
ಹಾವೇರಿ (ಸೆ.2): ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಇಂದಿಗೆ ಭರ್ತಿ ಮೂರು ವರ್ಷಗಳೇ ಕಳೆದಿವೆ. ಆದರೂ ಅಭಿಮಾನಿಗಳು ಹೃದಯದಲ್ಲಿನ್ನೂ ಜೀವಂತ. ಅಪ್ಪುವನ್ನು ದಿನ ಸ್ಮರಿಸೋ, ಪೂಜಿಸೋ ಅದೇಷ್ಟೋ ಜೀವನಗಳಿವೆ. ಅವರಲ್ಲೊಬ್ಬ ಜಿಲ್ಲೆಯ ಯಲಗಚ್ಚ ಗ್ರಾಮದ ಡಾನ್ಸ್ ಮಾಸ್ಟರ್ ಪ್ರಕಾಶ ಮರಬದ ಎಂಬುವರು ತಮ್ಮ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅವರ ದೇವಸ್ಥಾನ ಕಟ್ಟಿಸುತ್ತಿದ್ದಾರೆ. ಪ್ರಕಾಶ ಅವರ ಇಡೀ ಕುಟುಂಬ ಪುನೀತ್ ಅಭಿಮಾನಿಗಳಾಗಿದ್ದು, ತಮ್ಮ ಮನೆಯ ಆವರಣದಲ್ಲಿ ಸುಮಾರು ₹8 ಲಕ್ಷ ಖರ್ಚು ಮಾಡಿ ದೇವಸ್ಥಾನ ಕಟ್ಟಿಸುತ್ತಿದ್ದಾರೆ. ಅಗಡಿಯ ಕಲಾವಿದರೊಬ್ಬರು ಡಾ. ಪುನೀತ್ ರಾಜಕುಮಾರ್ ಅವರ ಪುತ್ಥಳಿ ನಿರ್ಮಿಸುತ್ತಿದ್ದು, ಅಂತಿಮ ಸ್ಪರ್ಶ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಸೆ.26ಕ್ಕೆ ಈ ದೇವಾಲಯವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಉದ್ಘಾಟಿಸಲಿದ್ದಾರೆ.
ನಾಲ್ವರಿಗೆ ಬೆಳಕು ನೀಡಿದ ಪುನೀತ್ ರಾಜ್: ಅಂದು ನಡೆದ ಘಟನೆ ವಿವರಿಸಿದ ಡಾ.ರೋಹಿತ್ ಶೆಟ್ಟಿ
ಪ್ರಕಾಶ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ ಪುನೀತ್ ದೇವಸ್ಥಾನ ಕಟ್ಟಿಸಲು ಆರಂಭಿಸಿದರು. ದೇವಸ್ಥಾನ ಪೂರ್ಣಗೊಳ್ಳುವ ವರೆಗೆ ಚಪ್ಪಲಿ ಹಾಕುವುದಿಲ್ಲ ಎಂದು ತಮ್ಮೊಳಗೇ ಪ್ರತಿಜ್ಞೆ ಮಾಡಿಕೊಂಡರು. ಅದರಂತೆ ಪ್ರಕಾಶ ಕಳೆದ 6 ತಿಂಗಳಿಂದ ಚಪ್ಪಲಿ ಧರಿಸದೇ ದೇವಸ್ಥಾನ ಕಟ್ಟಿಸಲು ಶ್ರಮಿಸುತ್ತಿದ್ದಾರೆ. ಪ್ರಕಾಶ ಅವರು ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ನೀಡುತ್ತಿದ್ದಾರೆ. ಅಕ್ಕಪಕ್ಕದ ಬಸ್ ತಂಗುದಾಣಗಳಿಗೆ ತಮ್ಮದೇ ಖರ್ಚಿನಲ್ಲಿ ಸುಣ್ಣ-ಬಣ್ಣ ಬಳಿದು ಯುವಕರಿಗೆ ಮಾದರಿಯಾಗಿದ್ದಾರೆ. ಪುನೀತ್ ಅವರ ಆದರ್ಶದಂತೆ ತಾನು ಬದುಕಬೇಕು ಎಂಬ ಆಶಯ ಹೊಂದಿದ್ದಾರೆ.
ಬಿಗ್ಬಾಸ್ ಕನ್ನಡ 11ನೇ ಸೀಸನ್ ಬೆಂಕಿ ಬಿರುಗಾಳಿ, ಮೊದಲ ಪ್ರೋಮೋ ರಿಲೀಸ್!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.