
ಮುಂಬೈ(ಜು.29): ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ರನ್ನರ್-ಅಪ್ ಆದ ಭಾರತ ತಂಡಕ್ಕೆ ಮಹಾರಾಷ್ಟ್ರ ಸರ್ಕಾರ ಬಂಪರ್ ಬಹುಮಾನ ಘೋಷಿಸಿದೆ. ಪ್ರತಿ ಆಟಗಾರ್ತಿಗೂ 50 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಪೂನಮ್ ರಾವತ್, ಸ್ಮತಿ ಮಂಧನಾ ಹಾಗೂ ಮೋನಾ ಮೇಷ್ರಮ್ ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಇದಕ್ಕೂ ಮುನ್ನ ಬಿಸಿಸಿಐ ಪ್ರತಿ ಆಟಗಾರ್ತಿಯರಿಗೆ ತಲಾ 50 ಲಕ್ಷ ರೂ ಘೋಷಣೆ ಮಾಡಿತ್ತು. ಅಲ್ಲದೇ ರೈಲ್ವೆ ಇಲಾಖೆ ತನ್ನ ಆಟಗಾರ್ತಿಯರಿಗೆ ತಲಾ 13 ಲಕ್ಷ ರೂ. ಬಹುಮಾನ ಘೋಷಿಸಿತು
ಮಿಥಾಲಿಗೆ ಸಿಗದ ಸೈಟು: 2005ರಲ್ಲಿ ಭಾರತ ತಂಡ ರನ್ನರ್-ಅಪ್ ಆದಾಗ ತಂಡವನ್ನು ಮುನ್ನಡೆಸಿದ್ದ ಮಿಥಾಲಿಗೆ ವೈ.ಎಸ್.ರಾಜಶೇಖರ ರೆಡ್ಡಿ ಅವರ ಆಂಧ್ರಪ್ರದೇಶ ಸರ್ಕಾರ ನಿವೇಶನವೊಂದನ್ನು ನೀಡುವುದಾಗಿ ಘೋಷಿಸಿತ್ತು. ಆದರೆ 12 ವರ್ಷಗಳು ಕಳೆದರೂ ಮಿಥಾಲಿಗೆ ನಿವೇಶನ ಸಿಕ್ಕಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.