ಗಂಗಾವತಿ: ಶ್ರೀ ಪ್ರಸನ್ನ ವೆಂಕಟದಾಸರು ಸಿನಿಮಾದ ಪೋಸ್ಟರ್ ಬಿಡುಗಡೆ

Published : Jul 05, 2023, 11:03 PM IST
ಗಂಗಾವತಿ: ಶ್ರೀ ಪ್ರಸನ್ನ ವೆಂಕಟದಾಸರು ಸಿನಿಮಾದ ಪೋಸ್ಟರ್ ಬಿಡುಗಡೆ

ಸಾರಾಂಶ

ದಾಸ ಸಾಹಿತ್ಯ ವಚನ ಸಾಹಿತ್ಯ ಕರ್ನಾಟಕದ ಎರಡು ಕಣ್ಣುಗಳು ಇದ್ದಂತೆ. ಹಾಗಾಗಿ ಆ ಸಾಹಿತ್ಯವನ್ನು ಓದುವುದರ ಮೂಲಕ ನಮ್ಮ ಮಕ್ಕಳಿಗೂ ದಾಸರ, ಶರಣರ ಪರಿಚಯ ಮಾಡಿಕೊಡಬೇಕು ಎಂದು ತಿಳಿಸಿದ ನಾರಾಯಣ್ ರಾವ್. 

ಗಂಗಾವತಿ(ಜು.05): ಶ್ರೀ ಪ್ರಸನ್ನ ವೆಂಕಟದಾಸರು ಚಲನಚಿತ್ರದ ಪೋಸ್ಟರ್ ಹಿರೇಜಂತಕಲ್‌ನ ಶ್ರೀ ಪ್ರಸನ್ನ ಪಂಪ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಇಂದು(ಬುಧವಾರ) ಬಿಡುಗಡೆಯಾಗಿದೆ.

ಪೋಸ್ಟರ್ ಅನ್ನು ಬಿಡುಗಡೆಗೊಳಿಸದ ನಂತರ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡರಾದ ನಾರಾಯಣ್ ರಾವ್ ಅವರು, ದಾಸ ಸಾಹಿತ್ಯ ವಚನ ಸಾಹಿತ್ಯ ಕರ್ನಾಟಕದ ಎರಡು ಕಣ್ಣುಗಳು ಇದ್ದಂತೆ. ಹಾಗಾಗಿ ಆ ಸಾಹಿತ್ಯವನ್ನು ಓದುವುದರ ಮೂಲಕ ನಮ್ಮ ಮಕ್ಕಳಿಗೂ ದಾಸರ, ಶರಣರ ಪರಿಚಯ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

'ನೀರಾ ಆರ್ಯ' ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ: ಇದು ನೇತಾಜಿ ಕಟ್ಟಿದ ಮೊದಲ ಮಹಿಳಾ ಆರ್ಮಿಯ ಕಥೆ

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಮಾತನಾಡಿ, ಶ್ರೀ ಪ್ರಸನ್ನ ವೆಂಕಟದಾಸರ ಚಿತ್ರೀಕರಣ ಗಂಗಾವತಿಯ ಭಾಗದಲ್ಲಿ ಹೆಚ್ಚು ಚಿತ್ರೀಕರಿಸಲಾಗಿದೆ ಮತ್ತು ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಪ್ರತಿಭೆಗಳನ್ನು ಕರ್ನಾಟಕಕ್ಕೆ ಪರಿಚಯಿಸಿದ ಕೀರ್ತಿ ಹವಾಲ್ದಾರ್ ಅವರಿಗೆ ಸಲ್ಲುತ್ತದೆ ಎಂದರು.

ನ್ಯಾಯವಾದಿ ನಾಗರಾಜ್ ಗುತ್ತೇದಾರ ಮಾತನಾಡಿ, ದಾಸರನ್ನು ಒಂದು ವರ್ಗಕ್ಕೆ ಸೀಮಿತ ಗೊಳಿಸದೇ ಎಲ್ಲರು ಅವರ ಸಾಹಿತ್ಯ ಓದು ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಚಲನಚಿತ್ರದ ವೆಂಕಟೇಶ್ವರನ ಪಾತ್ರದಲ್ಲಿ ನಟಿಸಿರುವ ವಿಷ್ಣುತೀರ್ಥ ಜೋಶಿ ಮಾತನಾಡಿ, ಜು. 7 ರಂದು ಬಿಡುಗಡೆಗೊಳ್ಳುತ್ತಿರುವ ಚಲನಚಿತ್ರವನ್ನು  ಕರ್ನಾಟಕದ ಕಲಾಮನಸುಗಳ ಚಿತ್ರಮಂದಿರಕ್ಕೆ ಬಂದು ವೀಕ್ಷಿಸಿ ಆಶೀರ್ವದಿಸಿ ಪ್ರೋತ್ಸಾಹಿಸಬೇಕೆಂದು ವಿನಂತಿಸಿದರು.

ವೇದಿಕೆ ಮೇಲೆ ಚಂದ್ರಪ್ಪ ಉಪ್ಪಾರ್, ವೆಂಕಟೇಶ್ ಅಮರ ಜ್ಯೋತಿ, ಡಾ. ಸಿ. ಮಹಾಲಕ್ಷ್ಮಿ,, ಮುರಳಿಧರ, ನ್ಯಾಯವಾದಿ ಹಷ ಮುದ್ದೀನ್,  ನಾಗರಾಜ್ ಇಂಗಳಗಿ, ನ್ಯಾಯವಾದಿ ಪ್ರಹ್ಲಾದ್ ರಾವ್ ನವಲಿ, ನ್ಯಾಯವಾದಿ ನಾಗರಾಜ್ ಗುತ್ತೇದಾರ, ವಾಸುದೇವ ರಾವ್ ನವಲಿ, ಉಪಸ್ಥಿತರಿದ್ದರು. ರಾಮಮೂರ್ತಿ ನವಲಿ ನಿರೂಪಣೆ, ನ್ಯಾಯವಾದಿ ಶರದ್ ದಂಡಿನ್ ಸ್ವಾಗತಿಸಿದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?