ಪಾಕ್ ಸಂಭ್ರಮಾಚರಣೆಗೆ ಅಮಾಯಕ ಬಾಲಕ ಬಲಿ

Published : Jun 20, 2017, 06:40 PM ISTUpdated : Apr 11, 2018, 01:13 PM IST
ಪಾಕ್ ಸಂಭ್ರಮಾಚರಣೆಗೆ ಅಮಾಯಕ ಬಾಲಕ ಬಲಿ

ಸಾರಾಂಶ

ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವು ಸಾಧಿಸುತ್ತಿದ್ದಂತೆ ಭಾನುವಾರ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ಕರಾಚಿ(ಜೂ.20): ಚಾಂಪಿಯನ್ಸ್ ಟ್ರೋಫಿ ಗೆಲುವಿನ ಉನ್ಮಾದದ ಸಂಭ್ರಮಾಚರಣೆ ಮಾಡುತ್ತಿದ್ದ ವೇಳೆ ಗುಂಡು ಹಾರಿಸಿ ಕುಣಿಯುತ್ತಿದ್ದಾಗ  15 ವರ್ಷದ ಅಮಾಯಕ ಬಾಲಕ ಬಲಿಯಾಗಿರುವ ಘಟನೆ ಕರಾಚಿಯಲ್ಲಿ ನಡೆದಿದೆ.

ಅತ್ತ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವು ಸಾಧಿಸುತ್ತಿದ್ದಂತೆ ಭಾನುವಾರ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಈ ವೇಳೆ ಕೆಲವರು ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸುತ್ತಿದ್ದರು.

ಈ ವೇಳೆ ಸಯ್ಯದ್ ಹುಸೇನ್ ರಾಜಾ ಎಂಬ ಬಾಲಕನಿಗೆ ಗುಂಡು ತಗುಲಿ, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಬಾಲಕ, ಕೊನೆಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಮೃತಪಟ್ಟಿದ್ದಾನೆ.

ಸಾಯುವ ಮುನ್ನಾ ‘ಪಪ್ಪಾ, ನನಗೆ ಗುಂಡು ತಗುಲಿತು’ ಎನ್ನುತ್ತಾ ಕೊನೆಯುಸಿರೆಳೆದಿದ್ದಾನೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

WPLನ ಹೊಸ ತಾರೆ: ಯಾರು ಈ 16ರ ಹರೆಯದ ಚೋಟಿ ಶಫಾಲಿ
ಧನಶ್ರೀ ವರ್ಮಾ ಜತೆಗಿನ ವಿಚ್ಛೇದನದ ಬಳಿಕ ಯಜುವೇಂದ್ರ ಚಾಹಲ್‌ಗೆ ಇನ್ನೊಂದು ಆಘಾತ!