ಭಾರತದ ಚಂದ್ರಯಾನ-3 ಯಶಸ್ಸಿನ ಬಗ್ಗೆ ಹಿರಿಯ ಕವಿ ಎಚ್‌ಎಸ್‌ವಿ ಬರೆದ ವಿಶೇಷ ಕವಿತೆ ವಿಕ್ರಮ ಲೀಲೆ

Published : Aug 27, 2023, 11:23 AM IST
ಭಾರತದ ಚಂದ್ರಯಾನ-3 ಯಶಸ್ಸಿನ ಬಗ್ಗೆ ಹಿರಿಯ ಕವಿ ಎಚ್‌ಎಸ್‌ವಿ ಬರೆದ ವಿಶೇಷ ಕವಿತೆ ವಿಕ್ರಮ ಲೀಲೆ

ಸಾರಾಂಶ

ಭಾರತದ ಚಂದ್ರಯಾನ-3 ಯಶಸ್ಸಿನ ಬಗ್ಗೆ ಹಿರಿಯ ಕವಿ ಎಚ್‌ಎಸ್‌ ವೆಂಕಟೇಶಮೂರ್ತಿ ಅವರು ಬರೆದ ವಿಶೇಷ ಕವಿತೆ

- ಎಚ್.ಎಸ್.ವಿ (ಎಚ್ ಎಸ್‌ ವೆಂಕಟೇಶಮೂರ್ತಿ)

ಭಾರತದ ವಿಕ್ರಮ್- ಲ್ಯಾಂಡರ್ ಚಂದ್ರನ ಮೇಲೆ ಬಾಲಗೋಪಾಲನಂತೆ

ಅಂಬೆಗಾಲೂರಿದ್ದೇ ತಡ ಹಿಂದುಸಾಗರದಲ್ಲಿ ಅಬ್ಬರದೇರಿಳಿತ. ಎಲ್ಲೆಲ್ಲೂ

ತಿರಂಗದ ಗಾಳಿಪುಲಕ. ವಿಜ್ಞಾನಿ, ಯೋಧ, ಕಲಾವಿದ, ಹೊಲವುತ್ತು

ತಾಯ್ನೆಲದಲ್ಲಿ ಕಿರುನಗೆ ಬಿಡಿಸುವ ರೈತ, ಕಾರ್ಮಿಕ- ಕುಣಿಕುಣಿದು

ತಣಿದರೀ ನೆಲದ ನೆಲೆಯಲ್ಲಿ. ಮುದ್ದುಗೋಪಾಲ ಎಲ್ಲಿ? ಕಾಳಿಂಗನ

ಮೆಟ್ಟಿ ತಕ ಧಿಮಿ ಧಿಮಿ ತಕ ಕುಣಿಯತೊಡಗಿದ್ದಾನೆ. ಕಬ್ಬೊಗೆಯ

ಹೆಡೆ ಮುದುಡಿ ನೆಲ ಕಚ್ಚಿದಾಗ ನಾಗ, ಬೆಳ್ದಿಂಗಳಮೃತ ಪ್ರೋಕ್ಷಣೆ

ಭರತ ವರ್ಷದ ಮೇಲೆ! ಹೀಗೆ ನೆಡೆದಿದೆ ನವಯುಗದ ತ್ರಿವಿಕ್ರಮ ಲೀಲೆ.

ಸುರಿವ ಬೆಳ್ದಿಂಗಳಲಿ ತೊಪ್ಪ ತೋಯುತ್ತಿದೆ ಅಖಂಡ ಭರತ ಖಂಡ.

ಪಕ್ಷ, ಲಿಂಗ, ಧರ್ಮಾತೀತ ಮಂದಿ ಹಾಕುತ್ತಾ ಇಸ್ರೋಗೆ ಒಕ್ಕೊರಲ

ಜಯಘೋಷ, ಹೂಬಿಟ್ಟ ತಿಳಿಗೊಳದ ಕನ್ನೈದಿಲೆಯಂತೆ ಸುಳಿವ ಗಾಳಿಗೆ

ತೊನೆಯುತ್ತ ತಲೆ, ಭಲೆ ಭಲೆ ಎನ್ನುವಾಗ, ನಭೋಯಾನದ ಇತಿಹಾಸ

ಸೂಸಲು ಚಂದ್ರಹಾಸ, ಕೇಳಿ ಬರುತಿರೆ ಹಲವು ಒಲವಿನೊಂದೇ ನೆಲೆಯ

ಒಕ್ಕೊರಲ ಪ್ರಾರ್ಥನೆ- ಇರುಳಲ್ಲೇ ಬೆಳ್ಳಂಬೆಳಗಿನ ಭರತ ಭಾರತದಲ್ಲಿ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

Read more Articles on
click me!

Recommended Stories

ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ