'ಭಿನ್ನ ಕಂಟೆಂಟ್‌ ಆರಿಸಿಕೊಳ್ಳಲು ಕಾರಣ ಅಪ್ಪು ಚಿಕ್ಕಪ್ಪ..' ವಿನಯ್‌ ರಾಜ್‌ಕುಮಾರ್‌ ಮಾತು

Published : Jul 03, 2026, 10:14 AM IST
Vinay Rajkumar Gramayana

ಸಾರಾಂಶ

ವಿನಯ್ ರಾಜ್‌ಕುಮಾರ್ ಅವರು ತಮಗೆ ವಿಭಿನ್ನ ಸಿನಿಮಾಗಳನ್ನು ಆಯ್ದುಕೊಳ್ಳಲು ಚಿಕ್ಕಪ್ಪ ಪುನೀತ್ ರಾಜ್‌ಕುಮಾರ್ ಅವರೇ ಪ್ರೇರಣೆ ಎಂದು ಹೇಳಿದ್ದಾರೆ. ಗ್ರಾಮಾಯಣ ರಿಲೀಸ್‌ ಸಂದರ್ಭದಲ್ಲಿ ಅವರು ಕನ್ನಡಪ್ರಭಕ್ಕೆ ನೀಡಿದ ವಿಶೇಷ ಸಂದರ್ಶನ. 

- ರಾಜೇಶ್ ಶೆಟ್ಟಿ

ಈ ಸಿನಿಮಾ ಒಪ್ಪಿಕೊಳ್ಳಲು ಏನು ಕಾರಣ?

ಈ ಸಿನಿಮಾದ ನಿರ್ದೇಶಕ ದೇವನೂರು ಚಂದ್ರು ಅವರು ಈ ಕತೆ ಹೇಳಲು ಬಂದಾಗಲೇ ಬೌಂಡ್‌ ಸ್ಕ್ರಿಪ್ಟ್‌ ಹಿಡಿದುಕೊಂಡು ಬಂದಿದ್ದರು. ಲೊಕೇಷನ್ ಫೋಟೋಗಳಿದ್ದವು. ಎಲ್ಲಾ ಪಾತ್ರಗಳ ಕಾಸ್ಟ್ಯೂಮ್‌ ಮೆಟೀರಿಯಲ್‌ ತಂದಿದ್ದರು. ಸಿನಿಮಾದ ಪೋಸ್ಟರ್‌ ಹೇಗಿರುತ್ತದೆ ಎಂದು ಪೇಂಟ್‌ ಮಾಡಿಸಿಕೊಂಡು ಬಂದಿದ್ದರು. ಅವರ ತಯಾರಿ ನೋಡಿಯೇ ನಾನು ಇಂಪ್ರೆಸ್‌ ಆದೆ. ಜೊತೆ ಆ ಸಂದರ್ಭದಲ್ಲಿ ನಾನು ಗ್ರಾಮೀಣ ಭಾಗದ, ಬೇರು ಮಟ್ಟದ ಕತೆಯ ಸಿನಿಮಾ ಮಾಡಿರಲಿಲ್ಲ. ಕತೆ ಮತ್ತು ನಿರ್ದೇಶಕರ ಪ್ರಯತ್ನ ಎರಡೂ ಉತ್ತಮ ಅನ್ನಿಸಿದ್ದರಿಂದ ಒಪ್ಪಿಕೊಂಡೆ.

ತಯಾರಿ ಹೇಗಿತ್ತು?

ದೇವನೂರಿಗೆ ಹೋಗಿ ಅಲ್ಲಿ ಸ್ವಲ್ಪ ಸಮಯ ಕಾಲ ಕಳೆದೆ. ಆ ಊರಿನ ಭಾಷೆಯ ಸ್ಲ್ಯಾಂಗ್‌ ಬೇರೆ ಥರ ಇದೆ. ಅದನ್ನು ಪ್ರಾಕ್ಟೀಸ್‌ ಮಾಡಿದೆ. ಜೊತೆಗೆ ನನ್ನ ಪಾತ್ರ ಸ್ವಲ್ಪ ಫ್ರೀ ಇರುವ ಪಾತ್ರ. ಜಾಸ್ತಿ ಯೋಚನೆ ಮಾಡದೆ ಪ್ರತಿಕ್ರಿಯಿಸುವ ಪಾತ್ರ. ತಕ್ಷಣ ರಿಯಾಕ್ಟ್‌ ಮಾಡುವ ಪಾತ್ರ. ಅದಕ್ಕಾಗಿ ಮಾನಸಿಕವಾಗಿ ತಯಾರಾಗುತ್ತಾ ಹೋದೆ. ಈ ತಯಾರಿಯ, ಸಿದ್ಧತೆಯನ್ನು ಈ ಸಿನಿಮಾದಲ್ಲಿಯೇ ಕಾಣಬಹುದು.

ಈ ಸಿನಿಮಾದ ವಿಶೇಷತೆ ಏನು?

ಕನ್ನಡದ ಕತೆ. ಅಪ್ಪಟ ಗ್ರಾಮೀಣ ಭಾಗದ ಕತೆ. ಬಹಳ ಸೊಗಸಾದ ಹಾಡುಗಳಿವೆ. ಜೊತೆಗೆ ಅತ್ಯುತ್ತಮ ಕಲಾವಿದರಿದ್ದಾರೆ. ಅಪರ್ಣಾ, ಗೋಪಾಲಕೃಷ್ಣ ದೇಶಪಾಂಡೆ, ಮೇಘಾ ಶೆಟ್ಟಿ ಎಲ್ಲರೂ ಅದ್ಭುತವಾಗಿ ನಟಿಸಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ನಿರ್ದೇಶಕ ದೇವನೂರು ಚಂದ್ರು ಅವರು ಒಂದೊಳ್ಳೆ ಕತೆ ಬರೆದಿದ್ದಾರೆ. ಅದನ್ನು ಅಷ್ಟೇ ಚೆನ್ನಾಗಿ ತೆರೆ ಮೇಲೆ ಮೂಡುವ ಹಾಗೆ ಮಾಡಿದ್ದಾರೆ. ಈ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಒಂದೊಳ್ಳೆ ಅನುಭವ ಸಿಗುತ್ತದೆ.

ಈ ಸಿನಿಮಾದ ಪಯಣ ಬಹಳ ದೀರ್ಘವಾಗಿತ್ತು. ರಿಲೀಸ್‌ವರೆಗೂ ಬರುವಾಗ ನಿಮ್ಮ ಮನಸ್ಥಿತಿ ಹೇಗಿತ್ತು?

ಈ ಪಯಣ ಶುರುವಾಗಿದ್ದು 8 ವರ್ಷಗಳ ಹಿಂದೆ. ಆದರೆ 2 ವರ್ಷದ ಹಿಂದೆ ಮತ್ತೆ ಹೊಸತಾಗಿ ಶೂಟ್ ಮಾಡಿದೆವು. ಈ ಜರ್ನಿ ಶುರುವಾಗಿದ್ದು 8 ವರ್ಷ ಹಿಂದೆಯೇ ಆಗಿದ್ದರೂ ಹೊಸತಾಗಿ ರೂಪುಗೊಂಡಿದ್ದು ಇತ್ತೀಚೆಗೆ. ಹಾಗಾಗಿ ಇದು ಹೊಸ ಸಿನಿಮಾ. ಕತೆ, ಸಿನಿಮಾ ಚೆನ್ನಾಗಿದ್ದಾಗ ಈ ಸಿನಿಮಾ ಬಿಡುಗಡೆಯಾಗಬೇಕು, ಪ್ರೇಕ್ಷಕರು ನೋಡಬೇಕು ಎಂಬ ಆಸೆ ನಮಗೂ ಇರುತ್ತದೆ. ಈ ಸಿನಿಮಾ ಬಿಡುಗಡೆಗಾಗಿ ನಾನೂ ಕಾಯುತ್ತಿದ್ದೆ. ಇದು ಈ ಸಿನಿಮಾ ಬಿಡುಗಡೆ ಮಾತ್ರವಲ್ಲ, ನನ್ನ ಆ ಪಾತ್ರಕ್ಕೂ ಬಿಡುಗಡೆ.

ನೀವು ವಿಭಿನ್ನ ಕತೆಗಳನ್ನೇ ಆರಿಸಿಕೊಳ್ಳುತ್ತೀರಿ. ಈ ಪ್ರಕ್ರಿಯೆ ಹೇಗಿರುತ್ತದೆ?

ನಾನು ಚಿಕ್ಕಂದಿನಿಂದಲೂ ಸಿನಿಮಾ ನೋಡಿಕೊಂಡು ಬೆಳೆದವನು. ನಮ್ಮ ಕನ್ನಡದ ಸಿನಿಮಾಗಳ ಜೊತೆ ಅಂತಾರಾಷ್ಟ್ರೀಯ ಸಿನಿಮಾಗಳನ್ನು ಕೂಡ ನೋಡಬೇಕು ಎಂದು ಹೇಳಿಕೊಟ್ಟಿದ್ದು ಚಿಕ್ಕಪ್ಪ ಪುನೀತ್‌ ರಾಜ್‌ಕುಮಾರ್‌ ಅವರು. ಹಾಗಾಗಿ ನನಗೆ ಬೇರೆ ರೀತಿಯ ಕಂಟೆಂಟ್‌ಗಳ ಮೇಲೆ ಆಸಕ್ತಿ ಜಾಸ್ತಿ.

ಈ ಸಿನಿಮಾ ಯಾಕೆ ನೋಡಬೇಕು?

ಒಂದೊಳ್ಳೆ ಕತೆ ಇದೆ. ಒಂದೊಳ್ಳೆ ಸಂದೇಶ ಇದೆ. ಎಂಟರ್‌ಟೇನಿಂಗ್‌ ಆಗಿ ಸಿನಿಮಾ ರೂಪುಗೊಂಡಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಜನಾರ್ದನ ರೆಡ್ಡಿ ಮಗನ ಜೊತೆ ಶೂಟಿಂಗ್, MBBS ಕನಸು: ಶ್ರೀಲೀಲಾ ಬಿಚ್ಚಿಟ್ರು ಆ ಸೀಕ್ರೆಟ್
ಅಣ್ಣನ ಮಗ ನಿರಂಜನ್ ಜೊತೆ ಮೊದಲ ಬಾರಿಗೆ ಉಪೇಂದ್ರ ನಟನೆ: 'ನೆಕ್ಸ್ಟ್ ಲೆವೆಲ್'ನಲ್ಲಿ ಶಾಕಿಂಗ್ ಟ್ವಿಸ್ಟ್!