777 ಚಾರ್ಲಿ ವೀಕ್ಷಿಸಿದ ರಜಿನಿಕಾಂತ್; ರಕ್ಷಿತ್‌ಗೆ ಕರೆ ಮಾಡಿ ಸೂಪರ್ ಸ್ಟಾರ್ ಹೇಳಿದ್ದೇನು?

Published : Jun 22, 2022, 02:39 PM IST
777 ಚಾರ್ಲಿ ವೀಕ್ಷಿಸಿದ ರಜಿನಿಕಾಂತ್; ರಕ್ಷಿತ್‌ಗೆ ಕರೆ ಮಾಡಿ ಸೂಪರ್ ಸ್ಟಾರ್ ಹೇಳಿದ್ದೇನು?

ಸಾರಾಂಶ

ಸೂಪರ್ ಸ್ಟಾರ್ ರಜನಿಕಾಂತ್ 777 ಚಾರ್ಲಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 777 ಚಾರ್ಲಿ ವೀಕ್ಷಿಸಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಕ್ಷಿತ್ ಶೆಟ್ಟಿಗೆ ಕರೆ ಮಾಡಿದ್ದಾರೆ. ಸಿನಿಮಾದ ಬಗ್ಗೆ ಹಾಡಿಹೊಗಳಿದ್ದಾರೆ.   

ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ( Rakshith shetty) ಸದ್ಯ 777 ಚಾರ್ಲಿ (777 Charlie) ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.  ಸಿನಿ ಗಣ್ಯರು ಸಹ ರಕ್ಷಿತ್ ಸಿನಿಮಾಗೆ ಫಿದಾ ಆಗಿದ್ದಾರೆ. ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಪರಭಾಷೆಯ ಗಣ್ಯರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆಗೆ ಮನಸೋತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇನ್ನು ರಾಜಕೀಯ ಗಣ್ಯರು ಸಿನಿಮಾ ಚಾರ್ಲಿಗೆ ನಮನಸೋತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಅನೇಕರು ಸಿನಿಮಾ ನೋಡಿ ಹಾಡಿಹೊಗಳಿದ್ದಾರೆ. ಸಿ ಎಂ ಬೊಮ್ಮಾಯಿ ರಕ್ಷಿತ್ ಸಿನಿಮಾ ನೋಡಿ ಕಣ್ಣೀರಿಟ್ಟಿದ್ದರು.

ಬಾಕ್ಸ್ ಆಫೀಸ್‌ನಲ್ಲಿ ಚಾರ್ಲಿ ಭರ್ಜರಿ ಕಮಾಯಿ ಮಾಡಿದೆ. ಈ ಸಿನಿಮಾಗೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವಾಗಲೆ ಸೂಪರ್ ಸ್ಟಾರ್ ರಜನಿಕಾಂತ್ (Superstar Rajinikanth) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 777 ಚಾರ್ಲಿ ವೀಕ್ಷಿಸಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಕ್ಷಿತ್ ಶೆಟ್ಟಿಗೆ ಕರೆ ಮಾಡಿದ್ದಾರೆ. ಸಿನಿಮಾದ ಬಗ್ಗೆ ಹಾಡಿಹೊಗಳಿದ್ದಾರೆ. 

'ಇವತ್ತಿನ ದಿನದ ಆರಂಭ ಅದ್ಭತವಾಗಿತ್ತು. ರಜಿನಿಕಾಂತ್ ಅವರಿಂದ ಫೋನ್ ಬಂದಿತ್ತು. ನಿನ್ನೆ ರಾತ್ರಿ ರಜನಿಕಾಂತ್ 777 ಚಾರ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾದ ಅದ್ಭುತ ಮೆಕಿಂಗ್ ಗುಣಮಟ್ಟದ ಬಗ್ಗೆ, ಸಿನಿಮಾದ ಆಳವಾದ ವೀನ್ಯಾಸದ ಬಗ್ಗೆ ಹೆಚ್ಚು ಮಾತನಾಡಿದರು. ಮತ್ತು ಕ್ಲೈಮ್ಯಾಕ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊನೆಯಲ್ಲಿ ಆಧ್ಯಾತ್ಮಿಕ ಮಾತಿನ ಮೂಲಕ ಮುಗಿಸಿದರು. ಅಂತಹ ಮಾತುಗಳನ್ನು ಸೂಪರ್ ಸ್ಟಾರ್ ಅವರಿಂದನೇ ಕೇಳುವುದು ಅದ್ಭುತವಾಗಿತ್ತು. ಧನ್ಯವಾದಗಳು ರಜನಿ ಸರ್' ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. 

ನಾನು ನಿಮ್ಮ ಜೊತೆ ನಟಿಸಬೇಕು; ರಕ್ಷಿತ್‌ಗೆ ಸ್ಟಾರ್ ನಟಿಯ ಬೇಡಿಕೆ

ರಕ್ಷಿತ್ ಶೆಟ್ಟಿ ಅವರ ಈ ಟ್ವೀಟ್‌ಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ. ಅಂದಹಾಗೆ ಈ ಮೊದಲು ರಿಲೀಸ್ ಆಗಿದ್ದ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ವೀಕ್ಷಿಸಿ ಹಾಡಿಹೊಗಳಿದ್ದರು. ಸಿನಿಮಾ ವೀಕ್ಷಿಸಿ  ರಜನಿಕಾಂತ್ ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ ಕರೆ ಮಾಡಿದ್ದರು. ಇದೀಗ 777 ಚಾರ್ಲಿ ವೀಕ್ಷಿಸಿದ್ದಾರೆ. ಕನ್ನಡ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದು ಕನ್ನಡಿಗರಿಗೆ ಖುಷಿತಂದಿದೆ.

ಚಾರ್ಲಿ ಮನುಷ್ಯ ಮತ್ತು ನಾಯಿ ನಡುವಿನ ಭಾವನಾತ್ಮಕ ಕಥೆಯಾಗಿದೆ. ಈ ಸಿನಿಮಾದಲ್ಲಿ ಶ್ವಾನ ಚಾರ್ಲಿ ಅದ್ಭುತವಾಗಿ ನಟಿಸಿದೆ. ಚಾರ್ಲಿ ನಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇನ್ನು ರಕ್ಷಿತ್ ಶೆಟ್ಟಿ ನಟನೆ ಕೂಡ ಪ್ರೇಕ್ಷಕರ ಹೃದಯ ಗೆದ್ದಿದೆ. ಎಲ್ಲಾ ಕಡೆಯಿಂದನೂ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವಾಗಲೇ ಕರ್ನಾಕಟದಲ್ಲಿ ಟ್ಯಾಕ್ಸ್ ಫ್ರಿ ಸಿಕ್ಕಿದೆ. 

ಚಾರ್ಲಿಯನ್ನು ಮೆಚ್ಚಿದ ಪರಭಾಷಾ ಸ್ಟಾರ್ಸ್; ಬೋನಿ ಕಪೂರ್, ರಿಕಿ, ಮಧುರ್ ಭಂಡಾರ್ಕರ್ ಪ್ರತಿಕ್ರಿಯೆ

777 ಚಾರ್ಲಿಗೆ ತೆರಿಗೆ ವಿನಾಯಿತಿ

ಸಿನಿಮಾ ವೀಕ್ಷಿಸಿದ ಬಸವರಾಜ್ ಬೊಮ್ಮಾಯಿ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದರು. ರಾಜ್ಯದ ಜಿಎಸ್‌ಟಿ ಪಾಲಿನಿಂದ ವಿನಾಯಿತಿ ನೀಡಿದರು.  ಶ್ವಾನ ಪ್ರೀಯ ಬೊಮ್ಮಾಯಿ ಖುದ್ದು ಈ ಚಿತ್ರವನ್ನು ವೀಕ್ಷಿಸಿದ್ದರು. ಬಳಿಕ ಮಾತನಾಡಿ ಸಿಎಂ ಬೊಮ್ಮಾಯಿ ತಮ್ಮ ಮುದ್ದಿನ ಶ್ವಾನವನ್ನು ನೆನೆದು ಭಾವುಕರಾಗಿದ್ದರು. ಚಿತ್ರ ವೀಕ್ಷಿಸಿದ ಬಳಿಕ ಎಲ್ಲರೂ ಈ ಚಿತ್ರ ವೀಕ್ಷಿಸಲು ಮನವಿ ಮಾಡಿದ್ದರು.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?