4ನೇ ಹಂತದ ಕ್ಯಾನ್ಸರ್ ಗೆದ್ದ ಕಾರಣ ನೀಡಿದ ಸಿಧು ಪತ್ನಿಗೆ 850 ಕೋಟಿ ರೂ. ಲೀಗಲ್ ನೋಟಿಸ್‌!

Published : Nov 29, 2024, 07:05 PM ISTUpdated : Nov 29, 2024, 07:06 PM IST
4ನೇ ಹಂತದ ಕ್ಯಾನ್ಸರ್ ಗೆದ್ದ ಕಾರಣ ನೀಡಿದ ಸಿಧು ಪತ್ನಿಗೆ 850 ಕೋಟಿ ರೂ. ಲೀಗಲ್ ನೋಟಿಸ್‌!

ಸಾರಾಂಶ

4ನೇ ಹಂತದ ಕ್ಯಾನ್ಸರ್ ಗೆದ್ದೆ ಎಂದ  ನವಜೋತ್ ಸಿಂಗ್ ಸಿಧು ದಂಪತಿಗೆ  850 ಕೋಟಿ ರೂ. ಲೀಗಲ್ ನೋಟಿಸ್‌ ನೀಡಲಾಗಿದೆ. ಅಷ್ಟಕ್ಕೂ ಆಗಿದ್ದೇನು? 

ಕ್ಯಾನ್ಸರ್ ಎಂಬ ಮಹಾಮಾರಿ ಇಂದು ಹಲವಾರು ಮಂದಿಯ ಜೀವ ಪಡೆಯುತ್ತಿದೆ. ಇದಕ್ಕೆ ಹಲವಾರು ರೀತಿಯ ಔಷಧಗಳನ್ನು ಕಂಡು ಹಿಡಿದರೂ ಕ್ಯಾನ್ಸರ್‍‌ ರೋಗಿಗಳ ಜೀವವನ್ನು ಹಿಂಡಿ ಹಿಪ್ಪೆ ಮಾಡುವಂಥ ಚಿಕಿತ್ಸೆ ಇದ್ದರೂ, ಎಷ್ಟೋ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್‍‌ ಆಸ್ಪತ್ರೆಗಳಿಗೆ ಒಮ್ಮೆ ಭೇಟಿ ಕೊಟ್ಟರೆ, ಅಲ್ಲಿನ ರೋಗಿಗಳ ನೋವನ್ನು ಕಣ್ಣಾರೆ ಕಾಣಬಹುದಾಗಿದೆ. ಅದೇ ಇನ್ನೊಂದೆಡೆ,  ಚಿಕಿತ್ಸೆಯ ಜೊತೆಜೊತೆಗೇ ಯೋಗ, ಧ್ಯಾನ, ಮುದ್ರೆಗಳ ಮೂಲಕವೇ ಕ್ಯಾನ್ಸರ್‍‌ ಅನ್ನು ಗುಣಮುಖ ಮಾಡಿಕೊಂಡಿರುವುದಾಗಿ ಕೆಲವರು ಹೇಳುತ್ತಿರುವುದೂ ಇದೆ. ಇದಕ್ಕೆ ತಮ್ಮ ಜೀವನ ಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ ಕುರಿತು  ಕ್ಯಾನ್ಸರ್‍‌ ಪೀಡಿಗರಿಗೆ ಸ್ಫೂರ್ತಿ ತುಂಬುತ್ತಿರುವವರೂ ಇದ್ದಾರೆ. ಹೋಮಿಯೋಪಥಿ, ಆಯುರ್ವೇದದ ಔಷಧಗಳನ್ನು ಮಾಡಿ ಕ್ಯಾನ್ಸರ್‍‌ನಿಂದ ಹೊರಬಂದಿರುವ ಹಲವರು ರೋಗಿಗಳೂ ತಮ್ಮ ಅನುಭವವಗಳನ್ನು ಹಂಚಿಕೊಂಡದ್ದು ಇದೆ. ಆದರೆ ಇದೀಗ ಆಹಾರ ಕ್ರಮದಿಂದ ತಮ್ಮ ಪತ್ನಿ ನಾಲ್ಕನೇ ಹಂತದ ಕ್ಯಾನ್ಸರ್‍‌ನಿಂದ ಹೊರಬಂದಿರುವುದಾಗಿ ಹೇಳಿಕೆ ಕೊಟ್ಟಿರುವ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸಂಕಷ್ಟ ಎದುರಾಗಿದೆ. ಅವರಿಗೆ ಲೀಗಲ್‌ ನೋಟಿಸ್‌ ಜಾರಿಯಾಗಿದ್ದು, 850 ಕೋಟಿ ರೂ. ಪರಿಹಾರಕ್ಕೆ ಸೂಚಿಸಲಾಗಿದೆ!

ಹೌದು. ಅಷ್ಟಕ್ಕೂ ಆಗಿರುವುದು ಏನೆಂದರೆ, ಸಿಧು ಅವರ ಪತ್ನಿ ನಾಲ್ಕನೇ ಹಂತದ ಕ್ಯಾನ್ಸರ್‍‌ನಿಂದ ಬಳಲುತ್ತಿದ್ದರು. ಅವರು ಅದರಿಂದ ಗುಣಮುಖರಾಗಿರುವುದಾಗಿ ಸಿಧು  ಹೇಳಿದ್ದರು.  ತಮ್ಮ ಪತ್ನಿ ನವಜೋತ್ ಕೌರ್ ಕ್ಯಾನ್ಸರ್‍‌ನಿಂದ  ಗೆದ್ದು ಬರಲು ವಿಶೇಷ ಆಹಾರ ಶೈಲಿಯೇ ಕಾರಣ ಎಂದು ಪೋಸ್ಟ್ ಮೂಲಕ ತಿಳಿಸಿದ್ದರು. ಆದರೆ, ಅವರು ಪೋಸ್ಟ್‌ ಮಾಡುತ್ತಿದ್ದಂತೆಯೇ ವೈದ್ಯಕೀಯ ರಂಗದಲ್ಲಿ ಕೋಲಾಹಲವೇ ಎದ್ದುಬಿಟ್ಟಿದೆ!  ಇದೇ ಕಾರಣಕ್ಕೆ,  ಛತ್ತೀಸ್‌ಗಢ ಸಿವಿಲ್ ಸೊಸೈಟಿ ಲೀಗಲ್ ನೋಟಿಸ್ ನೀಡಿದೆ. ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ಏಳು ದಿನಗಳಲ್ಲಿ ಸಲ್ಲಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.  ಒಂದು ವೇಳೆ ಈ ದಾಖಲೆ ಸಲ್ಲಿಸಲು  ವಿಫಲವಾದರೆ 850 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ನೀಲಿ ಚಿತ್ರ ತಂದಿಟ್ಟ ಫಜೀತಿ! ಶಿಲ್ಪಾ ಶೆಟ್ಟಿ ದಂಪತಿಗೆ ಶಾಕ್‌ ಕೊಟ್ಟ ಇ.ಡಿ- ಮನೆ, ಕಚೇರಿ ಮೇಲೆ ದಾಳಿ!

ಸಿಧು ಅವರು,  ತಮ್ಮ ಪತ್ನಿ ಸಂಪೂರ್ಣ ಚೇತರಿಸಿಕೊಂಡಿರುವ ಕುರಿತು ತಿಳಿಸಿದ್ದರು. ಅದರಲ್ಲಿ ಅವರು,  ಕೇವಲ 40 ದಿನಗಳಲ್ಲಿ ಪತ್ನಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ, ಅದೂ ಕೂಡ ವಿಶೇಷ ಆಹಾರ ಕ್ರಮದಿಂದ ಎಂದಿದ್ದರು. ಪತ್ನಿ ಬದುಕುಳಿಯುವ ಸಾಧ್ಯತೆ ಶೇಕಡಾ 5ರಷ್ಟು ಮಾತ್ರ ಎಂದು ವೈದ್ಯರು ಹೇಳಿದ್ದರು. ಆದರೆ ಅರಿಶಿಣ, ಬೇವಿನ ನೀರು, ಆ್ಯಪಲ್ ಸೈಡರ್ ವಿನೆಗರ್ ಮತ್ತು ನಿಂಬೆ ನೀರು, ಇವುಗಳಿಂದ ಕ್ಯಾನ್ಸರ್‌ನಿಂದ ಗುಣಮುಖರಾಗಿ ಕೇವಲ 40 ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು ಎಂದು ಸಿಧು ಹೇಳಿದ್ದರು. ಕ್ಯಾನ್ಸರ್‌ ಚಿಕಿತ್ಸೆಗೆ ಕೋಟಿ ಕೋಟಿ ಖರ್ಚು ಮಾಡುವುದೆಲ್ಲಿ? ನಮ್ಮದೇ ಸುತ್ತಮುತ್ತ ಸಿಗುವ ವಸ್ತುಗಳಿಂದ ಸಿಗುವ ಚಿಕಿತ್ಸೆ ಎಲ್ಲಿ? ಅಂತ ಪ್ರಶ್ನೆ ಮಾಡಿದ್ದರು.

 ಆದರೆ ಇಂಥ ಹೇಳಿಕೆ ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ ಎನ್ನುವುದು ವೈದ್ಯರ ಅಭಿಮತ. ಈ ರೀತಿ ಹೇಳಿಕೆ ನೀಡಿದರೆ,  ಕ್ಯಾನ್ಸರ್ ಪೀಡಿತರು ಅಲೋಪಥಿಯನ್ನು ನಂಬದ ಸ್ಥಿತಿ ಬರುತ್ತದೆ. ಇದು ಸರಿಯಲ್ಲ. ಆದ್ದರಿಂದ  ಸಿಧು ದಂಪತಿ  ಜನರ ಎದುರು ಕ್ಷಮೆ ಯಾಚಿಸಬೇಕು. ನವಜೋತ್ ಕೌರ್ ಅವರಿಗೆ ನೀಡಲಾದ ಅಲೋಪಥಿ ಚಿಕಿತ್ಸೆಯ ದಾಖಲೆ ನಮ್ಮ ಬಳಿ ಇದೆ. ಆದರೆ, ಗೌಪ್ಯತೆಯ ಕಾರಣದಿಂದ ಅದನ್ನು ನಾವು ಬಿಡುಗಡೆ ಮಾಡುವುದಿಲ್ಲ . ಬದಲಾಗಿ ನವಜೋತ್ ಸಿಂಗ್ ಅವರು ಆ ಎಲ್ಲಾ ದಾಖಲೆಗಳನ್ನು ಒಂದು ವಾರದ ಒಳಗಾಗಿ ಸಲ್ಲಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ,   ನವಜೋತ್  ಅವರಿಗೂ ಕೆಲವೊಂದು ಪ್ರಶ್ನೆಯನ್ನು ನೋಟಿಸ್‌ನಲ್ಲಿ ಕೇಳಲಾಗಿದೆ.  ಚಿಕಿತ್ಸೆಯ ಭಾಗವಾಗಿ ನೀವು ಅಲೋಪಥಿ ಔಷಧಿ ಸೇವನೆ ಮಾಡಿರಲಿಲ್ಲವೆ? ನಿಮ್ಮ ಪತಿ ಸಂಪೂರ್ಣ ಸತ್ಯ ಹೇಳಿದ್ದಾರಾ? ನಿಮ್ಮ ಪತಿಯ ಹೇಳಿಕೆಯನ್ನು ನೀವು ಸಮರ್ಥಿಸುವುದಿಲ್ಲ ಎಂದಾದರೆ ಮಾಧ್ಯಮದ ಮುಂದೆ ನೀವು ಸತ್ಯವನ್ನು ಹೇಳಬೇಕು ಎಂದು ತಿಳಿಸಲಾಗಿದೆ. 

ಬೆಟ್ಟದ ತುದಿ ನಿಂತು ರೀಲ್ಸ್‌ ಮಾಡ್ತಿದ್ದ ಯುವತಿಗೆ ಮುಂದೇನಾಯ್ತು ನೋಡಿ! ಶಾಕಿಂಗ್‌ ವಿಡಿಯೋ ವೈರಲ್

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

Read more Articles on
click me!

Recommended Stories

ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ