ಸೂರ್ಯ ವಸಿಷ್ಠ ಹಾಡು ಬರೆದ್ರು, ಮಾಧುರಿ ಶೇಷಾದ್ರಿ ಹಾಡಿದ್ರು; 'ಸಾರಾಂಶ' ಸಾಂಗ್ ಸೂಪರ್ ಹಿಟ್!

Published : Jan 26, 2024, 08:02 PM ISTUpdated : Jan 26, 2024, 08:05 PM IST
ಸೂರ್ಯ ವಸಿಷ್ಠ ಹಾಡು ಬರೆದ್ರು, ಮಾಧುರಿ ಶೇಷಾದ್ರಿ ಹಾಡಿದ್ರು; 'ಸಾರಾಂಶ' ಸಾಂಗ್ ಸೂಪರ್ ಹಿಟ್!

ಸಾರಾಂಶ

ಸಾಮಾನ್ಯವಾಗಿ, ಯಾವುದೇ ಸಿನಿಮಾ ವಿಚಾರದಲ್ಲಾದರೂ ಹಾಡುಗಳಿಗೆ ಬೇರೆಯದ್ದೇ ತೆರನಾದ ಕಿಮ್ಮತ್ತಿದೆ. ಈವತ್ತಿಗೂ ಅದನ್ನು ಸಿನಿಮಾವೊಂದರ ಆಹ್ವಾನ ಪತ್ರಿಕೆ ಎಂಬಂತೆಯೇ ಪರಿಭಾವಿಸಲಾಗುತ್ತದೆ. 

ಸೂರ್ಯ ವಸಿಷ್ಠ ನಿರ್ದೇಶನದಲ್ಲಿ ಮೂಡಿ ಬಂದಿರುವ `ಸಾರಾಂಶ' ಚಿತ್ರ ಸದ್ಯದ ಮಟ್ಟಿಗೆ ಪ್ರೇಕ್ಷಕರ ಗಮನ ಸೆಳೆದಿದೆ. ಅದರ ಬಗ್ಗೆ ಒಂದಷ್ಟು ಚರ್ಚೆ, ನಿರೀಕ್ಷೆಗಳು ಮೂಡಿಕೊಂಡಿವೆ. ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸನ್ನದ್ಧವಾಗಿ ನಿಂತಿರುವ ಈ ಚಿತ್ರದ ಚೆಂದದ ಲಿರಿಕಲ್ ಸಾಂಗ್ ಇದೀಗ ಬಿಡುಗಡೆಗೊಂಡಿದೆ. 

ಕೇಳಿದಾಕ್ಷಣವೇ ಹೊಸ ಅನುಭೂತಿಯೊಂದನ್ನು ತುಂಬುವ, ಸೂಕ್ಷ್ಮವಾಗಿ ಕಥಾ ಹಂದರದೊಳಗೆ ಕೈ ಹಿಡಿದು ಕರೆದೊಯ್ಯುತ್ತಲೇ ಕಾಡುವ ಗುಣ ಹೊಂದಿರುವ ಈ ಹಾಡು, ಸಾರಾಂಶದ ಭಿನ್ನ ಕಥಾನಕಕ್ಕೆ ಕನ್ನಡಿ ಹಿಡಿದಂತೆ ಭಾಸವಾಗುತ್ತವೆ! ಅಪರಿಚಿತ ಲಾಲಿ ಹುಡುಕಿಹೆನು ನಿನ್ನಲಿ... ಅಂತ ಶುರುವಾಗುವ ಈ ಹಾಡು ಮೆಲ್ಲಗೆ ಆವರಿಸಿಕೊಳ್ಳುತ್ತಾ ಹೋಗುತ್ತದೆ. ಉದಿತ್ ಹರಿತಾಸ್ (ಅಜ್ಞಾತ) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡು, ಆರಂಭಿಕವಾಗಿಯೇ ಹೊಸಾ ಫೀಲ್ ನೊಂದಿಗೆ ತಾಕುವಂತಿದೆ. 

ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ ಬರೆದಿರುವ ಹಾಡಿನ ಸಾಲುಗಳು ಭಿನ್ನವಾದ ಸಂಗೀತದ ಕುಸುರಿಯಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿರುವ ಮಾಧುರಿ ಶೇಷಾದ್ರಿ ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಹಾಡು, ಸಾರಾಂಶದೊಳಗಿನ ಅಸಲೀ ಸಾರಾಂಶದತ್ತ ಕೇಳುಗರೆಲ್ಲ ಮೋಹಗೊಳ್ಳುವಂತೆ ಮಾಡಿ ಬಿಟ್ಟಿದೆ.

ಸಾಮಾನ್ಯವಾಗಿ, ಯಾವುದೇ ಸಿನಿಮಾ ವಿಚಾರದಲ್ಲಾದರೂ ಹಾಡುಗಳಿಗೆ ಬೇರೆಯದ್ದೇ ತೆರನಾದ ಕಿಮ್ಮತ್ತಿದೆ. ಈವತ್ತಿಗೂ ಅದನ್ನು ಸಿನಿಮಾವೊಂದರ ಆಹ್ವಾನ ಪತ್ರಿಕೆ ಎಂಬಂತೆಯೇ ಪರಿಭಾವಿಸಲಾಗುತ್ತದೆ. ಆ ನಿಟ್ಟಿನಲ್ಲಿ ಹೇಳುವುದಾದರೆ, ಸಾರಾಂಶ ಚಿತ್ರದ ಆಹ್ವಾನ ನಿಜಕ್ಕೂ ಮನಸೆಳೆಯುವಂತಿದೆ. ಅಂದಹಾಗೆ, ಈ ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದ್ದಾವೆ. 

ಇದೀಗ ಅದರಲ್ಲೊಂದು ಹಾಡು ಪ್ರೇಕ್ಷಕರನ್ನು ತಲುಪಿಕೊಂಡಿದೆ. ಅದರ ಒಟ್ಟಂದವೇ ಉಳಿದೆರಡು ಹಾಡುಗಳಿಗಾಗಿ ಕಾತರಿಸುವಂತೆ ಮಾಡಿದೆ. ಅದು ಈ ಚಿತ್ರತಂಡದ ಶ್ರಮಕ್ಕೆ ದಕ್ಕಿದ ನಿಜವಾದ ಗೆಲುವೆಂಬುದರಲ್ಲಿ ಯಾವ ಸಂದೇಹವೂ ಇಲ್ಲ. ಈ ಸಿನಿಮಾ ವಿಶಿಷ್ಟವಾದ ಕಥೆಯನ್ನೊಳಗೊಂಡಿದೆ ಎಂಬ ಸ್ಪಷ್ಟ ಸುಳಿವನ್ನು ಈ ಹಿಂದೆಯೇ ಚಿತ್ರತಂಡ ಬಿಟ್ಟುಕೊಟ್ಟಿತ್ತು. ಅದಕ್ಕೆ ಈ ಹಾಡು ಅಕ್ಷರಶಃ ಪುರಾವೆಯಂತೆ ಮೂಡಿಬಂದಿದೆ. 

ವಿಜಯಲಕ್ಷ್ಮೀ ದರ್ಶನ್ ಜತೆ ಕಿತ್ತಾಡಿದ ಪವಿತ್ರಾ ಗೌಡ; ಯಾರಿವರು, ಏನ್ ಕೆಲ್ಸ ಮಾಡ್ತಿದಾರೆ..?!

ಸಾರಾಂಶದಲ್ಲಿ ದೀಪಕ್ ಸುಬ್ರಮಣ್ಯ, ಸೂರ್ಯ ವಸಿಷ್ಠ, ಶೃತಿ ಹರಿಹರನ್ ಮತ್ತು ಶ್ವೇತಾ ಗುಪ್ತ ಪ್ರಮುಖ ಪಾತ್ರಗಳಾಗಿ ನಟಿಸಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣವಿದೆ.  ಖುದ್ದು ಸೂರ್ಯ ವಸಿಷ್ಠ ಮತ್ತು ಗಂಟುಮೂಟೆ ಖ್ಯಾತಿಯ ರೂಪಾ ರಾವ್ ಸಂಭಾಷಣೆ ಬರೆದಿದ್ದಾರೆ. 

ಪುಟ್ಟಣ್ಣರ ಪತ್ನಿಯಾಗಿದ್ದ ನಟಿ ಆರತಿ ಅಮೆರಿಕಾದಲ್ಲಿ ಏನ್ಮಾಡ್ತಿದಾರೆ; ಕೋಲಾರಕ್ಕೆ ಯಾಕೆ ಬರ್ತಾರೆ!?

ಅಪರಾಜಿತ್ ಹಿನ್ನೆಲೆ ಸಂಗೀತ, ಪ್ರದೀಪ್ ನಾಯಕ್ ಸಂಕಲನವಿರುವ ಈ ಚಿತ್ರವನ್ನು ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ಅವರು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಹಾಗೂ ಕ್ಲಾಪ್ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇಲ್ಲಿಯವರಗೂ ಖುಷಿ ಗೌಡ 'ದರ್ಶನ್ ಶ್ರೀನಿವಾಸ'ರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ; ಪವಿತ್ರಾ ಗೌಡ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Mark Movie: ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!