
ಮುಂಬೈ (ಡಿ.28): ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ನಾಯಕ ವಿರಾಟ್ ಕೊಹ್ಲಿ ನಡುವೆ ಮನಸ್ತಾಪ ಉಂಟಾದ ವಿಷಯ ಜಗಜ್ಜಾಹಿರುಗೊಂಡಿತ್ತು.
ಈ ವಿಷಯವನ್ನು ಕುಂಬ್ಳೆ ಸಹ ಬಹಿರಂಗಗೊಳಿಸಿದ್ದರು. ಇದೇ ಕಾರಣದಿಂದ ಕೋಚ್ ಹುದ್ದೆ ಸಹ ತೊರೆದಿದ್ದರು. ಇಬ್ಬರ ನಡುವೆ ಕಂದಕ ಉಂಟಾಗಿತ್ತು. ಇದನ್ನೆಲ್ಲಾ ಬದಿಗೊತ್ತಿ ವಿರಾಟ್ ಕೊಹ್ಲಿ, ಮಂಗಳವಾರ ಮುಂಬೈನಲ್ಲಿ ನಡೆದ ತಮ್ಮ ಮದುವೆ ಆರತಕ್ಷತೆ ಸಮಾರಂಭಕ್ಕೆ ಕುಂಬ್ಳೆಗೆ ಆಹ್ವಾನ ನೀಡಿದ್ದರು. ಈ ಆಹ್ವಾನವನ್ನು ಮನ್ನಿಸಿದ ಕುಂಬ್ಳೆ, ಪತ್ನಿ ಚೇತನಾ ಸಮೇತ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ವಿರಾಟ್- ಅನುಷ್ಕಾ ಶರ್ಮಾ ಜೋಡಿಗೆ ಶುಭ ಕೋರುವ ಮೂಲಕ ಅಚ್ಚರಿಗೆ ಕಾರಣರಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.