ಮತ್ತೆ ಕೆಎಎ ಚುನಾವಣಾ ಸಂಘರ್ಷ

Published : Mar 27, 2018, 11:39 AM ISTUpdated : Apr 11, 2018, 01:00 PM IST
ಮತ್ತೆ ಕೆಎಎ ಚುನಾವಣಾ ಸಂಘರ್ಷ

ಸಾರಾಂಶ

ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಮತ್ತೆ ಚುನಾವಣಾ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಸೋಮವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿಯಮ ಬಾಹಿರವಾಗಿ ಚುನಾವಣೆ ಮಾಡಲು ಹೊರಟಿರುವ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಅವರ ಕ್ರಮವನ್ನು ಉಪಾಧ್ಯಕ್ಷೆ ಅಶ್ವಿನಿ ನಾಚಪ್ಪ ಮತ್ತು 15 ಜಿಲ್ಲಾ ಸಂಸ್ಥೆಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು :  ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಮತ್ತೆ ಚುನಾವಣಾ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಸೋಮವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿಯಮ ಬಾಹಿರವಾಗಿ ಚುನಾವಣೆ ಮಾಡಲು ಹೊರಟಿರುವ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಅವರ ಕ್ರಮವನ್ನು ಉಪಾಧ್ಯಕ್ಷೆ ಅಶ್ವಿನಿ ನಾಚಪ್ಪ ಮತ್ತು 15 ಜಿಲ್ಲಾ ಸಂಸ್ಥೆಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಜುಲೈ 1, 2017ರಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಆ ವೇಳೆ ಅನಧಿಕೃತ ವ್ಯಕ್ತಿಗಳ ಮಧ್ಯೆ ಪ್ರವೇಶದಿಂದ ಚುನಾವಣೆ ನಡೆದಿರಲಿಲ್ಲ. ಈ ಸಂಬಂಧ ತ್ಯಾಜ್ಯ ಬಗೆಹರಿಸುವಂತೆ ಹೈಕೋರ್ಟ್ ಮೊರೆ ಹೋಗಲಾಗಿತ್ತು.

ಹೈಕೋರ್ಟ್, ಸಂಸ್ಥೆಯ ಬೈಲಾ ಪ್ರಕಾರ ಚುನಾವಣೆ ನಡೆಸಬೇಕು ಎಂದು ಹೇಳಿತ್ತು. ಆದರೆ ಪ್ರಸ್ತುತ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಕೆಲ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ, ಅನಧಿಕೃತ ಸಂಸ್ಥೆಗಳ ಹೆಸರನ್ನು ನೊಂದಾಯಿಸಿಕೊಂಡು ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಸಂಸ್ಥೆಯ ಬೈಲಾ ಪ್ರಕಾರ ಚುನಾವಣೆ ನಡೆದರೆ ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಆದರೆ ನಿಯಮ ಬಾಹಿರ ಚುನಾವಣೆ ನಡೆಯುವುದಕ್ಕೆ ಬಿಡುವುದಿಲ್ಲ ಎಂದಿದ್ದಾರೆ. ಕಳೆದ 14 ವರ್ಷಗಳಿಂದ ಸಂಸ್ಥೆಯ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್ ಯಾರ ಕೈಗೂ ಸಿಗುತ್ತಿಲ್ಲ ಎಂದಿದ್ದಾರೆ.

ಪಟ್ಟಿಯಲ್ಲಿ 7 ಜಿಲ್ಲೆಗಳ ಹೆಸರಿಲ್ಲ: ಸದ್ಯ ಸುನಿಲ್ ಸೃಷ್ಟಿಸಿರುವ ಮತದಾರರ ಪಟ್ಟಿಯಲ್ಲಿ ಗದಗ, ಹಾವೇರಿ, ಬಾಗಲಕೋಟೆ, ಧಾರವಾಡ, ದಾವಣಗೆರೆ, ಮತ್ತು ರಾಮನಗರ, ಉಡುಪಿ ಸೇರಿದಂತೆ 7 ಜಿಲ್ಲೆಗಳ ಹೆಸರನ್ನು ಚುನಾವಣಾ ಸದಸ್ಯರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಅಶ್ವಿನಿ ಹೇಳಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?