ಇಂಡೋನೇಷ್ಯಾ ಓಪನ್ 2019: ಸಿಂಧು ಪ್ರಶಸ್ತಿ ಕನಸು ಭಗ್ನ!

Published : Jul 21, 2019, 03:55 PM IST
ಇಂಡೋನೇಷ್ಯಾ ಓಪನ್ 2019: ಸಿಂಧು ಪ್ರಶಸ್ತಿ ಕನಸು ಭಗ್ನ!

ಸಾರಾಂಶ

ಇಂಡೋನೇಷ್ಯಾ ಓಪನ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದ ಪಿವಿ ಸಿಂಧು, ಪ್ರಶಸ್ತಿ ಸುತ್ತಿನ ಹೋರಾಟಗಲ್ಲಿ ಮುಗ್ಗರಿಸಿದ್ದಾರೆ. ರೋಚಕ ಹೋರಾಟದಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಸಿಂಧು, ಅಂತಿಮ ಹಂತದಲ್ಲಿ ಸೋಲಿಗೆ ಶರಣಾದರು.

ಜಕಾರ್ತ(ಜು.21): ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ತಾರೆ ಪಿವಿ ಸಿಂಧು ಆಘಾತ ಅನುಭವಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕಾನೆ ಯಮಗುಚಿ ವಿರುದ್ಧ ಸೋಲು ಅನುಭವಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಸಿಂಧು, ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ: ಪಿವಿ ಸಿಂಧೂ ಪಾತ್ರದಲ್ಲಿ ದೀಪಿಕಾ, ಮಿಥಾಲಿಯಾಗಿ ತಾಪ್ಸಿ ಪನ್ನು

ಫೈನಲ್ ಪಂದ್ಯದಲ್ಲಿ ಯಮಗುಚಿ 21-15, 21-16 ಅಂತರದಲ್ಲಿ ಸಿಂಧು ಮಣಿಸಿ ಪ್ರಶಸ್ತಿ ಗೆದ್ದುಕೊಂಡರು. ಪುಂದ್ಯದ ಆರಂಭಿಕ ಹಂತದಲ್ಲಿ 11-8 ಅಂತರದ ಮುನ್ನಡೆ ಸಾಧಿಸಿದ್ದ ಸಿಂಧು ಬಳಿಕ ಅಂತ ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ. ಯಮಗುಚಿ ಅದ್ಭುತ ಹೋರಾಟಕ್ಕೆ ತಲೆಬಾಗಿದರು.

ಇದನ್ನೂ ಓದಿ: ತೇಜಸ್ ಯುದ್ಧವಿಮಾನದಲ್ಲಿ ಹಾರಾಡಿದ ಬ್ಯಾಡ್ಮಿಂಟನ್ ತಾರೆ ಸಿಂಧು!

ಈ ವರ್ಷದ ಆರಂಭದಲ್ಲಿ ಇಂಡಿಯಾ ಓಪನ್ ಹಾಗೂ ಸಿಂಗಾಪೂರ್ ಓಪನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿ ನಿರಾಸೆ ಅನುಭವಿಸಿದ್ದರು.  ಇದೀಗ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿದ್ದಾರೆ.  ಈ ಮೂಲಕ 2019ರ ಮೊದಲ ಪ್ರಶಸ್ತಿ ಗೆಲ್ಲೋ ಅವಕಾಶ ಕೈತಪ್ಪಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?