
ಟ್ರಿನಿಡಾಡ್(ಆ.14): ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇದೀಗ 3ನೇ ಹಾಗೂ ಅಂತಿಮ ಪಂದ್ಯಕ್ಕೆ ಸಜ್ಜಾಗಿದೆ. ಸರಣಿ ಸಮಬಲದ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಬದಲು ಯಜುವೇಂದ್ರ ಚಹಾಲ್ ತಂಡ ಸೇರಿಕೊಂಡಿದ್ದಾರೆ.
ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದಾಗಿದೆ. 2ನೇ ಪಂದ್ಯಕ್ಕೂ ಮಳೆ ಅಡ್ಡಿಯಾಗಿತ್ತು. ಆದರೆ ದಿಟ್ಟ ಹೋರಾಟ ನೀಡಿದ ಟೀಂ ಇಂಡಿಯಾ ಡಕ್ವರ್ತ್ ನಿಯಮದ ಪ್ರಕಾರ 59 ರನ್ ಗೆಲುವು ಸಾಧಿಸಿತು. ಇದೀಗ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ವಿಂಡೀಸ್ ತಂಡಕ್ಕೆ ಸರಣಿ ಸಮಬಲ ಮಾಡಿಕೊಳ್ಳೋ ತವಕದಲ್ಲಿದ್ದರೆ, ಭಾರತ ಸರಣಿ ಗೆಲುವಿಗೆ ಹೊಂಚು ಹಾಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.