ಟೀಂ ಇಂಡಿಯಾದ ಟಾಪ್ ಆಟಗಾರನಿಗಿತ್ತು ಬುಕ್ಕಿ ನಂಟು..!

Published : Aug 24, 2018, 11:42 AM ISTUpdated : Sep 09, 2018, 10:17 PM IST
ಟೀಂ ಇಂಡಿಯಾದ ಟಾಪ್ ಆಟಗಾರನಿಗಿತ್ತು ಬುಕ್ಕಿ ನಂಟು..!

ಸಾರಾಂಶ

ರನೊಂದಿಗೆ ಸಂಪರ್ಕ ಹೊಂದಿದ್ದಾಗಿ ಒಪ್ಪಿಕೊಂಡಿದ್ದ. ಅವರಿಬ್ಬರ ನಡುವಿನ ದೂರವಾಣಿ ಸಂಭಾಷಣೆಯ ಕ್ಲಿಪ್ ನೀಡುವುದಾಗಿ ಹೇಳಿದ್ದ. ಆದರೆ ಸಮಯದ ಅಭಾವದಿಂದ ತನಿಖೆ ನಡೆಸಲು ಸಾಧ್ಯವಾಗಲಿಲ್ಲ. ಜತೆಗೆ ಕೇವಲ ಐಪಿಎಲ್ ಪ್ರಕರಣದ ತನಿಖೆಯಷ್ಟೇ ನಡೆಸಲು ಆದೇಶ ಇದ್ದಿದ್ದರಿಂದ, 2008-09ರ ಪಂದ್ಯದ ವೇಳೆ ನಡೆದಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸಲು ನನಗೆ ಅವಕಾಶ ಸಿಗಲಿಲ್ಲ’ ಎಂದು ಮಿಶ್ರಾ ಹೇಳಿದ್ದಾರೆ.

ನವದೆಹಲಿ[ಆ.24]: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖಾಧಿಕಾರಿ ಬಿ.ಬಿ.ಮಿಶ್ರಾ ಸ್ಫೋಟಕ ಮಾಹಿತಿ ಬಹಿರಂಗಗೊಳಿಸಿದ್ದಾರೆ. 2011ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಅಗ್ರ ಆಟಗಾರನೊಬ್ಬ, 2008-09ರಲ್ಲಿ ಬುಕ್ಕಿ ಜತೆ ಸಂಪರ್ಕ ಹೊಂದಿದ್ದರು ಎಂದು ಮಿಶ್ರಾ ಹೇಳಿದ್ದಾರೆ. ಆದರೆ ಆಟಗಾರನ ಹೆಸರು ಬಿಚ್ಚಿಟ್ಟಿಲ್ಲ. 

‘ಬುಕ್ಕಿ ತಾನು ಆಟಗಾರನೊಂದಿಗೆ ಸಂಪರ್ಕ ಹೊಂದಿದ್ದಾಗಿ ಒಪ್ಪಿಕೊಂಡಿದ್ದ. ಅವರಿಬ್ಬರ ನಡುವಿನ ದೂರವಾಣಿ ಸಂಭಾಷಣೆಯ ಕ್ಲಿಪ್ ನೀಡುವುದಾಗಿ ಹೇಳಿದ್ದ. ಆದರೆ ಸಮಯದ ಅಭಾವದಿಂದ ತನಿಖೆ ನಡೆಸಲು ಸಾಧ್ಯವಾಗಲಿಲ್ಲ. ಜತೆಗೆ ಕೇವಲ ಐಪಿಎಲ್ ಪ್ರಕರಣದ ತನಿಖೆಯಷ್ಟೇ ನಡೆಸಲು ಆದೇಶ ಇದ್ದಿದ್ದರಿಂದ, 2008-09ರ ಪಂದ್ಯದ ವೇಳೆ ನಡೆದಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸಲು ನನಗೆ ಅವಕಾಶ ಸಿಗಲಿಲ್ಲ’ ಎಂದು ಮಿಶ್ರಾ ಹೇಳಿದ್ದಾರೆ.

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರಾಗಿದ್ದ ಎಸ್. ಶ್ರೀಶಾಂತ್, ಅಜಿತ್ ಚಾಂಡೀಲ್ ಹಾಗೂ ಅಂಕಿತ್ ಚೌಹ್ಹಾಣ್ ಅವರನ್ನು ಬಂಧಿಸಲಾಗಿತ್ತು. ಆದರೆ 2008-09ರಲ್ಲಿ ಬುಕ್ಕಿ ಜತೆ ಸಂಪರ್ಕ ಹೊಂದಿದ್ದ ಆ ಟಾಪ್ ಆಟಗಾರ ಯಾರು ಎನ್ನುವ ಮಾಹಿತಿ ಬಹಿರಂಗವಾಗಿಲ್ಲ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಐಪಿಎಲ್ ಟೂರ್ನಿಗೆ ವೇಳಾಪಟ್ಟಿ ಫಿಕ್ಸ್; ಫ್ರಾಂಚೈಸಿಗಳಿಗೆ ಬಿಸಿಸಿಐ ಮಹತ್ವದ ಅಪ್‌ಡೇಟ್ಸ್‌! ಬೆಂಗಳೂರಲ್ಲಿ ಉದ್ಘಾಟನಾ ಮ್ಯಾಚ್?
ಮೆಸ್ಸಿಯ ದೆಹಲಿ ಡೈರಿ: ಮುಂಬರುವ ಟಿ20 ವಿಶ್ವಕಪ್‌ಗೆ ಆಹ್ವಾನಿಸಿದ ಐಸಿಸಿ ಅಧ್ಯಕ್ಷ ಜಯ್ ಶಾ!