
ಮುಂಬೈ(ಡಿ.15): ಇಂಜುರಿಯಿಂದ ಚೇತರಿಸಿಕೊಂಡು ರಣಜಿ ಪಂದ್ಯದಲ್ಲಿ ಕಣಕ್ಕಿಳಿದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಹಾರ್ದಿಕ್ ಪಾಂಡ್ಯ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಶೀಘ್ರದಲ್ಲೇ ಟೀಂ ಇಂಡಿಯಾ ಸೇರಿಕೊಳ್ಳೋ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮತ್ತೆ ಕಳಪೆ ಪ್ರದರ್ಶನ- ಕೆಎಲ್ ರಾಹುಲ್ ವಿರುದ್ದ ಟ್ವಿಟರಿಗರ ಆಕ್ರೋಶ!
ಮುಂಬೈ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಬರೋಡಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 5 ವಿಕೆಟ್ ಕಬಳಿಸಿದ್ದಾರೆ. ಮುಂಬೈ ಆರಂಭಿಕ ಬ್ಯಾಟ್ಸ್ಮನ್ ಆದಿತ್ಯ ತಾರೆ ಸೇರಿದಂತೆ ಐವರು ಪ್ರಮುಖ ಬ್ಯಾಟ್ಸ್ಮನ್ಗಳ ವಿಕೆಟ್ ಕಬಳಿಸಿದ ಪಾಂಡ್ಯ ಬರೋಡಾ ತಂಡಕ್ಕೆ ಭರ್ಜರಿ ಮೇಲುಗೈ ತಂದುಕೊಟ್ಟಿದ್ದಾರೆ.
ಇದನ್ನೂ ಓದಿ: ರವೀಂದ್ರ ಜಡೇಜಾ ಕೈ ಬಿಟ್ಟ ಕೊಹ್ಲಿ ನಿರ್ಧಾರಕ್ಕೆ ಟ್ವಿಟರಿಗರ ಆಕ್ರೋಶ!
ಏಷ್ಯಾಕಪ್ ಟೂರ್ನಿಯಲ್ಲಿ ಇಂಜುರಿಗೆ ತುತ್ತಾದ ಹಾರ್ದಿಕ್ ಪಾಂಡ್ಯ ವಿಶ್ರಾಂತಿಗೆ ಜಾರಿದ್ದರು. ಬರೋಬ್ಬರಿ 2 ತಿಂಗಳ ಬಳಿಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡ ಹಾರ್ದಿಕ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದೀಗ ಹಾರ್ದಿಕ್ ಪಾಂಡ್ಯ ಪ್ರದರ್ಶನದಿಂದ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ಇದೆ.
ಇದನ್ನೂ ಓದಿ: ರವಿ ಶಾಸ್ತ್ರಿ ಹಾಗೂ ಕೊಹ್ಲಿಗಾಗಿ ನಿಯಮ ಉಲ್ಲಂಘಿಸಿದ ಬಿಸಿಸಿಐ!
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.