
ಲಂಡನ್(ಫೆ.21): ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಜೊತೆಗಿನ ಎಲ್ಲಾ ವ್ಯವಹಾರ ನಿಲ್ಲಿಸಲು ಒತ್ತಾಯ ಕೇಳಿಬರುತ್ತಿದೆ. ಅದರಲ್ಲೂ ಪ್ರಮುಖವಾಗಿ ಇಂಡೋ-ಪಾಕ್ ಕ್ರಿಕೆಟ್ ಸಂಪೂರ್ಣ ಸ್ಥಗಿತಗೊಳಿಸುವಂತೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. 2019ರ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಬಹಿಷ್ಕರಿಸುವಂತೆ ಆಗ್ರಹ ಹೆಚ್ಚಾಗಿದೆ.
ಇದನ್ನೂ ಓದಿ: ಪಾಕ್ ಜೊತೆ ಕ್ರಿಕೆಟ್ ಮಾತ್ರವಲ್ಲ ಯಾವುದೇ ಕ್ರೀಡೆ ಬೇಡ: ಗಂಗೂಲಿ!
ಭಾರತದ ನಡೆಯಿಂದ ಐಸಿಸಿ ಬೆಚ್ಚಿ ಬಿದ್ದಿದೆ. ಕಾರಣ ಭಾರತ ಹಾಗೂ ಪಾಕಿಸ್ತಾನ ನಡುವಿನ ಲೀಗ್ ಪಂದ್ಯಕ್ಕೆ 4 ಲಕ್ಷ ಟಿಕೆಟ್ ಬೇಡಿಕೆ ಇದೆ. ಇದು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಅಥವಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಇರೋ ಬೇಡಿಕೆಗಿಂತ 4 ಪಟ್ಟು ಹೆಚ್ಚು ಎಂದು ವಿಶ್ವಕಪ್ ಟೂರ್ನಿ ಆಯೋಜನೆ ನಿರ್ದೇಶಕ ಸ್ಟೀವ್ ಎಲ್ವರ್ಥಿ ಹೇಳಿದ್ದಾರೆ.
ಇದನ್ನೂ ಓದಿ: ಪುಲ್ವಾಮಾ ದಾಳಿ: ಕಂಗಾಲಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಹತಾಶೆ ಮಾತು!
ಭಾರತ ಹಾಗೂ ಪಾಕಿಸ್ತಾನ ಪಂದ್ಯ ರದ್ದಾದರೆ ಈ ಬಾರಿಯ ವಿಶ್ವಕಪ್ ಟೂರ್ನಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ಪಂದ್ಯದ ಪ್ರಸಾರ, ಜಾಹೀರಾತು, ಕ್ರೀಡಾಂಗಣದಲ್ಲಿನ ಜಾಹೀರಾತು ಸೇರಿದಂತೆ ಎಲ್ಲಾ ಪ್ರಾಯೋಜಕತ್ವ ರದ್ದಾಗಲಿದೆ. ಪಾಕಿಸ್ತಾನ ವಿರುದ್ದ ಕ್ರಿಕೆಟ್ ಪಂದ್ಯವನ್ನ ಭಾರತ ಬಹಿಷ್ಕರಿಸಬಾರದು. ಇದನ್ನ ಕ್ರೀಡೆಯಾಗಿ ನೋಡಿ ಎಂದು ಸ್ಟೀವ್ ಎಲ್ವರ್ಥಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.