
ಚೆನ್ನೈ[ಮೇ.06]: ಗಂಟೆಗೆ 200 ಕಿ.ಮೀ. ವೇಗದಲ್ಲಿ ಫನಿ ಚಂಡಮಾರುತ ಪೂರ್ವ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಿದರೂ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸದೇ ಇರುವುದರ ಹಿಂದೆ 5 ಉಪಗ್ರಹಗಳ ಸಹಾಯವೂ ಇದೆ.
ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಇನ್ಸಾಟ್- 3ಡಿ, ಇನ್ಸಾಟ್- 3ಡಿಆರ್, ಸ್ಕಾ್ಯಟ್ಸ್ಯಾಟ್-1, ಓಶಿಯನ್ಸ್ಯಾಟ್-2 ಹಾಗೂ ಮೇಘ ಟ್ರಾಪಿಕ್ಸ್ ಉಪಗ್ರಹಗಳು ಪ್ರತಿ 15 ನಿಮಿಷಕ್ಕೊಮ್ಮೆ ಚಂಡಮಾರುತದ ಚಲನವಲನದ ಮಾಹಿತಿ ನೀಡುತ್ತಿದ್ದವು. ಹೀಗಾಗಿ ಹೆಚ್ಚಿನ ಪ್ರಾಣ ಹಾನಿ ಆಗುವುದು ತಪ್ಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಕಣ್ಣಿನ (ಕೇಂದ್ರ ಬಿಂದು) 1000 ಕಿ.ಮೀ. ಸುತ್ತಳತೆಯಲ್ಲಿ ಮೋಡ ಆವರಿಸಿತ್ತು. 100ರಿಂದ 200 ಕಿ.ಮೀ. ಸುತ್ತಳತೆಯಲ್ಲಿ ಭಾರಿ ಮಳೆಯಾಗುತ್ತಿತ್ತು. ಈ ಮೋಡಗಳು 10 ಸಾವಿರ ಅಡಿ ಎತ್ತರದಲ್ಲಿದ್ದವು ಎಂಬ ಮಾಹಿತಿಯನ್ನು ಉಪಗ್ರಹಗಳು ಒದಗಿಸಿವೆ.
ದಕ್ಷಿಣ ಹಿಂದು ಮಹಾಸಾಗರದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ ಎಂದು ಹವಾಮಾನ ತಜ್ಞರು ಪತ್ತೆ ಹಚ್ಚುತ್ತಿದ್ದಂತೆ, ಅದರ ಮೇಲೆ ಉಪಗ್ರಹಗಳು ನಿಗಾ ಇಟ್ಟಿದ್ದವು ಎನ್ನಲಾಗಿದೆ.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.