
ಅಹ್ಮದಾಬಾದ್[ಅ.07]: 19 ವರ್ಷದೊಳಗಿನವರ ವಿನು ಮಂಕಡ್ ಟೂರ್ನಿಯಲ್ಲಿ ಗುಜರಾತ್ ವಿರುದ್ಧ ಮಿಂಚಿನ ಪ್ರದರ್ಶನ ತೋರುವ ಮೂಲಕ ಅರ್ಜುನ್ ತೆಂಡುಲ್ಕರ್ ಮುಂಬೈ ತಂಡಕ್ಕೆ ಗೆಲುವಿನ ಸಿಹಿ ನೀಡಿದರು.
ಇಂದು ನಡೆದ ಪಂದ್ಯದಲ್ಲಿ ಗುಜರಾತ್’ನ ಪ್ರಮುಖ 5 ವಿಕೆಟ್ ಕಬಳಿಸುವ ಮೂಲಕ ಕೇವಲ 142 ರನ್’ಗಳಿಗೆ ನಿಯಂತ್ರಿಸಿದರು. ಸುಲಭ ಗುರಿ ಬೆನ್ನತ್ತಿದ ಮುಂಬೈ ತಂಡವು 9 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿತು.
ಎಡಗೈ ವೇಗಿಯಾಗಿರುವ ಅರ್ಜುನ್ 8.2 ಓವರ್’ಗಳಲ್ಲಿ ಒಂದು ಮೇಡನ್ ಸಹಿತ 30 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೊದಲು ಬಂಗಾಳ ವಿರುದ್ಧದ ಪಂದ್ಯದಲ್ಲೂ ಮೂರು ವಿಕೆಟ್ ಕಬಳಿಸಿ ಮುಂಬೈ ಗೆಲುವಿಗೆ ಕಾರಣರಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.