
ಲಾರ್ಡ್ಸ್(ಆ.11): ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಕೇವಲ 107ರನ್ಗೆ ಆಲೌಟ್ ಆಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ 35.2 ಓವರ್ ಬ್ಯಾಟಿಂಗ್ ಮಾಡಿ ಅಲ್ಪಮೊತ್ತಕ್ಕೆ ಆಲೌಟ್ ಆದರೂ, ಟೀಂ ಇಂಡಿಯಾದ ಆತ್ಮವಿಶ್ವಾಸಕ್ಕೇನು ಕೊರತೆಯಾಗಿಲ್ಲ.
ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರೂ, ದ್ವಿತೀಯ ಇನ್ನಿಂಗ್ಸ್ನಲ್ಲಿ ಕಮ್ಬ್ಯಾಕ್ ಮಾಡೋ ಅವಕಾಶ ಭಾರತಕ್ಕಿದೆ. ಈ ಮೂಲಕ ಪಂದ್ಯದಲ್ಲಿ ಗೆಲುವು ಸಾಧಿಸಲು ಟೀಂ ಇಂಡಿಯಾ ಹವಣಿಸಲಿದೆ ಎಂದು ಉಪನಾಯಕ ಅಜಿಂಕ್ಯ ರಹಾನೆ ಐಸಿಸಿ ವೆಬ್ಸೈಟ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಪಂದ್ಯ ಇಲ್ಲಿಗೆ ಮುಗಿದಿಲ್ಲ. ಆತ್ಮವಿಶ್ವಾಸದಿಂದ ಆಡಿದರೆ ಖಂಡಿತ ಲಾರ್ಡ್ಸ ಪಂದ್ಯ ಗೆಲ್ಲಲು ಸಾಧ್ಯವಿದೆ. ಉಳಿದಿರೋ ಪ್ರತಿ ಸೆಶನ್ಗಳೂ ಟೀಂ ಇಂಡಿಯಾಗೆ ಪ್ರಮುಖವಾಗಿದೆ ಎಂದು ರಹಾನೆ ಹೇಳಿದ್ದಾರೆ.
ಟೀಂ ಇಂಡಿಯಾವನ್ನ ಆಲೌಟ್ ಮಾಡಿರುವ ಇಂಗ್ಲೆಂಡ್ ತೃತೀಯ ದಿನ ಮೊದಲ ಇನ್ನಿಂಗ್ಸ್ ಆರಂಭಿಸಿದೆ. ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನ ಮಳೆರಾಯ ಮೇಲುಗೈ ಸಾಧಿಸಿದ್ರೆ, ದ್ವಿತೀಯ ದಿನ ಇಂಗ್ಲೆಂಡ್ ಪಾಲಾಗಿತ್ತು. ಇದೀಗ ತೃತೀಯ ದಿನದ ಹೋರಾಟ ಫಲಿತಾಂಶ ನಿರ್ಧರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.