ಟೀಂ ಇಂಡಿಯಾ ಕ್ರಿಕೆಟಿಗನ ತಂದೆ ಆರೆಸ್ಟ್; ಅಷ್ಟಕ್ಕೂ ಅವರು ಮಾಡಿದ ಎಡವಟ್ಟೇನು ಗೊತ್ತಾ..?

Published : Dec 16, 2017, 04:15 PM ISTUpdated : Apr 11, 2018, 12:38 PM IST
ಟೀಂ ಇಂಡಿಯಾ ಕ್ರಿಕೆಟಿಗನ ತಂದೆ ಆರೆಸ್ಟ್; ಅಷ್ಟಕ್ಕೂ ಅವರು ಮಾಡಿದ ಎಡವಟ್ಟೇನು ಗೊತ್ತಾ..?

ಸಾರಾಂಶ

ಕೊಲ್ಹಾಪುರ ಪೊಲೀಸರು ಸಿಆರ್‌'ಪಿಸಿ 41/1ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರಹಾನೆ ತಂದೆಯನ್ನು ಬಂಧಿಸಿದ್ದಾರೆಂದು ವರದಿಯಾಗಿದೆ.

ಮುಂಬೈ(ಡಿ.16): ರಸ್ತೆ ಅಪಘಾತದ ಕೇಸ್‌'ನಲ್ಲಿ ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರ ತಂದೆ ಮಧುಕರ್ ರಾವ್ ರಹಾನೆ ಬಂಧನಕ್ಕೊಳಗಾಗಿದ್ದಾರೆ.

ಗುರುವಾರ ಕೊಲ್ಹಾಪುರಕ್ಕೆ ಪ್ರಯಾಣಿಸುತ್ತಿದ್ದ ವೇಳೆ, ರಹಾನೆ ತಂದೆ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ 67 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಸಾವಿತ್ರಿ ನಗರದ ಆಶಾಬಾಯಿ ಕಾಂಬ್ಳೆ ಎಂದು ಗುರುತಿಸಲಾಗಿದೆ.

ರಸ್ತೆ ದಾಟುವಾಗ ಆಶಾಬಾಯಿ ಗೊಂದಲಕ್ಕೆ ಒಳಗಾಗಿ, ಮಧುಕರ್ ಅವರ ಕಾರಿಗೆ ಅಡ್ಡಬಂದಿದ್ದಾರೆ. ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಳು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತರಾದರು. ಕೊಲ್ಹಾಪುರ ಪೊಲೀಸರು ಸಿಆರ್‌'ಪಿಸಿ 41/1ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರಹಾನೆ ತಂದೆಯನ್ನು ಬಂಧಿಸಿದ್ದಾರೆಂದು ವರದಿಯಾಗಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಬಾತ್‌ರೂಮ್‌ನಲ್ಲೇ ಹಾಕಿ ಕೋಚ್ ಅತ್ಯಾ*ಚಾರ; ಆರೋಪಿ ಜೈಲಿಗಟ್ಟಿದ ಪೊಲೀಸರು
ಟಿ20 ವಿಶ್ವಕಪ್‌: ಬಾಂಗ್ಲಾದ ಪಂದ್ಯಕ್ಕೆ ಆತಿಥ್ಯ ವಹಿಸಲು ಮುಂದೆ ಬಂದ ಪಾಕಿಸ್ತಾನ! ಆದ್ರೆ ಇದು ಸಾಧ್ಯನಾ?