‘ಬಾರೋ ಕಂದ’... ವಸಿಷ್ಠ ಸಿಂಹ ವಿಐಪಿ ಸಿನಿಮಾದಲ್ಲಿ ಕೆ.ಎಸ್‌.ಚಿತ್ರಾ ಹಾಡು!

Published : Jul 12, 2024, 05:27 PM ISTUpdated : Jul 13, 2024, 10:25 AM IST
‘ಬಾರೋ ಕಂದ’... ವಸಿಷ್ಠ ಸಿಂಹ ವಿಐಪಿ ಸಿನಿಮಾದಲ್ಲಿ ಕೆ.ಎಸ್‌.ಚಿತ್ರಾ ಹಾಡು!

ಸಾರಾಂಶ

ಸಿನಿಮಾ ಗೀತೆಗಳ ದಂತಕತೆ ಕೆ ಎಸ್ ಚಿತ್ರಾ ಇದೀಗ ವಸಿಷ್ಠ ಸಿಂಹ ನಟನೆಯ ‘ವಿಐಪಿ’ ಸಿನಿಮಾದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ವಿ ನಾಗೇಂದ್ರ ಪ್ರಸಾದ್ ರಚನೆಯ ತಾಯಿ - ಮಗನ ಬಾಂಧವ್ಯ ಸಾರುವ ‘ಬಾರೋ ಕಂದ’ ಎಂಬ ಹಾಡನ್ನು ಹಾಡಿದ್ದಾರೆ.  

ಸಿನಿಮಾ ಗೀತೆಗಳ ದಂತಕತೆ ಕೆ ಎಸ್ ಚಿತ್ರಾ ಇದೀಗ ವಸಿಷ್ಠ ಸಿಂಹ ನಟನೆಯ ‘ವಿಐಪಿ’ ಸಿನಿಮಾದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ವಿ ನಾಗೇಂದ್ರ ಪ್ರಸಾದ್ ರಚನೆಯ ತಾಯಿ - ಮಗನ ಬಾಂಧವ್ಯ ಸಾರುವ ‘ಬಾರೋ ಕಂದ’ ಎಂಬ ಹಾಡನ್ನು ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಈ ಗೀತೆಗೆ ಸಂಗೀತ ಸಂಯೋಜಿಸಿದ್ದಾರೆ. ದೇಶಕಂಡ ಜನಪ್ರಿಯ ಗಾಯಕಿ ಚಿತ್ರ ಅವರು ನಮ್ಮ ಸಿನಿಮಾದ ಹಾಡನ್ನು ಹಾಡಿದ್ದು ತುಂಬಾ ಸಂತೋಷವಾಗಿದೆ.  'ಬಾರೋ ಕಂದ' ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ.‌ 

ಹಾಡು ಹಾಡಿದ ನಂತರ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್ ಅವರ ಬಳಿ ನಾನು ಹಾಡಿರುವುದು ನಿಮಗೆ ಇಷ್ಟವಾಯಿತಾ? ಇಲ್ಲವಾದ್ದಲ್ಲಿ ಇನ್ನೊಮ್ಮೆ ಹಾಡುತ್ತೇನೆ ಎಂದರು. ಅಂತಹ ದೊಡ್ಡ ಗಾಯಕಿಯಾದರೂ ಅವರಲ್ಲಿರುವ ಸರಳತೆ ಎಲ್ಲರಿಗೂ ಮಾದರಿ ಎಂದು ತಿಳಿಸಿರುವ ಕಾರ್ಯಕಾರಿ ನಿರ್ಮಾಪಕ ಅಫ್ಜಲ್, ಬೆಂಗಳೂರು ಸುತ್ತಮುತ್ತ ವಿಐಪಿ ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿದೆ ಎಂದಿದ್ದಾರೆ. ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್‌ನಿಂದ 'ವಿಐಪಿ' ಚಿತ್ರ ಎಲ್ಲೆಡೆ ಜನಪ್ರಿಯವಾಗಿದೆ. ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಅದ್ಭುತ ಸಾಹಸ ಸನ್ನಿವೇಶಗಳಿದೆ. 

ವಸಿಷ್ಠ ಈವರೆಗಿನ ಪಾತ್ರಗಳಿಗಿಂತ ನಮ್ಮ ಚಿತ್ರದ ಪಾತ್ರ ವಿಭಿನ್ನವಾಗಿರುತ್ತದೆ ಎಂದು ನಿರ್ದೇಶಕ ಬ್ರಹ್ಮ ತಿಳಿಸಿದ್ದಾರೆ. ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್​ನಿಂದ ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇವೆ. ವಸಿಷ್ಠ ಸಿಂಹ ಅವರು ಈವರೆಗೆ ಮಾಡಿರದಂತಹ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡುತ್ತಿದ್ದಾರೆ ಎಂದಿದ್ದಾರೆ ನಿರ್ದೇಶಕ ಬ್ರಹ್ಮ. ಕಲಾಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್ ಮೋಹನ್ ಕುಮಾರ್ ಹಾಗೂ ಆರ್ ಅಚ್ಯುತ್ ರಾವ್ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ರಾಜ್‌ ಬಿ ಶೆಟ್ಟಿ 'ರೂಪಾಂತರ'ದಲ್ಲಿ ಒಂದಲ್ಲ, ಎರಡಲ್ಲ 5 ಕಥಾಸರಣಿಗಳು: ಈ ದಿನದಂದು ಸಿನಿಮಾ ರಿಲೀಸ್?

ಇದಕ್ಕೂ ಹಿಂದೆ ಚಿತ್ರಾ ಅವರು ಸುದೀಪ್‌ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಹಾಡಿದ್ದರು. ಅದಕ್ಕೂ ಮೊದಲು ಯೋಗರಾಜ ಭಟ್‌ ನಿರ್ದೇಶನದ ‘ಗಾಳಿಪಟ’ ಸಿನಿಮಾಗೆ ಇವರು ಹಾಡಿದ ‘ನದೀಂ ಧೀಮ್ ತನಾ’ ಹಾಡು ಬಲು ಜನಪ್ರಿಯವಾಗಿತ್ತು. ಸದ್ಯ ಚಿತ್ರ ಹಾಡಿರುವ ‘ವಿಐಪಿ’ ಆ್ಯಕ್ಷನ್‌ ಥ್ರಿಲ್ಲರ್‌ಗೆ ಬ್ರಹ್ಮ ನಿರ್ದೇಶಕರು. ಆರ್‌ಎಸ್‌ ಮೋಹನ್ ಕುಮಾರ್ ಹಾಗೂ ಆರ್ ಅಚ್ಯುತ್ ರಾವ್ ನಿರ್ಮಾಪಕರು. ತೇಜಸ್ವಿನಿ ಶರ್ಮ ನಾಯಕಿ. ಸುನೀಲ್ ಪುರಾಣಿಕ್, ಬಲ ರಾಜವಾಡಿ , ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ ಅಭಿನಯಿಸುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ