ಕಳೆದ ಪಂದ್ಯದ ರೀತಿಯೇ ಆಡಿದರೆ ಸರಣಿ ಗೆಲ್ಲಬಹುದು; ಪೆರೇರಾ

Published : Dec 12, 2017, 06:48 PM ISTUpdated : Apr 11, 2018, 12:45 PM IST
ಕಳೆದ ಪಂದ್ಯದ ರೀತಿಯೇ ಆಡಿದರೆ ಸರಣಿ ಗೆಲ್ಲಬಹುದು; ಪೆರೇರಾ

ಸಾರಾಂಶ

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡವು ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತವನ್ನು 7 ವಿಕೆಟ್'ಗಳ ಅಂತರದಲ್ಲಿ ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಮೊಹಾಲಿ(ಡಿ.12): ಮೊದಲ ಏಕದಿನ ಪಂದ್ಯದಲ್ಲಿ ತೋರಿದ ಪ್ರದರ್ಶನವನ್ನೇ ಮತ್ತೊಮ್ಮೆ ಮೊಹಾಲಿಯಲ್ಲೂ ಪ್ರದರ್ಶಿಸಿದರೆ ಟೀಂ ಇಂಡಿಯಾವನ್ನು ಮಣಿಸಿ ಸರಣಿ ಕೈವಶ ಮಾಡಿಕೊಳ್ಳಬಹುದು ಎಂದು ಶ್ರೀಲಂಕಾ ತಂಡದ ನಾಯಕ ತಿಸಾರ ಪೆರೇರಾ ಹೇಳಿದ್ದಾರೆ.

"ಭಾರತದಲ್ಲಿ ಚೊಚ್ಚಲ ಏಕದಿನ ಸರಣಿ ಗೆಲ್ಲಲು ಸುವರ್ಣಾವಕಾಶ ಒದಗಿ ಬಂದಿದೆ. ಭಾರತದಲ್ಲಿ ಹೆಚ್ಚಿನ ತಂಡಗಳು ಸರಣಿ ಗೆದ್ದಿಲ್ಲ. ಹಾಗಾಗಿ ನಾವು ಧರ್ಮಶಾಲಾದಲ್ಲಿ ಆಡಿದ ರೀತಿಯಲ್ಲಿಯೇ ಪ್ರದರ್ಶನ ತೋರಿದರೆ ಸರಣಿಯನ್ನು ಗೆಲ್ಲಬಹುದು" ಎಂದು ಸಹ ಆಟಗಾರರನ್ನು ಹುರಿದುಂಬಿಸಿದ್ದಾರೆ.  

12 ಏಕದಿನ ಸೋಲಿನ ಬಳಿಕ ಬಲಿಷ್ಠ ಟೀಂ ಇಂಡಿಯಾವನ್ನು ಮಣಿಸಿ ಆತ್ಮವಿಶ್ವಾಸದಲ್ಲಿರುವ ಶ್ರೀಲಂಕಾ ತಂಡವು 13ರಂದು ಮೊಹಾಲಿಯಲ್ಲಿ ನಡೆಯಲಿರುವ ಎರಡನೇ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡವು ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತವನ್ನು 7 ವಿಕೆಟ್'ಗಳ ಅಂತರದಲ್ಲಿ ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ ದಾಖಲೆ, ಜಾರ್ಖಂಡ್‌ ವಿರುದ್ಧ 413 ರನ್‌ ಬೆನ್ನಟ್ಟಿ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟ್ರೋಫಿ ಕಮ್‌ಬ್ಯಾಕ್‌ ಪಂದ್ಯದಲ್ಲಿ ಶತಕ ಚಚ್ಚಿದ ಕಿಂಗ್ ಕೊಹ್ಲಿ! ವಿರಾಟ್‌ಗಿದು ಕಳೆದ 4 ಪಂದ್ಯಗಳಲ್ಲಿ 3ನೇ ಶತಕ