ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ, ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ

Published : Aug 03, 2024, 10:12 AM ISTUpdated : Aug 03, 2024, 10:13 AM IST
ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ, ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ

ಸಾರಾಂಶ

 ನಾಸಾದ ಸಹಯೋಗದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಇಬ್ಬರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಇಸ್ರೋ  ಬಹಿರಂಗಪಡಿಸಿದೆ.

ನವದೆಹಲಿ (ಆ.3): ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಸಹಯೋಗದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಇಬ್ಬರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಇಸ್ರೋ ಶುಕ್ರವಾರ ಬಹಿರಂಗಪಡಿಸಿದೆ.

ಈ ವರ್ಷಾಂತ್ಯದಲ್ಲಿ ನಡೆಯಲಿದೆ ಎನ್ನಲಾಗಿರುವ ಪ್ರವಾಸ ಸಂಬಂಧ ಇಸ್ರೋ ಮತ್ತು ಅಮೆರಿಕದ ಆ್ಯಕ್ಸಿಯೋಂ ಸ್ಪೇಸ್‌ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದದ ಅನ್ವಯ ಆ್ಯಕ್ಸಿಯೋಂ ಸ್ಪೇಸ್ ಕಂಪನಿ ‘ಆ್ಯಕ್ಸಿಯೋಂ-4’ ಮಿಷನ್‌ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದೆ.

ವಯನಾಡು ದುರಂತದಲ್ಲಿ ನಲುಗಿದ ಕುಟುಂಬಕ್ಕೆ ರಾತ್ರಿ ಇಡೀ ಆಶ್ರಯ ನೀಡಿ ಕಾಪಾಡಿದ ಕಾಡಾನೆ!

ಇದರಲ್ಲಿ ಭಾಗಿಯಾಗಲು ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದಾರೆ. ಒಂದು ವೇಳೆ ಅವರು ಯಾವುದೇ ಕಾರಣಕ್ಕೆ ತೆರಳಲು ಸಾಧ್ಯವಾಗದೇ ಇದ್ದಲ್ಲಿ ಗ್ರೂಪ್‌ ಕ್ಯಾಪ್ಟನ್‌ ಪ್ರಶಾಂತ್‌ ನಾಯರ್‌ ತೆರಳಲಿದ್ದಾರೆ. 

ಈ ಇಬ್ಬರಿಗೂ ಇದೇ ತಿಂಗಳಿನಿಂದ ಅಮೆರಿಕದಲ್ಲಿ ವಿವಿಧ ರೀತಿಯ ತರಬೇತಿ ನಡೆಯಲಿದೆ. ಐಎಸ್‌ಎಸ್‌ಗೆ ತೆರಳಿದ ಬಳಿಕ ಇವರು ವೈಜ್ಞಾನಿಕ ಸಂಶೋಧನೆ, ಪ್ರಯೋಗಗಳನ್ನು ನಡೆಸಲಿದ್ದಾರೆ ಎಂದು ಇಸ್ರೋ ಪ್ರಕಟಣೆ ಹೇಳಿದೆ.ಕಳೆದ ಫೆಬ್ರುವರಿ ತಿಂಗಳಲ್ಲಿ ಭಾರತದ ಮಾನವ ಸಹಿತ ಗಗನಯಾನಕ್ಕೆ ಆಯ್ಕೆಯಾಗಿದ್ದ ನಾಲ್ವರ ಹೆಸರನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿತ್ತು. ಇವರಲ್ಲಿ ಶುಭಾಂಶು ಶುಕ್ಲಾ, ಪ್ರಶಾಂತ್‌ ನಾಯರ್‌, ಅಂಗದ್‌ ಪ್ರತಾಪ್‌, ಅಜಿತ್‌ ಕೃಷ್ಣನ್‌ ಸೇರಿದ್ದರು. ಇವರಿಗೆ ಈಗಾಗಲೇ ರಷ್ಯಾದಲ್ಲಿ ಬಾಹ್ಯಾಕಾಶ ಯಾನಕ್ಕೆ ಅಗತ್ಯವಾದ ತರಬೇತಿ ನೀಡಲಾಗಿದೆ.

ಬ್ಲೂಮ್‌ಬರ್ಗ್ ವರದಿ: ಏಷ್ಯಾದ ಶ್ರೀಮಂತ ಎಂಬ ಅಂಬಾನಿ ಸ್ಥಾನ ಡೇಂಜರ್‌ ನಲ್ಲಿದೆ, ಆರ್ಥಿಕ ಕುಸಿತದತ್ತ ಮುಕೇಶ್!

ಭಾರತದ ಗಗನಯಾತ್ರಿ ನಾಸಾ ಸಿಬ್ಬಂದಿ ಜೊತೆ ಬಾಹ್ಯಾಕಾಶ ಕೇಂದ್ರಕ್ಕೆ
ಗಗನಯಾನ ಮಿಷನ್‌ ಭಾಗವಾಗಿರುವ ನಾಲ್ವರಲ್ಲಿ ಒಬ್ಬ ಗಗನಯಾತ್ರಿ ನಾಸಾದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಕಳೆದವಾರ ಮಾಹಿತಿ ನೀಡಿದ್ದರು. ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆ ಗಗನಯಾನ ಮಿಷನ್‌ಗೆ ಭಾರತದ ಗಗನಯಾತ್ರಿಗಳ ಆಯ್ಕೆ ಮಂಡಳಿ ವಾಯು ಸೇನೆಯ ನಾಲ್ಕು ಗಗನಯಾತ್ರಿಗಳನ್ನು ಆರಿಸಿಕೊಂಡಿದೆ. ರಷ್ಯಾದಲ್ಲಿ ತರಬೇತಿ ಪಡೆದ ಅವರು ಪ್ರಸ್ತುತ ಬೆಂಗಳೂರಿನ ಇಸ್ರೋದ ಗಗನಯಾತ್ರಿಗಳ ತರಬೇತಿ ಸೌಲಭ್ಯ(ಎಟಿಎಪ್‌)ದಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

Read more Articles on
click me!

Recommended Stories

ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ