ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ತಾರಾ ಮನವಿ!

Kannadaprabha News   | Asianet News
Published : May 22, 2021, 10:19 AM IST
ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ತಾರಾ ಮನವಿ!

ಸಾರಾಂಶ

ಚಿತ್ರರಂಗದ ಕಾರ್ಮಿಕರಿಗೆ ಸಹಾಯ‌ ಮಾಡುವಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಟಿ ತಾರಾ, ಸಾರಾ ಗೋಂವಿಂದ್.  

ಕನ್ನಡ ಚಿತ್ರರಂಗದ ಕಾರ್ಮಿಕರಿಗೆ, ಸಿನಿಮಾ ಪತ್ರಕರ್ತರಿಗೆ ಹಾಗೂ ಸಿನಿಮಾ ಪ್ರಚಾರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ನಟಿ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಮಗದ ಅಧ್ಯಕ್ಷೆ ತಾರಾ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಬಿಗ್‌ಬಾಸ್‌ ಮನೆ, ಕಂಠೀರವ ಸ್ಟುಡಿಯೋನ ಕೋವಿಡ್‌ ಸೆಂಟರ್ ಮಾಡಿ: ಭಾ.ಮಾ ಹರೀಶ್ 

ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಾರಾ ಅವರು ಈ ಕುರಿತು ಮನವಿ ಸಲ್ಲಿದ್ದಾರೆ. ಕೊರೋನಾ ಕಾರಣಕ್ಕೆ ಸೆಮಿ ಲಾಕ್‌ಡೌನ್ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಂತೆ ಚಿತ್ರರಂಗದ ಕಾರ್ಮಿಕರು, ಸಿನಿಮಾ ಪತ್ರಕರ್ತರು, ಪ್ರಚಾರಕರ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್ ಹಾಗೂ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಅವರು ಹಾಜರಿದ್ದರು. ತಾರಾ ಅವರಿಂದ ಮನವಿ ಸ್ವೀಕರಿಸಿರುವ ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲನೆ ಮಾಡಿ ಸೂಕ್ತ ರೀತಿಯಲ್ಲಿ ಸ್ಪಂಧಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಂಡನ ಜೊತೆ ಜಾಲಿಯಾಗಿ ಮೆಲ್ಬೋರ್ನ್‌ ಸುತ್ತಾಡಿ ಬಂದ ಸೋನಲ್‌!
ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!