ಅಮೃತ್'ರಾಜ್ ಪದಚ್ಯುತಿ?

Published : Dec 03, 2016, 02:32 PM ISTUpdated : Apr 11, 2018, 01:06 PM IST
ಅಮೃತ್'ರಾಜ್ ಪದಚ್ಯುತಿ?

ಸಾರಾಂಶ

2014ರಲ್ಲಿ ಬೆಂಗಳೂರಿನಲ್ಲಿ ಸರ್ಬಿಯಾ ವಿರುದ್ಧ ನಡೆದ ವರ್ಲ್ಡ್ ಗ್ರೂಪ್ ಪ್ಲೇ ಆಫ್ ಪಂದ್ಯವು ನಡೆಯುವ ವೇಳೆಯೇ  ಓರ್ವ ಆಟಗಾರ ತನ್ನ ಗೆಳತಿಯನ್ನು ಕೊಠಡಿಯೊಳಗೆ ಕರೆದುಕೊಂಡು ಹೋಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ನವದೆಹಲಿ(ಡಿ.03): ಅಶಿಸ್ತಿನ ನಡವಳಿಕೆಯ ಆಧಾರದಲ್ಲಿ ಭಾರತೀಯ ಡೇವಿಸ್ ಕಪ್ ಟೆನಿಸ್ ತಂಡದ ‘ಆಡದ ನಾಯಕ’ ಆನಂದ್ ಅಮೃತ್‌ರಾಜ್ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಲು ಭಾರತೀಯ ಟೆನಿಸ್ ಸಂಸ್ಥೆ (ಎಐಟಿಎ) ಚಿಂತನೆ ನಡೆಸಿರುವುದಾಗಿ ‘ಡೆಕ್ಕನ್ ಕ್ರೋನಿಕಲ್’ ಹೇಳಿದೆ.

ಮೂರು ವರ್ಷಗಳ ಹಿಂದೆ ಎಸ್.ಪಿ. ಮಿಶ್ರಾ ಅವರನ್ನು ಡೇವಿಸ್ ಕಪ್ ತಂಡದ ನಾಯಕತ್ವದಿಂದ ಇಳಿಸಿದ್ದಾಗ ಆಟಗಾರರೇ ಆನಂದ್ ಅವರನ್ನು ನಾಯಕರನ್ನಾಗಿ ಆರಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಟಿಎ ಕಾರ್ಯದರ್ಶಿ ಹಿರಣ್ಮಯ್ ಚಟರ್ಜಿ, ‘‘ಇತ್ತೀಚೆಗೆ, ಡೇವಿಸ್ ಕಪ್ ಡ್ರೆಸಿಂಗ್ ರೂಂ ಎನ್ನುವುದು ಯಾರೇ ಆಗಲಿ ಸುಲಭವಾಗಿ ಪ್ರವೇಶಿಸುವಂತ ತಾಣವಾಗಿದೆ’’ ಎಂದು ಆನಂದ್ ವಿರುದ್ಧ ಮಾರ್ಮಿಕವಾಗಿ ಹೇಳಿದ್ದಾರೆ.

2014ರಲ್ಲಿ ಬೆಂಗಳೂರಿನಲ್ಲಿ ಸರ್ಬಿಯಾ ವಿರುದ್ಧ ನಡೆದ ವರ್ಲ್ಡ್ ಗ್ರೂಪ್ ಪ್ಲೇ ಆಫ್ ಪಂದ್ಯವು ನಡೆಯುವ ವೇಳೆಯೇ  ಓರ್ವ ಆಟಗಾರ ತನ್ನ ಗೆಳತಿಯನ್ನು ಕೊಠಡಿಯೊಳಗೆ ಕರೆದುಕೊಂಡು ಹೋಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಈ ತಿಂಗಳ ಕೊನೆಯಲ್ಲಿ ಅಮೃತ್‌ರಾಜ್ ಅಧಿಕಾರವಧಿ ಮುಕ್ತಾಯವಾಗಲಿದ್ದು, ಅದನ್ನು ಮುಂದುವರೆಸದಿರಲು ಎಐಟಿಎ ನಿರ್ಧರಿಸಿದೆ ಎನ್ನಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಕೇವಲ 12 ಜನರಲ್ಲಿ ಮಾತ್ರ ಇರುವ ಅಪರೂಪದ ವಾಚ್‌ ಮೆಸ್ಸಿಗೆ ಗಿಫ್ಟ್ ಕೊಟ್ಟ ಅನಂತ್ ಅಂಬಾನಿ!
ಐಪಿಎಲ್ ಹರಾಜು: ಶಿಕ್ಷಕ ತಂದೆಗೆ ₹12 ಸಾವಿರ ವೇತನ, ಮಗ ಪ್ರಶಾಂತ್‌ಗೆ 14.2 ಕೋಟಿ ಸಂಬಳ!