
ದೆಹಲಿ(ಜೂ.30): ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡ ಇತ್ತೀಚಿನ ವರ್ಷಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಕಳೆದ 5 ವರ್ಷಗಳಲ್ಲಿ ಭಾರತ ಮಹಿಳಾ ತಂಡ ವಿಶ್ವಮಟ್ಟದಲ್ಲೆ ಬಾರಿ ಸದ್ದು ಮಾಡಿದೆ. ಬಲಿಷ್ಠ ತಂಡವಾಗಿ ರೂಪುಗೊಳ್ಳುತ್ತಿದ್ದಂತೆ, ಮಹಿಳಾ ತಂಡದಲ್ಲಿ ಬಿರುಕು ಕಾಣಿಸಿಕೊಂಡಿದೆ.
ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದ ಸೋಲಿನ ಬಳಿಕ ಭಾರತ ತಂಡದ ಹೆಡ್ ಕೋಚ್ ತುಷಾರ್ ಆರೋಥೆ ಹಾಗೂ ತಂಡದ ಆಟಗಾರರ ನಡುವಿನ ಮನಸ್ತಾಪ ಹೆಚ್ಚಾಗಿದೆ. ಕಳೆದ ವರ್ಷದ ಮಹಿಳಾ ವಿಶ್ವಕಪ್ ಟೂರ್ನಿಗೂ ಮೊದಲೇ ತಂಡದಲ್ಲಿ ಬಿರುಕು ಮೂಡಿತ್ತು. ತಂಡದ ಆಟಗಾರರು ಕೋಚ್ ವಿರುದ್ಧ ಬಿಸಿಸಿಐಗೂ ದೂರು ನೀಡಿದ್ದರು. ಇದೀಗ ಕೋಚ್ ಹಾಗೂ ತಂಡದ ನಡುವಿನ ಕಿತ್ತಾಟ ತಾರಕಕ್ಕೇರಿದೆ.
ಬಿಸಿಸಿಐ ಇತ್ತೀಚೆಗೆ ಆಯೋಜಿಸಿದ್ದ ಸಭೆಗೆ ನಾಯಕ ಮಿಥಾಲಿ ರಾಜ್, ಟಿ20 ನಾಯಕ ಹರ್ಮನ್ಪ್ರೀತ್ ಕೌರ್, ಬಿಸಿಸಿಐ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸಿಓಎ ವಿನೋದ್ ರೈ ಭಾಗವಹಿಸಿದ್ದರು. ಆದರೆ ಮಹಿಳಾ ತಂಡದ ಕೋಚ್ ತುಷಾರ್ ಅರೋಥೆ ಅವರಿಗೆ ಆಹ್ವಾನವೇ ನೀಡಿಲ್ಲ.
2017ರ ಎಪ್ರಿಲ್ನಲ್ಲಿ ಮಹಿಳಾ ತಂಡದ ಕೋಚ್ ಆಗಿ ತುಷಾರ್ ಆರೋಥೆ ನೇಮಕಗೊಂಡರು. ಸೌತ್ಆಫ್ರಿಕಾ ಪ್ರವಾಸದ ವೇಳೆ ಎಲ್ಲವೂ ಸರಿಯಿತ್ತು. ಆದರೆ ಮಹಿಳಾ ವಿಶ್ವಕಪ್ ಟಿ20 ಟೂರ್ನಿಯ ಬಳಿಕ ತಂಡದಲ್ಲಿ ಭಿನ್ನಭಿಪ್ರಾಯ ಮೂಡಿದೆ. ಆಟಗಾರ್ತಿಯರ ಪ್ರತಿ ವಿಚಾರಕ್ಕೂ ಕೋತ್ ಮೂಗುತುರಿಸುತ್ತಿದ್ದಾರೆ ಎಂದು ಆರೋಪಿಸಿ ಮಹಿಳಾ ಕ್ರಿಕೆಟಿಗರು ಬಿಸಿಸಿಐಗೆ ದೂರು ಸಲ್ಲಿಸಿದ್ದರು. ಪ್ರಕರಣ ಇದೀಗ ಬಿಸಿಸಿಐ ಮೆಟ್ಟಿಲೇರಿದೆ. ಈ ಕುರಿತು ಶೀಘ್ರದಲ್ಲೇ ಬಿಸಿಸಿಐ ನಿರ್ಧಾರ ಪ್ರಕಟಿಸೋ ಸಾಧ್ಯತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.