ಸಂಕ್ರಾಂತಿ ಪ್ರಯಾಣಕ್ಕೆ ಬಂತು ಎರಡು ವಿಶೇಷ ರೈಲು: ಯಶವಂತಪುರ To ತಾಳಗುಪ್ಪ ಎಕ್ಸ್‌ಪ್ರೆಸ್

Published : Jan 09, 2026, 09:38 AM IST
Talaguppa

ಸಾರಾಂಶ

ಸಂಕ್ರಾಂತಿ ಹಬ್ಬದ ಪ್ರಯಾಣಿಕರ ದಟ್ಟಣೆ ನಿವಾರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಘೋಷಿಸಿದೆ. ಈ ರೈಲುಗಳು ಜನವರಿ 13, 14, 23 ಮತ್ತು 24 ರಂದು ಸಂಚರಿಸಲಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಬೆಂಗಳೂರು: ಸಂಕ್ರಾಂತಿ ಹಬ್ಬದ ವೇಳೆಯ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಯಶವಂತಪುರ ಮತ್ತು ಸಿದ್ದಾಪುರದ ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸುವುದಾಗಿ ನೈಋತ್ಯ ರೈಲ್ವೆಯು ತಿಳಿಸಿದೆ.

ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್

ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು (06585) ಜ.13ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗಿನ ಜಾವ 4.45ಕ್ಕೆ ತಾಳಗುಪ್ಪ ತಲುಪಲಿದೆ. ಇದರ ಜೋಡಿ ರೈಲು (06586) ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಜ.14ರಂದು ಬೆಳಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಅಂದೇ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲುಗಳು ಪ್ರಥಮ ದರ್ಜೆ ಎಸಿ (1), ಎಸಿ ಟು ಟೈರ್ (2), ಎಸಿ ತ್ರೀ-ಟೈರ್ (6), ಸ್ಲೀಪರ್ ಕ್ಲಾಸ್ (8), ಜನರಲ್ ಸೆಕೆಂಡ್ ಕ್ಲಾಸ್ (3) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿ ಸೇರಿ 22 ಬೋಗಿ ಒಳಗೊಂಡಿದೆ.

ರೈಲು ಸಂಖ್ಯೆ 06587

ಅದೇ ರೀತಿ, ರೈಲು ಸಂಖ್ಯೆ 06587 ಯಶವಂತಪುರ - ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಜ.23 ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 4.45ಕ್ಕೆ ತಾಳಗುಪ್ಪ ತಲುಪಲಿದೆ. ಇದರ ಜೋಡಿ ರೈಲು (06588) ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಜ.24ರಂದು ಬೆಳಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ

ಈ ವಿಶೇಷ ರೈಲುಗಳು ಪ್ರಥಮ ದರ್ಜೆ ಕಮ್ ಎಸಿ ಟು ಟೈರ್ (1), ಎಸಿ ತ್ರೀ-ಟೈರ್ (2), ಸ್ಲೀಪರ್ ಕ್ಲಾಸ್ (10), ಜನರಲ್ ಸೆಕೆಂಡ್ ಕ್ಲಾಸ್ (5) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿ ಸೇರಿ 20 ಬೋಗಿಗಳನ್ನು ಒಳಗೊಂಡಿದೆ. ರೈಲುಗಳು ಎರಡೂ ದಿಕ್ಕುಗಳಲ್ಲಿ ಸಂಚರಿಸುವಾಗ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲ್ಲಲಿದೆ.

ಇದನ್ನೂ ಓದಿ: ಬೆಂಗಳೂರಿನಿಂದ ಕೇವಲ 60 ಕಿ.ಮೀ ದೂರದಲ್ಲಿ ಜಲಸಾಹಸ ಕ್ರೀಡೆ; ವಿವಿಧ ವಾಟರ್ ಬೋಟ್‌ ಲಭ್ಯ

PREV
Read more Articles on
click me!

Recommended Stories

ಸಹೋದ್ಯೋಗಿಯಿಂದ ರ‍್ಯಾಗಿಂಗ್‌: ಠಾಣೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಹೆಡ್‌ ಕಾನ್ಸ್‌ಟೇಬಲ್
ಯಶ್ ಹೇಳಿದ ಜೀವನಾನುಭವವನ್ನು ಪಾಠದಲ್ಲಿ ಸೇರಿಸಿ: ಸೊರಬದ ಯುವಕ ಆತ್ಮ*ಹತ್ಯೆ