
ಬೆಂಗಳೂರು: ಚಂದ್ರಯಾನದ 3ರ ಯಶಸ್ಸಿನ ಬೆನ್ನಲ್ಲೇ ಸೂರ್ಯಯಾನಕ್ಕೆ ಸಜ್ಜಾಗಿರುವ ಬೆಂಗಳೂರು ಮೂಲದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರವು (ಇಸ್ರೋ), ಉಡ್ಡಯನದ ಪೂರ್ವಾಭ್ಯಾಸವನ್ನು ಬುಧವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶ್ರೀಹರಿಕೋಟದ ಉಡ್ಡಯನ ನೆಲೆಯಿಂದ ಸೆ.2ರಂದು ಬೆಳಗ್ಗೆ 11.50ಕ್ಕೆ ನೌಕೆಯ ಉಡ್ಡಯನ ನಡೆಯಲಿದ್ದು, ಈ ಸಂಬಂಧ ನೌಕೆಯ ಉಡ್ಡಯನ ಪ್ರಕ್ರಿಯೆ ಮತ್ತು ರಾಕೆಟ್ನ ಆಂತರಿಕ ತಪಾಸನಾ ಪರೀಕ್ಷೆಗಳನ್ನು ಬುಧವಾರ ನಡೆಸಲಾಯಿತು ಎಂದು ಇಸ್ರೋ ಮಾಹಿತಿ ನೀಡಿದೆ.
ಚಂದ್ರನ ಕಡೆಗೆ ಈಗಾಗಲೇ ಮೂರು ಉಡ್ಡಯನ ಕೈಗೊಂಡಿರುವ ಇಸ್ರೋ, ಇದೇ ಮೊದಲ ಬಾರಿಗೆ ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್-1 ಎಂಬ ನೌಕೆಯೊಂದನ್ನು ರವಾನಿಸುತ್ತಿದೆ. ನೌಕೆಯನ್ನು ಪಿಎಸ್ಎಲ್ವಿ-ಸಿ 57 ರಾಕೆಟ್ ಮೂಲಕ ಉಡ್ಡಯನ ಮಾಡಲಾಗುತ್ತಿದ್ದು, ಅದನ್ನು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಎಲ್1 ಎಂದು ಕರೆಯಲಾಗುವ ಸ್ಥಳದಲ್ಲಿ ನಿಯೋಜಿಸಲಾಗುತ್ತದೆ. ಎಲ್1 ಸ್ಥಳಕ್ಕೆ ತಲುಪಲು ಅದಕ್ಕೆ 4 ತಿಂಗಳು ಹಿಡಿಯಲಿದೆ. ಅದು ಅಲ್ಲಿಂದಲೇ ಸೂರ್ಯನ ಕುರಿತು ಸಂಶೋಧನೆ ನಡೆಸಿ ಭೂಮಿಗೆ ಮಾಹಿತಿ ರವಾನಿಸಲಿದೆ.
ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಟಾಯ್ಲೆಟ್ ಹೇಗೆ ಬಳಸ್ತಾರೆ ಗೊತ್ತಾ?
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಏನು ಮಾಡುತ್ತಿದೆ? ಫೋಟೋ ಕಳುಹಿಸಿದ ಪ್ರಗ್ಯಾನ್ ರೋವರ್!
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.