ದುಲೀಪ್‌ ಟ್ರೋಫಿ 2019: ಮೂವರು ಕನ್ನಡಿಗರಿಗೆ ಸ್ಥಾನ

Published : Aug 07, 2019, 11:11 AM IST
ದುಲೀಪ್‌ ಟ್ರೋಫಿ 2019: ಮೂವರು ಕನ್ನಡಿಗರಿಗೆ ಸ್ಥಾನ

ಸಾರಾಂಶ

ದೇಶಿ ಕ್ರಿಕೆಟ್ ಟೂರ್ನಿಯ ಪಂದ್ಯಾವಳಿಗಳು ದುಲೀಪ್ ಟ್ರೋಫಿಯೊಂದಿಗೆ ಆರಂಭವಾಗುವುದು ಸಾಮಾನ್ಯ. ಈ ಬಾರಿಯ ಟೂರ್ನಿಗೆ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ[ಆ.07]: 2019-20ರ ದೇಸಿ ಕ್ರಿಕೆಟ್‌ ಋುತುವಿನ ಮೊದಲ ಪಂದ್ಯಾವಳಿ ದುಲೀಪ್‌ ಟ್ರೋಫಿಗೆ ತಂಡಗಳು ಪ್ರಕಟಗೊಂಡಿವೆ. ಆ.17ರಿಂದ ಸೆ.8ರ ವರೆಗೂ ನಡೆಯಲಿರುವ ಟೂರ್ನಿಯಲ್ಲಿ ಕರ್ನಾಟಕದ ಶ್ರೇಯಸ್‌ ಗೋಪಾಲ್‌, ಕರುಣ್‌ ನಾಯರ್‌ ಹಾಗೂ ರೋನಿತ್‌ ಮೋರೆ ಪಾಲ್ಗೊಳ್ಳಲಿದ್ದಾರೆ. 

ಮತ್ತೊಂದು ಅವಧಿಗೆ ಶಾಸ್ತ್ರಿಯೇ ಟೀಂ ಇಂಡಿಯಾ ಕೋಚ್‌?

ಭಾರತ ಬ್ಲೂ ತಂಡಕ್ಕೆ ಶುಭ್‌ಮನ್‌ ಗಿಲ್‌, ಭಾರತ ರೆಡ್‌ಗೆ ಪ್ರಿಯಾಂಕ್‌ ಪಾಂಚಾಲ್‌ ಹಾಗೂ ಭಾರತ ಗ್ರೀನ್‌ ತಂಡಕ್ಕೆ ಫೈಯಜ್‌ ಫಜಲ್‌ ನಾಯಕರಾಗಿದ್ದಾರೆ. ಭಾರತ ಬ್ಲೂ ತಂಡದಲ್ಲಿ ಶ್ರೇಯಸ್ ಗೋಪಾಲ್ ಸ್ಥಾನ ಪಡೆದರೆ, ಭಾರತ ರೆಡ್ ತಂಡದಲ್ಲಿ ಕರುಣ್ ನಾಯರ್ ಹಾಗೂ ರೋನಿತ್ ಮೋರೆ ಕಾಣಿಸಿಕೊಳ್ಳಲಿದ್ದಾರೆ.  

ದ್ರಾವಿಡ್‌ಗೆ BCCI ನೋಟಿಸ್; 2 ವಾರದಲ್ಲಿ ನೀಡಬೇಕಿದೆ ಉತ್ತರ!

ಬೆಂಗಳೂರಲ್ಲಿ ಟೂರ್ನಿ ನಡೆಯಲಿದ್ದು, ರೌಂಡ್‌ ರಾಬಿನ್‌ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ರೌಂಡ್‌ ರಾಬಿನ್‌ ಹಂತದ ಪಂದ್ಯಗಳಲ್ಲಿ ಕೆಂಪು ಚೆಂಡು, ಫೈನಲ್‌ನಲ್ಲಿ ಮಾತ್ರ ಗುಲಾಬಿ ಬಣ್ಣದ ಚೆಂಡನ್ನು ಬಳಕೆ ಮಾಡಲಾಗುತ್ತದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಫೈನಲ್‌ ಮಾತ್ರ ಹಗಲು-ರಾತ್ರಿ ಪಂದ್ಯವಾಗಿರಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್