ಹಿರಿಯ ನಟ ಶಂಖನಾದ ಅರವಿಂದ್ ಕೊರೋನಾಗೆ ಬಲಿ

Suvarna News   | Asianet News
Published : May 07, 2021, 01:59 PM IST
ಹಿರಿಯ ನಟ ಶಂಖನಾದ ಅರವಿಂದ್ ಕೊರೋನಾಗೆ ಬಲಿ

ಸಾರಾಂಶ

ಉಸಿರಾಟದ ತೊಂದರೆಯಿಂದ ಕನ್ನಡ ಚಿತ್ರರಂಗದ ಹಿರಿಯ ನಟ ಶಂಖನಾದ ಅರವಿಂದ್ (70) ಮೃತಪಟ್ಟಿದ್ದಾರೆ. 

ಬೆಂಗಳೂರು (ಮೇ.7): ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್‌ಗೆ ಕೊರೋನಾ ಸೋಂಕು ತಗುಲಿತ್ತು. ಕಳೆದ ಹತ್ತು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಮೇ 7, 2021ರಂದು ಕೊನೆಯುಸಿರೆಳೆದರು. ಅವರಿಗೆ 70 ವರ್ಷ ವಯಸ್ಸು.

ಜನವರಿ 23ರಂದು ಅರವಿಂದ್ ಪತ್ನಿ ರಮಾ ಕೂಡ ಉಸಿರಾಟದ ತೊಂದರೆಯಿಂದ ಕೊನೆಯುಸಿರೆಳೆದ್ದರು.  ರಮಾ ಕನ್ನಡ ಚಿತ್ರರಂಗದಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ಈ ಹಾಸ್ಯ ನಟ ಮೂರು ಮಕ್ಕಳನ್ನು ಅಗಲಿದ್ದಾರೆ. 

ಕನ್ನಡ ಚಿತ್ರರಂಗದ ಮತ್ತೊಂದು ಧ್ವನಿ ಇನ್ನಿಲ್ಲ..! 

70-80ರ ದಶಕದಲ್ಲಿ ಅರವಿಂದ್ ಬಹು ಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದರು. ಕಾಶಿನಾಥ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಇತ್ತೀಚಿಗೆ ಕನ್ನಡದ ಕೆಲವೊಂದು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. 

ಕನ್ನಡ ಚಿತ್ರರಂಗ ಒಳ್ಳೆ ಕಲಾವಿನದನ್ನು ಇಂದು ಕಳೆದುಕೊಂಡಿದೆ. ಅರವಿಂದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar