ಮುಟ್ಟಿಕೊಳ್ತಿದ್ದರೆ ಗಂಡಸರ ಎದೆ ಡವಡವ ಅನ್ನೋದು ಗ್ಯಾರಂಟಿ!

'ನನಗೆ ಬೆಳಗ್ಗೆ ಫೋನ್ ಬಂತು ಅಪ್ಪು ಇಲ್ಲ ಅಂತ. ಏನೂ ಕ್ಲಾರಿಟಿ ಇಲ್ಲ ಅಂತ. ಈ ರೀತಿ ಗಾಸಿಪ್‌ಗಳು ಇದ್ದೇ ಇರುತ್ತದೆ. ಕಣ್ಣನಲ್ಲಿ ನೋಡಲು ತನಕ ನಂಬಲು ಸಾಧ್ಯವಿಲ್ಲ. ಸ್ನೇಹಿತರಿಗೆ ಕರೆ ಮಾಡಿದೆ ಪೊಲೀಸರು ಬಂದಿದ್ದಾರೆ ಅಂದ್ರು ಇನ್ನೂ ಸ್ವಲ್ಪ ಭಯ ಶುರುವಾಯ್ತು. ಹಿಂದಿನ ದಿನ ತುಂಬಾ ಚೆನ್ನಾಗಿದ್ದರು. ಈ ರೀತಿ ಯಾರಿಗೂ ಆಗಬಾರದು. ಪ್ರಥಮ ಚಿಕಿತ್ಸೆ ಸರಿಯಾಗಿ ನಡೆದಿದ್ದರೆ ಇದೆಲ್ಲಾ ಆಗುತ್ತಿರಲಿಲ್ಲ. ಅವರಿದಿದ್ದರೆ 50ನೇ ಹುಟ್ಟುಹಬ್ಬ ಆಚರಣೆ ನಡೆಯುತ್ತಿತ್ತು ಮತ್ತಷ್ಟು ಸಿನಿಮಾಗಳು ಬರುತ್ತಿತ್ತು' ಎಂದು ಗುರು ಕಿರಣ್ ಹೇಳಿದ್ದಾರೆ. 

ಅಬ್ಬಬ್ಬಾ! 'ಯಜಮಾನ' ಸೀರಿಯಲ್‌ ನಟಿ ಮಧುಶ್ರೀ ಭೈರಪ್ಪ ಸಂಭಾವನೆ ಕೇಳಿ ಎಲ್ಲರೂ ಶಾಕ್ ಶಾಕ್.....

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ