ಮಿಂಚಿದ ಅಜಿಂಕ್ಯಾ ಪವಾರ್, ಬೆಂಗ್ಳೂರು ಬುಲ್ಸ್‌ ಆಟಕ್ಕೆ ತಲೆಬಾಗಿದ ತಮಿಳ್‌ ತಲೈವಾಸ್

Published : Nov 05, 2024, 09:02 AM IST
ಮಿಂಚಿದ ಅಜಿಂಕ್ಯಾ ಪವಾರ್, ಬೆಂಗ್ಳೂರು ಬುಲ್ಸ್‌ ಆಟಕ್ಕೆ ತಲೆಬಾಗಿದ ತಮಿಳ್‌ ತಲೈವಾಸ್

ಸಾರಾಂಶ

ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಬೆಂಗಳೂರು ಬುಲ್ಸ್‌ ತಂಡವು ಎರಡನೇ ಗೆಲುವು ಸಾಧಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಹೈದರಾಬಾದ್‌: 11ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್‌ ತಂಡ ಎರಡನೇ ಗೆಲುವು ದಾಖಲಿಸಿದೆ. ಸೋಮವಾರ ತಮಿಳ್‌ ತಲೈವಾಸ್‌ ವಿರುದ್ಧ ಬುಲ್ಸ್‌ 36-32 ಅಂಕಗಳ ಅಂತರದಲ್ಲಿ ಜಯಗಳಿಸಿತು.

ಸತತ ಸೋಲುಗಳಿಂದ ಕಂಗೆಟ್ಟಿದ್ದ ಬುಲ್ಸ್‌ ಈ ಪಂದ್ಯದಲ್ಲಿ ಆರಂಭದಲ್ಲೇ ಸುಧಾರಿತ ಪ್ರದರ್ಶನ ತೋರಿತು. ಮೊದಲಾರ್ಧದಲ್ಲಿ ತಂಡ 14-13 ಅಂಕಗಳಿಂದ ಮುಂದಿತ್ತು. ಕೊನೆವರೆಗೂ ಮುನ್ನಡೆ ಕಾಯ್ದುಕೊಂಡ ತಂಡ 4 ಅಂಕಗಳ ಅಂತರದಲ್ಲಿ ಗೆಲುವು ಒಲಿಸಿಕೊಂಡಿತು. ಪ್ರದೀಪ್‌ ನರ್ವಾಲ್‌ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ತಂಡದ ಪರ ಅಜಿಂಕ್ಯಾ ಪವಾರ್‌ 6, ಅಕ್ಷಿತ್‌ 6 ಅಂಕ ಗಳಿಸಿದರು. ಬೆಂಗಳೂರು ಸದ್ಯ 7 ಪಂದ್ಯಗಳಲ್ಲಿ 12 ಅಂಕ ಗಳಿಸಿದ್ದು, ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದೆ.

ಕಿವೀಸ್‌ ಎದುರು ಭಾರತ ವೈಟ್‌ವಾಶ್‌: ಎದ್ದಿವೆ ಗಂಭೀರ ಪ್ರಶ್ನೆಗಳು!

ದಿನದ ಮತ್ತೊಂದು ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಪುಣೇರಿ ಪಲ್ಟನ್‌ 49-30 ಅಂಕಗಳ ಭರ್ಜರಿ ಗೆಲುವು ಸಾಧಿಸಿತು. 7 ಪಂದ್ಯಗಳಲ್ಲಿ 5ನೇ ಜಯ ದಾಖಲಿಸಿದ ಪುಣೇರಿ ಅಗ್ರಸ್ಥಾನದಲ್ಲಿದೆ.

ಇಂದಿನ ಪಂದ್ಯಗಳು

ಜೈಪುರ-ಯುಪಿ ಯೋಧಾಸ್‌, ರಾತ್ರಿ 8ಕ್ಕೆ

ಯು ಮುಂಬಾ-ದಬಾಂಗ್‌ ಡೆಲ್ಲಿ, ರಾತ್ರಿ 9ಕ್ಕೆ

ನ.30ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್‌

ಬೆಂಗಳೂರು: ಪ್ರತಿಷ್ಠಿತ ಅಂತಾರಾಷ್ಟ್ರಿಯ ವೃತ್ತಿಪರ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಬೆಂಗಳೂರಿನಲ್ಲಿ ನ.30ರಂದು ನಡೆಯಲಿದೆ. ಕ್ರೌನ್ಸ್‌ ಬಾಕ್ಸಿಂಗ್‌ ಪ್ರಮೋಷನ್ಸ್‌ ಸಂಸ್ಥೆಯು ಗ್ರಾಸ್‌ರೂಟ್‌ ಬಾಕ್ಸಿಂಗ್‌ ಸಂಸ್ಥೆಯ ಸಹಯೋಗದಲ್ಲಿ ಈ ಚಾಂಪಿಯನ್‌ಶಿಪ್‌ ಆಯೋಜಿಸಲಿದ್ದು, ಎಚ್‌ಎಸ್‌ಆರ್‌ ಲೇಔಟ್‌ನ ವೈಟ್‌ಹೌಸ್‌ನಲ್ಲಿ ಪಂದ್ಯಗಳು ನಡೆಯಲಿವೆ.

ಸೋಮವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಯೋಜಕರು ಚಾಂಪಿಯನ್‌ಶಿಪ್‌ ಬಗ್ಗೆ ಮಾಹಿತಿ ನೀಡಿದರು. ಡಬ್ಲ್ಯುಬಿಸಿ ಯೂತ್‌ ವಿಶ್ವ ಚಾಂಪಿಯನ್‌ಶಿಪ್‌ ಹಾಗೂ ಡಬ್ಲ್ಯುಬಿಸಿ ಭಾರತೀಯ ಚಾಂಪಿಯನ್‌ಶಿಪ್‌ ಹೆಸರಿನ ಎರಡು ವಿಭಾಗಗಳಲ್ಲಿ ಪಂದ್ಯಗಳು ಆಯೋಜನೆಗೊಳ್ಳಲಿವೆ. ಭಾರತದ ಅಗ್ರ ಬಾಕ್ಸರ್‌ಗಳ ಜೊತೆ ಉಗಾಂಡ, ಘಾನಾ, ಥಾಯ್ಲೆಂಡ್‌, ಫಿಲಿಪ್ಪೀನ್ಸ್‌ನ ಬಾಕ್ಸರ್‌ಗಳೂ ಸ್ಪರ್ಧಿಸಲಿದ್ದಾರೆ. ವಿಶ್ವ ಯೂತ್‌ ಚಾಂಪಿಯನ್‌ಶಿಪ್‌ನಲ್ಲಿ ಲಾಲ್ಡಿನ್‌ಸಂಘ ಸ್ಪರ್ಧಿಸಲಿದ್ದು, ರಿತೇಶ್‌ ಸಿಂಗ್‌ ಹಾಗೂ ಲಾಲ್‌ರುವಾಯ್ಟ್‌ಲುವಾಂಗ್‌ ಭಾರತೀಯ ಚಾಂಪಿಯನ್‌ಶಿಪ್‌ನಲ್ಲಿ ಸೆಣಸಲಿದ್ದಾರೆ.

ಕ್ರಿಕೆಟ್‌ಗೆ ಸಂಬಂಧಿಸಿದ 'ಕೌನ್ ಬನೇಗಾ ಕರೋಡ್‌ಪತಿ'ಯಲ್ಲಿ ಕೇಳಲಾದ ₹6.40 ಲಕ್ಷದ ಈ ಪ್ರಶ್ನೆಗೆ ಉತ್ತರ ಗೊತ್ತಾ?

ಕ್ರೌನ್ ಬಾಕ್ಸಿಂಗ್‌ ಸಂಸ್ಥಾಪಕ ಪಾಯಮ್‌ ಹೊನಾರಿ, ಭಾರತದ ಮಾಜಿ ಅಮೆಚೂರ್‌ ಬಾಕ್ಸರ್‌ ಮುಜ್‌ತಬಾ ಕಮಲ್‌, ಮಾಜಿ ಕ್ರಿಕೆಟಿಗ ನಾರಾಯಣ ರಾಜು ಸೇರಿ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?