ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಎಬಿ ಡಿವಿಲಿಯರ್ಸ್

Published : Jul 09, 2018, 06:49 PM IST
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಎಬಿ ಡಿವಿಲಿಯರ್ಸ್

ಸಾರಾಂಶ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಸೌತ್ಆಫ್ರಿಕಾ ಸ್ಟಾರ್ ಕ್ರಿಕೆಟಿಗ ಎಬಿ ಡಿವಿಲಿಯರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಷ್ಟಕ್ಕೂ ಎಬಿಡಿ ಹೇಳಿದ್ದೇನು? ಇಲ್ಲಿದೆ ವಿವರ.

ಕೇಪ್‌ಟೌನ್(ಜು.09): ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದ ಸೌತ್ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಆಘಾತ ನೀಡಿದ್ದರು. ಅತ್ಯುತ್ತಮ ಫಾರ್ಮ್‌ನಲ್ಲಿರುವಾಗಲೇ ಎಬಿಡಿ ಕ್ರಿಕೆಟ್ ಕರಿಯರ್‌ಗೆ ವಿದಾಯ ಹೇಳಿದ್ದರು. ಅಭಿಮಾನಿಗಳೆಲ್ಲಾ 2019ರ ವಿಶ್ವಕಪ್ ಟೂರ್ನಿಯಲ್ಲಿ ಎಬಿಡಿ ಬ್ಯಾಟಿಂಗ್ ನೋಡಲು ಕಾತರಗೊಂಡಿದ್ದರು. ಆದರೆ ದಿಢೀರ್ ವಿದಾಯ ಎಲ್ಲರಿಗೂ ಅಚ್ಚರಿ ತಂದಿತ್ತು.

ಎಬಿಡಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದಂತೆ ಐಪಿಎಲ್ ಅಭಿಮಾನಿಗಳಲ್ಲಿ ಆತಂಕ ಎದುರಾಗಿತ್ತು. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಎಬಿಡಿ ನಿರ್ಧಾರ ಅರಗಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಇಷ್ಟೇ ಅಲ್ಲ ವಿದಾಯ ಹೇಳುತ್ತಿದ್ದಂತೆ, ವಿದೇಶಿ ಟೂರ್ನಿಗಳಲ್ಲಿ ಆಡೋ ಸಾಧ್ಯತೆ ಕಡಿಮೆ ಎಂದಿದ್ದರು.

ಸೌತ್ಆಫ್ರಿಕಾ ಸುದ್ದಿ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಎಬಿಡಿ ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು ಕೆಲ ವರ್ಷ ಐಪಿಎಲ್ ಟೂರ್ನಿಯಲ್ಲಿ ಆ‌ರ್‌ಸಿಬಿ ತಂಡವನ್ನ ಪ್ರತಿನಿಧಿಸೋದಾಗಿ ಎಬಿಡಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ಟೂರ್ನಿಯ ಆರ್‌ಸಿಬಿ ಹಾಗೂ ಸೌತ್ಆಫ್ರಿಕಾದ ಟೈಟಾನ್ಸ್ ತಂಡದ ಪರ ಆಡೋದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಯುವ ಕ್ರಿಕೆಟಿಗರಿಗೆ ಮಾರ್ಗದರ್ಶನ ಮಾಡಲಿದ್ದೇನೆ ಎಂದು ಎಬಿಡಿ ಹೇಳಿದ್ದಾರೆ.

ಸೌತ್ಆಫ್ರಿಕಾ ದೇಸಿ ಕ್ರಿಕೆಟ್‌ನಲ್ಲಿ ಸಕ್ರೀಯವಾಗಿರುತ್ತೇನೆ ಎಂದಿರುವ ಎಬಿಡಿ, ಐಪಿಎಲ್ ಟೂರ್ನಿಯಲ್ಲಿ ಎಷ್ಟು ಆವೃತ್ತಿ ಆಡಲಿದ್ದಾರೆ ಎಂಬುದನ್ನ ಸ್ಪಷ್ಟಪಡಿಸಿಲ್ಲ. ಆದರೆ ಕೆಲ ವರ್ಷಗಳ ಕಾಲ ಐಪಿಎಲ್ ಟೂರ್ನಿಯಲ್ಲಿ ಮುಂದುವರಿಯೋದಾಗಿ ಮಾತ್ರ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದು ಕಾಲದಲ್ಲಿ ಮನೆ ಬಾಡಿಗೆ ಕಟ್ಟಲೂ ಹಣಕ್ಕಾಗಿ ಪರದಾಡುತ್ತಿದ್ದ WWE ರೆಸ್ಲರ್ ಜಾನ್ ಸಿನಾ ಸಂಪತ್ತು ಇಷ್ಟೊಂದಾ?
Ind vs SA 3rd T20I: ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?