
ಕೇಪ್ಟೌನ್(ಡಿ.07): ಮೊಣಕೈ ಶಸ್ತ್ರಚಿಕಿತ್ಸೆಯಿಂದಾಗಿ ಕಳೆದಾರು ತಿಂಗಳುಗಳ ಕಾಲ ಕ್ರಿಕೆಟ್'ನಿಂದ ದೂರವುಳಿದಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್ಮನ್ ಎಬಿ ಡಿವಿಲಿಯರ್ಸ್, ಇದೀಗ ತಾವು ಭಾರತದ ಖ್ಯಾತ ಟೈರ್ ತಯಾರಿಕಾ ಸಂಸ್ಥೆಯಾದ ಎಂಆರ್ಎಫ್ ಜತೆಗೆ ಪ್ರಾಯೋಜಕತ್ವಕ್ಕೆ ಸಹಿ ಹಾಕಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘‘ಎಂಆರ್ಎಫ್ ಲಾಂಛನವುಳ್ಳ ಬ್ಯಾಟ್ ಇದೀಗ ನನ್ನ ಕೈ ಸೇರಿರುವುದು ಖುಷಿಯ ವಿಚಾರ’’ ಎಂದಿದ್ದಾರೆ.
ಈ ಹಿಂದೆ, ಭಾರತದ ಖ್ಯಾತ ಕ್ರಿಕೆಟ್ ತಾರೆಗಳಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ನ ಬ್ರಯಾನ್ ಲಾರಾ, ಸ್ಟೀವ್ ವಾ ಅವರಿಗೂ ಎಂಆರ್ಎಫ್ ಪ್ರಾಯೋಜಕತ್ವ ನೀಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.